ಪರಮೇಶ್ವರ್‌ ಗರಂ, ರೇವಣ್ಣ ಮಾತಿಗೆ ಬ್ರೇಕ್‌


Team Udayavani, Jun 12, 2019, 3:00 AM IST

Udayavani Kannada Newspaper

ಬೆಂಗಳೂರು: ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಕಾರ್ಯವೈಖರಿಗೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪ್ರಸಂಗ ನಡೆದಿದೆ. ವಿಧಾನಸೌಧದಲ್ಲಿ ಮಂಗಳವಾರ ಲೋಕೋಪಯೋಗಿ ಇಲಾಖೆ ಪ್ರಗತಿ ಪರಿಶೀಲನೆ ಸಂದರ್ಭದಲ್ಲಿ ಪರಮೇಶ್ವರ್‌ ಅವರು, ಇಲಾಖೆಯ ಅಧಿಕಾರಿಗಳ ಕಾರ್ಯವೈಖರಿ, ಯೋಜನೆಗಳ ಅನುಷ್ಠಾನ ಕುರಿತು ಸಿಡಿಮಿಡಿಗೊಂಡರು.

ಒಂದು ಹಂತದಲ್ಲಿ ಇಲಾಖೆಯ ಯೋಜನೆಗಳ ಬಗ್ಗೆ ಅಧಿಕಾರಿಗಳು ವಿವರಣೆ ನೀಡುವ ಮೊದಲೇ ಸಚಿವ ರೇವಣ್ಣ ಅವರು ಮಧ್ಯಪ್ರವೇಶ ಮಾಡಿದರು. ಆಗ “ಅಧಿಕಾರಿಗಳು ಹೇಳಲಿ ರೇವಣ್ಣ ಅವರೇ, ಯೋಜನೆಗಳ ಸ್ಥಿತಿ ಏನಾಗಿದೆ ಎಂಬುದು ಕಣ್ಣಿಗೆ ಕಾಣುತ್ತಿದೆಯಲ್ಲವೇ? ಎಲ್ಲದಕ್ಕೂ ಮುಖ್ಯಮಂತ್ರಿ ಹೇಳಿದ ಮೇಲೆಯೇ ಮಾಡುವುದು ಎಂಬಂತಾಗಿದೆ’ ಎಂದು ರೇವಣ್ಣ ಮಾತಿಗೆ ಬ್ರೇಕ್‌ ಹಾಕಿದರು.

ಆಗ ರೇವಣ್ಣ, ವಿಷಯ ಹೆಚ್ಚು ಬೆಳೆಸಲು ಹೋಗದೆ, “ನೀವು ಸೀನಿಯರ್‌ ಬಿಡಿ ಸರ್‌’ ಎಂದು ಸುಮ್ಮನಾದರೆಂದು ಹೇಳಲಾಗಿದೆ. ನಗರದ ಎಲಿವೇಟೆಡ್‌ ಕಾರಿಡಾರ್‌ ಸೇರಿ ಬೇರೆ ಇಲಾಖೆ ವಾಪ್ತಿಯ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಗೆ ವಹಿಸಲು ಪರಮೇಶ್ವರ್‌ ಸಭೆಯಲ್ಲಿ ವಿರೋಧ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ.

ಅಧಿಕಾರಿಗಳ ತರಾಟೆ: ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪರಮೇಶ್ವರ್‌, ಯಾವುದೇ ಕಾಮಗಾರಿಗಳು ನಿಗದಿತ ಸಮಯದಲ್ಲೇ ಪೂರ್ಣವಾಗಬೇಕು. ನೀವು ಗುತ್ತಿಗೆದಾರನಿಗೆ ಮತ್ತಷ್ಟು ಕಾಲಾವಕಾಶ ಕೊಟ್ಟರೆ ಕಾಮಗಾರಿ ವೆಚ್ಚ ಕೂಡ ಕೋಟಿಗಟ್ಟಲೆ ಹೆಚ್ಚಾಗುತ್ತದೆ. ಇದಕ್ಕೆ ಯಾರು ಹೊಣೆ? ಎಂದು ಪ್ರಶ್ನಿಸಿದರು.

ನಿಗದಿತ ಅವಧಿಯಲ್ಲಿ ಯೋಜನೆ ಪೂರ್ಣ ಮಾಡಿ ಇಲ್ಲವೇ ಸರ್ಕಾರದ ಹಣ ವ್ಯರ್ಥವಾಗುತ್ತದೆ. ಶಾಲಾ ಸೇತುವೆ ನಿರ್ಮಾಣ ಅಗತ್ಯ ಇದ್ದರೆ ಅದನ್ನು ಮೊದಲೇ ಮಾಡೋಕೆ ಏನು? ಮುಖ್ಯಮಂತ್ರಿಯವರು ಹೇಳಿದ ಮೇಲೆಯೇ ಅದನ್ನು ಮಾಡ್ತೀರಲ್ಲ. ನಿಮಗೆ ಪರಿಜ್ಞಾನ ಇಲ್ಲವಾ” ಎಂದು ಗರಂ ಆದರು. ತೀರ್ಥಹಳ್ಳಿಯಲ್ಲಿ ಶಾಲಾ ಸೇತುವೆ ಮಾಡಿದ್ದಾರೆ. ಆದರೆ, ಆ ಶಾಲೆಗೆ ಸೂಕ್ತ ರಸ್ತೇನೇ ಇಲ್ಲ. ಅದು ಆ ಎಂಜಿನಿಯರ್‌ಗೆ ಯಾಕೆ ಕಾಣಿಸಿಲ್ಲ? ಇಷ್ಟು ಕಾಮನ್‌ಸೆನ್ಸ್‌ ಇಲ್ಲ ಅಂದರೆ ಹೇಗೆ? ಎಂದು ಪ್ರಶ್ನಿಸಿದರು.

ಸಿಎಂ ತಾಕೀತು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು, ಲೋಕೋಪಯೋಗಿ ಇಲಾಖೆಯಲ್ಲಿ ಟೆಂಡರ್‌ ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ. ಅವೈಜ್ಞಾನಿಕವಾಗಿ ನಡೆಯುತ್ತಿರುವ ಬಗ್ಗೆ ದೂರುಗಳು ಇವೆ. ಡಿಪಿಆರ್‌ಗಳನ್ನು ಖಾಸಗಿಯವರಿಗೆ ಕೊಡುವುದು ಅಭ್ಯಾಸ ಆಗಿಬಿಟ್ಟಿದೆ.

ಕಾಮಗಾರಿಗಳು ವೇಗಗತಿಯಲ್ಲಿ ಆಗಬೇಕು ಎಂದು ಮುಖ್ಯಮತಾಕೀತು ಮಾಡಿದರು. ಬೆಂಗಳೂರು-ಮೈಸೂರು ಹೆದ್ದಾರಿ ಶೇ.80 ರಷ್ಟು ಮುಗಿದಿದೆ. ಈಗಾಗಲೇ 21 ಸಾವಿರ ಕೋಟಿ ರೂ. ಕಾಮಗಾರಿಗಳಿಗೆ ಚಾಲನೆ ಕೊಟ್ಟಿದ್ದೇವೆ. ಕೆ. ಶಿಪ್‌ ಸೇರಿದಂತೆ ಜಿಲ್ಲಾ ರಸ್ತೆಗಳು ಬೇಗ ಬೇಗ ಆಗಬೇಕು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.