ಸಿಎಂ ತೀರ್ಮಾನದಂತೆ ಅನ್ನಭಾಗ್ಯ ಅಕ್ಕಿ ಪ್ರಮಾಣ
Team Udayavani, Aug 9, 2018, 6:00 AM IST
ಬೆಂಗಳೂರು: “ಅನ್ನಭಾಗ್ಯ ಯೋಜನೆಯಡಿ ಸದ್ಯ ಏಳು ಕೆ.ಜಿ. ಅಕ್ಕಿ ಕೊಡುತ್ತಿದ್ದೇವೆ. ಮುಂದೆ ಮುಖ್ಯಮಂತ್ರಿಯವರು ಯಾವ ರೀತಿ ತೀರ್ಮಾನ ತೆಗೆದುಕೊಳ್ಳುತ್ತಾರೋ ಅದರಂತೆ ವ್ಯವಸ್ಥೆ ಮುಂದುವರಿಯಲಿದೆ’ ಎಂದು ಆಹಾರ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, “ಅಕ್ಕಿ ಕಡಿತ ಮಾಡಿ ಎಂದು ಮುಖ್ಯಮಂತ್ರಿ ಈವರೆಗೆ ಸೂಚನೆ ಕೊಟ್ಟಿಲ್ಲ. ಏಳು ಕೆ.ಜಿ. ಅಕ್ಕಿ ನೀಡುವಂತೆ ಹೇಳಿದ್ದಕ್ಕೆ ಅದೇ ರೀತಿ ಕೊಡಲಾಗುತ್ತಿದೆ. ಅವರು ಏಳು ಕೆ.ಜಿ. ಕೊಡಿ ಅಂತಾರೋ ಅಥವಾ 5 ಕೆ.ಜಿ. ಕೊಡಿ ಅಂತಾರೋ ಅದನ್ನು ನಾವು ಪಾಲಿಸಬೇಕು. ಸಿಎಂ ಡೈರೆಕ್ಷನ್ ಓವರ್ಟೇಕ್ ಮಾಡಲಿಕ್ಕೆ’ ಆಗುತ್ತಾ ಎಂದು ಪ್ರಶ್ನಿಸಿದರು. ಅನಿಲಭಾಗ್ಯ ಯೋಜನೆಯ ಫಲಾನುಭವಿಗಳಿಗೆ ನೀಡಲು ಖರೀದಿಸಿರುವ ಸ್ಟೌಗಳನ್ನು ಟೆಂಡರ್ ಕರೆದು, ನಿಯಮಗಳ ಪ್ರಕಾರ ಖರೀದಿ ಮಾಡಲಾಗಿದೆ. ಸರ್ಕಾರಿ ಆದೇಶ ಹೊರಡಿಸಿಯೇ ಖರೀದಿ ಪ್ರಕ್ರಿಯೆ ನಡೆಸಲಾಗಿದೆ. ಗುಣಮಟ್ಟದ ಬಗ್ಗೆ ಎಂಎಸ್ಐಎಲ್ಗೆ ಪತ್ರ ಬರೆದು ವಿವರಣೆ ಕೇಳಿದ್ದೇನೆ. ಅಷ್ಟಕ್ಕೂ ಕೇಂದ್ರ ಸರ್ಕಾರದ ಉಜ್ವಲ ಯೋಜನೆಗೂ ಇದೇ ಸ್ಟೌಗಳನ್ನು ಖರೀದಿ ಮಾಡಲಾಗಿದೆ ಎಂದು ಇದೇ ವೇಳೆ ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ