ಖಾತೆ ಕ್ಯಾತೆ ಅಂತ್ಯ: ಸಿಎಂ ಭೇಟಿ ಬಳಿಕ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಆನಂದ್ ಸಿಂಗ್
Team Udayavani, Aug 24, 2021, 12:47 PM IST
ಬೆಂಗಳೂರು: ಖಾತೆ ಬದಲಾವಣೆ ವಿಚಾರವಾಗಿ ಪಟ್ಟು ಹಿಡಿದಿದ್ದ ಸಚಿವ ಆನಂದ್ ಸಿಂಗ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು. ಸಿಎಂ ಭೇಟಿಯ ಬಳಿಕ ಆನಂದ್ ಸಿಂಗ್ ತಮ್ಮ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
ಇಂದು ಬೆಳಿಗ್ಗೆ ಬಿಜೆಪಿ ಕಚೇರಿಯಲ್ಲಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನೂ ಆನಂದ್ ಸಿಂಗ್ ಭೇಟಿ ಮಾಡಿದ್ದರು.
ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ತನಗೆ ನೀಡಲಾಗಿರುವ ಪರಿಸರ ಮತ್ತು ಪ್ರವಾಸೋದ್ಯಮ ಖಾತೆಯನ್ನು ಬದಲಿಸಬೇಕು ಎಂದು ಆನಂದ್ ಸಿಂಗ್ ಪಟ್ಟು ಹಿಡಿದಿದ್ದರು. ರಾಜೀನಾಮೆ ನೀಡುವ ಹೇಳಿಕೆಯನ್ನೂ ನೀಡಿದ್ದರು. ನಂತರ ಬೊಮ್ಮಾಯಿ- ಬಿಎಸ್ ವೈ ಜೊತೆ ಮಾತುಕತೆ ನಡೆಸಿದ್ದರು. ಖಾತೆ ಹಂಚಿಕೆಯಾಗಿ ಕೆಲವು ವಾರಗಳು ಕಳೆದರೂ ಆನಂದ್ ಸಿಂಗ್ ಇನ್ನೂ ಅಧಿಕಾರ ಸ್ವೀಕರಿಸಿಲ್ಲ. ಆದರೆ ಸದ್ಯ ಆನಂದ್ ಸಿಂಗ್ ಶಾಂತರಾಗಿದ್ದಾರೆ, ಕೊಟ್ಟಿರುವ ಖಾತೆಯಲ್ಲೇ ಮುಂದುವರಿಯಲಿದ್ದಾರೆ ಎನ್ನಲಾಗಿದೆ. ಆದರೆ ಕೊನೆಯ ಪ್ರಯತ್ನವಾಗಿ ಇಂದು ಸಿಎಂ ಭೇಟಿಯಾಗಿದ್ದಾರೆ ಎನ್ನಲಾಗಿತ್ತು.
ಇದನ್ನೂ ಓದಿ:ಜಂಕ್ ಫುಡ್ ಬೇಡ, ಸಾಂಪ್ರದಾಯಿಕ ಭಾರತೀಯ ಆಹಾರ ಸೇವಿಸಿ : ವೆಂಕಯ್ಯ ನಾಯ್ಡು
ಸಿಎಂ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆನಂದ್ ಸಿಂಗ್, ಮೊದಲು ಖಾತೆಯನ್ನು ನಿರ್ವಹಿಸಿ ಎಂದು ಸಿಎಂ ಬೊಮ್ಮಾಯಿ ಮತ್ತು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಅವರ ಆದೇಶದಂತೆ ಖಾತೆಯನ್ನು ಇಂದು ವಹಿಸಿಕೊಳ್ಳುತ್ತೇನೆ. ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ