ಚಿಕ್ಕೋಡಿಗೆ “ಅಣ್ಣಾ’ ಬಾಂಡ್‌; ಸೋತ ಮೀಸೆ ಮಾವ ಹುಕ್ಕೇರಿ

ಕಮಲ ಕಮಾಲು; ಗೆಲುವಿನ ಗುಲಾಲು

Team Udayavani, May 24, 2019, 6:00 AM IST

Jolle

ಬೆಳಗಾವಿ: ಚಿಕ್ಕೋಡಿ ಕ್ಷೇತ್ರದಿಂದ ಕಾಂಗ್ರೆಸ್‌ನ ಹಿರಿಯ ಹುಲಿ ಪ್ರಕಾಶ ಹುಕ್ಕೇರಿಗೆ ತೀವ್ರ ಆಘಾತ ನೀಡಿ ಬಿಜೆಪಿಯ ಹೊಸಮುಖ ಅಣ್ಣಾಸಾಹೇಬ ಜೊಲ್ಲೆ ಮೊದಲ ಬಾರಿಗೆ ಸಂಸತ್‌ ಮೆಟ್ಟಿಲು ಹತ್ತಿದ್ದಾರೆ.

ಟಿಕೆಟ್‌ ಹಂಚಿಕೆ ವಿಷಯದಲ್ಲಿ ಸಾಕಷ್ಟು ಆತಂಕ ಎದುರಿಸಿ ಸಫಲರಾಗಿದ್ದ ಜೊಲ್ಲೆ ಚುನಾವಣೆಯ ಫಲಿತಾಂಶದಲ್ಲಿ ಒಮ್ಮೆಯೂ ಹಿಂದೆ ನೋಡಲಿಲ್ಲ. ತುರುಸಿನ ಸ್ಪರ್ಧೆ ನಡೆಯಬಹುದು ಎಂದು ನಿರೀಕ್ಷೆ ಹುಸಿ ಮಾಡಿ ಹುಕ್ಕೇರಿ ಕುಟುಂಬದ ವಿರುದ್ಧದ ವಿಧಾನಸಭೆ ಚುನಾವಣೆಯ ಸೋಲಿನ ಸೇಡು ತೀರಿಸಿಕೊಂಡರು. ಕಾಂಗ್ರೆಸ್‌ ಪಕ್ಷದಲ್ಲಿನ ಒಳಜಗಳ ಪ್ರಕಾಶ ಹುಕ್ಕೇರಿಗೆ ಭಾರಿ ಮುಳುವಾಯಿತು. ಸದಾ ವೈಯಕ್ತಿಕ ವರ್ಚಸ್ಸು ಹಾಗೂ ಹೊಂದಾಣಿಕೆ ರಾಜಕಾರಣದಿಂದ ಸುದ್ದಿ ಮಾಡುವ ಚಿಕ್ಕೋಡಿಯಲ್ಲಿ ಈ ಬಾರಿ ಹೊಂದಾಣಿಕೆಯ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅಲೆ ಕೆಲಸ ಮಾಡಿತು.

ಕ್ಷೇತ್ರದಲ್ಲಿ ಪ್ರಧಾನಿ ಮೋದಿ ಪ್ರಚಾರ ಕೂಡ ಮತದಾರರ ಮೇಲೆ ಹೆಚ್ಚಿನ ಪ್ರಭಾವ ಬೀರಿತು ಎನ್ನುವುದಕ್ಕೆ ಫಲಿತಾಂಶವೇ ಸಾಕ್ಷಿ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪ್ರಕಾಶ ಹುಕ್ಕೇರಿ ಅವರ ಪುತ್ರ ಗಣೇಶ ಹುಕ್ಕೇರಿ ವಿರುದ್ಧ ಸೋಲು ಅನುಭವಿಸಿದ್ದ ಅಣ್ಣಾಸಾಹೇಬ ಜೊಲ್ಲೆಗೆ ಲೋಕಸಭೆ ಚುನಾವಣೆಯಲ್ಲಿ ಮೋದಿ ಅಲೆಯೊಂದಿಗೆ ಕಾಂಗ್ರೆಸ್‌ ಭಿನ್ನಮತ ಸಾಕಷ್ಟು ನೆರವಿಗೆ ಬಂದಿತು. ಬಿಜೆಪಿಯವರೇ ಆದ ಮಾಜಿ ಸಂಸದ ರಮೇಶ ಕತ್ತಿ ತಮಗೆ ಟಿಕೆಟ್‌ ಸಿಗಲಿಲ್ಲ ಎಂದು ಮುನಿಸಿಕೊಂಡಿದ್ದರೂ ಮೋದಿ ಅಲೆಯ ಮುಂದೆ ಇದು ಗೌಣವಾಯಿತು.

ಕಳೆದ ಚುನಾವಣೆಯಲ್ಲಿ ಒಲ್ಲದ ಮನಸ್ಸಿನಿಂದ ಸ್ಪರ್ಧೆ ಮಾಡಿ ಬಿಜೆಪಿಯಲ್ಲಿನ ಭಿನ್ನಮತದ ಲಾಭ ಪಡೆದು ಮೊದಲ ಬಾರಿಗೆ ಸಂಸತ್‌ ಮೆಟ್ಟಲು ಹತ್ತಿದ್ದ ಪ್ರಕಾಶ ಹುಕ್ಕೇರಿ ಈ ಬಾರಿ ಪಕ್ಷದೊಳಗಿನ ಅಸಮಾಧಾನ ಹಾಗೂ ಮಾಜಿ ಶಾಸಕರ ಅಸಹಕಾರದಿಂದ ಸೋಲಿನ ಪೆಟ್ಟು ತಿಂದರು.

2014ರ ಚುನಾವಣೆಯಲ್ಲಿ ತಮ್ಮ ವೈಯಕ್ತಿಕ ವರ್ಚಸ್ಸಿನ ಮೇಲೆ ಜಯ ಸಾಧಿಸಿದ್ದ ಪ್ರಕಾಶ ಹುಕ್ಕೇರಿಗೆ ಈ ಬಾರಿ ಅದು ನೆರವಿಗೆ ಬರಲಿಲ್ಲ. ರಾಹುಲ್‌ ಗಾಂಧಿ ಇಲ್ಲಿಗೆ ಬಂದು ಪ್ರಚಾರ ಮಾಡಿದರೂ ಪರಿಣಾಮ ಬೀರಲಿಲ್ಲ. ಜೊತೆಗೆ ಕಾಂಗ್ರೆಸ್‌ನ ಪ್ರಭಾವಿ ನಾಯಕ ರಮೇಶ ಜಾರಕಿಹೊಳಿ ಸಹ ಇಲ್ಲಿ ಪರೋಕ್ಷವಾಗಿ ಬಿಜೆಪಿ ಅಭ್ಯರ್ಥಿ ಪರ ಕೆಲಸ ಮಾಡಿದ್ದು ಪ್ರಕಾಶ ಹುಕ್ಕೇರಿಗೆ ಮುಳುವಾಯಿತು. ಕಳೆದ ಚುನಾವಣೆಯಲ್ಲಿ 3003 ಅಲ್ಪಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ರಮೇಶ ಕತ್ತಿ ಅವರನ್ನು ಸೋಲಿಸಿದ್ದ ಪ್ರಕಾಶ ಹುಕ್ಕೇರಿ ಈ ಬಾರಿ ಜೊಲ್ಲೆ ವಿರುದ್ಧ ಭಾರೀ ಅಂತರದಿಂದ ಸೋಲು ಅನುಭವಿಸಿದರು.

ಕ್ಷೇತ್ರದ ಜನರ ಆಶೀರ್ವಾದಕ್ಕೆ ನಾನು ಚಿರಋಣಿ. ಸೋತವರು ಗೆಲ್ಲಲೇಬೇಕು. ಅದೇ ರೀತಿ ಗೆದ್ದವರು ಸೋಲಲೇಬೇಕು. ನನ್ನ ಗೆಲುವಿಗೆ ಎಲ್ಲರ ಶ್ರಮ ಕಾರಣ.
– ಅಣ್ಣಾಸಾಹೇಬ ಜೊಲ್ಲೆ, ಚಿಕ್ಕೋಡಿ ಬಿಜೆಪಿ ಅಭ್ಯರ್ಥಿ

ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಚಿಕ್ಕೋಡಿ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ತಂದು ಅಭಿವೃದಿಟಛಿ ಮಾಡಿದ್ದರಿಂದ ನಾನು ಜಯದ ನಿರೀಕ್ಷೆ ಮಾಡಿದ್ದೆ. ಒಟ್ಟಾರೆ ಇಂದು ಬಂದ ಮತದಾರರ ತೀರ್ಪಿಗೆ ನಾನು ಬದ್ಧ.
– ಪ್ರಕಾಶ ಹುಕ್ಕೇರಿ, ಕಾಂಗ್ರೆಸ್‌ ಪರಾಜಿತ
ಅಭ್ಯರ್ಥಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.