ಬೆಂಗಳೂರಿಗೆ ಸೋಂಕಿತ ಸಂಖ್ಯೆ 653ರ ಸಂಕಷ್ಟ: ರಾಜ್ಯದಲ್ಲಿ ಮತ್ತೆ 23 ಕೋವಿಡ್-19 ಸೋಂಕಿತರು
Team Udayavani, May 16, 2020, 1:21 PM IST
ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತೆ 23 ಹೊಸ ಕೋವಿಡ್-19 ಪ್ರಕರಣಗಳು ದೃಢವಾಗಿದೆ. ಬೆಂಗಳೂರು ನಗರದಲ್ಲಿ ಅತೀ ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಿದೆ. ಸೋಂಕಿತ ಸಂಖ್ಯೆ 653ರ ದ್ವಿತೀಯ ಸಂಪರ್ಕದಿಂದ ನಗರದಲ್ಲಿ ಸೋಂಕು ಪ್ರಕರಣಗಳು ವರದಿಯಾಗಿದೆ.
ಬೆಂಗಳೂರಿನಲ್ಲಿ 14, ಹಾಸನದಲ್ಲಿ ಮೂರು ಮತ್ತು, ಉಡುಪಿ, ಮಂಡ್ಯ, ಧಾರವಾಡ, ದಾವಣಗೆರೆ, ಬಳ್ಳಾರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ತಲಾ ಒಂದು ಪ್ರಕರಣ ದೃಢವಾಗಿದೆ.
ಬೆಂಗಳೂರಿನ ಎಲ್ಲಾ 14 ಪ್ರಕರಣಗಳು ಸೋಂಕಿತ ಸಂಖ್ಯೆ 653ರ ದ್ವಿತೀಯ ಸಂಪರ್ಕದಿಂದಲೇ ದೃಢವಾಗಿದೆ. ಹಾಸನದಲ್ಲಿ ಮೂರು ಪ್ರಕರಣ ದೃಢವಾಗಿದ್ದು ಮೂರು ಪ್ರಕರಣಗಳು ಮುಂಬೈಯಿಂದ ಬಂದವರಿಗೆ ಸೋಂಕು ತಾಗಿದೆ.
ಬಾಗಲಕೋಟೆ, ಧಾರವಾಡದಲ್ಲೂ ತಲಾ ಒಂದು ಪ್ರಕರಣಗಳು ಮುಂಬೈ ಪ್ರಯಾಣಿಕರಿಗೆ ದೃಢವಾಗಿದೆ. ಉಡುಪಿಯ ಒಂದು ವರ್ಷದ ಮಗುವಿಗೆ ಸೋಂಕು ದೃಢವಾಗಿದ್ದು, ದುಬೈನಿಂದ ಪ್ರಯಾಣದ ಹಿನ್ನಲೆಯಲ್ಲಿ ಸೋಂಕು ತಾಗಿತ್ತು.
ದಾವಣಗೆರೆಯಲ್ಲಿ ಸೋಂಕಿತ ಸಂಖ್ಯೆ 533ರ ಸಂಪರ್ಕದಿಂದ 65 ವರ್ಷದ ವೃದ್ಧೆಗೆ ಸೋಂಕು ತಾಗಿದೆ, ಬಳ್ಳಾರಿಯ 46 ವರ್ಷದ ವ್ಯಕ್ತಿ ಹೈದರಾಬಾದ್ ನಿಂದ ಬಂದಿದ್ದು ಸೋಂಕು ದೃಢವಾಗಿದೆ. ಬೆಂಗಳೂರು ಮತ್ತು ಕೋಲಾರಕ್ಕೆ ಪ್ರಯಾಣ ಮಾಡಿದ್ದ ಮಂಡ್ಯದ 40 ವರ್ಷದ ವ್ಯಕ್ತಿಗೆ ಸೋಂಕು ದೃಢವಾಗಿದೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1079ಕ್ಕೆ ಏರಿಕೆಯಾಗಿದೆ. ಇದರಲ್ಲಿ ಒಟ್ಟು 494 ಜನರು ಗುಣಮುಖರಾಗಿದ್ದು, 36 ಜನರು ಸೋಂಕಿನ ಕಾರಣದಿಂದ ಮೃತಪಟ್ಟಿದ್ದಾರೆ. ಓರ್ವ ಕೋವಿಡ್ ಸೋಂಕಿತ ವ್ಯಕ್ತಿ, ಕೋವಿಡ್-19 ಅಲ್ಲದ ಕಾರಣದಿಂದ ಮೃತಪಟ್ಟಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ