ಮತ್ತೆ ಕರ್ನಾಟಕ ಬಂದ್! ಮತ್ತೊಂದು ಬಂದ್ ಗೆ ಕರೆಕೊಟ್ಟ ರಾಜ್ಯ ರೈತ ಸಂಘ
Team Udayavani, Dec 6, 2020, 1:18 PM IST
ಬೆಂಗಳೂರು: ಮರಾಠಾ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಿರುವ ನಿರ್ಣಯ ವಿರೋಧಿಸಿ ಕರೆ ನೀಡಿದ್ದ ಬಂದ್ ಮುಗಿದು ದಿನ ಕಳೆಯುದರೊಳಗೆ ಮತ್ತೊಂದು ಬಂದ್ ಗೆ ಕರೆ ನೀಡಲಾಗಿದೆ. ಡಿ 8ರಂದು ರಾಜ್ಯದಲ್ಲಿ ಬಂದ್ ಆಚರಿಸಲು ಕರೆ ನೀಡಲಾಗಿದೆ.
ರಾಜ್ಯ ರೈತ ಸಂಘ, ಹಸಿರು ಸೇನೆ ನೇತೃತ್ವದಲ್ಲಿ ಬಂದ್ ಗೆ ಕರೆ ನೀಡಲಾಗಿದೆ. ಸರ್ಕಾರ ರೈತ ವಿರೋಧಿ ಮಸೂದೆಯನ್ನು ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತಂದಿದೆ. ಹೊಸ ಕೃಷಿ ಸುಧಾರಣಾ ಕಾನೂನುಗಳ ರೈತ ವಿರೋಧಿ ಮಸೂದೆ ವಿರೋಧಿಸಿ ಭಾರತ ಬಂದ್ ಮಾಡಲಾಗುತ್ತಿದೆ. ರಾಜ್ಯದಲ್ಲೂ ಡಿ.8ರಂದು ಬಂದ್ ಮಾಡಲಿದ್ದೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ಡಿ.8ರಂದು ರಾಜ್ಯ ಬಂದ್, 9ರಂದು ಬೆಂಗಳೂರಿನಲ್ಲಿ ಬಾರುಕೋಲು ಚಳವಳಿ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ಹೇಳಿದರು.