ಇನ್ನೂ ಸಿಕ್ಕಿಲ್ಲ ಸೂರು; 3 ವರ್ಷಗಳ ಹಿಂದಿನ ಸಂತ್ರಸ್ತರಿಗೆ ಸಿಗದ ಗೃಹ ಸೌಭಾಗ್ಯ

ಸದ್ಯವೇ ಇನ್ನೊಂದು ಮಳೆಗಾಲ; ಕಾಲಮಿತಿಯಲ್ಲಿ ನಡೆಯುತ್ತಿಲ್ಲ ಮನೆಗಳ ನಿರ್ಮಾಣ

Team Udayavani, Jun 5, 2022, 7:25 AM IST

thumb-1

ಬೆಂಗಳೂರು: ರಾಜ್ಯಕ್ಕೆ ಮುಂಗಾರು ಪ್ರವೇಶ ಪಡೆದು ಮಳೆಗಾಲ ಪ್ರಾರಂಭವಾಗುತ್ತಿದ್ದು, ಕರಾವಳಿ, ಮಲೆನಾಡು ಮತ್ತು ಒಳನಾಡಿನ ಜನರಲ್ಲಿ ನೆರೆ-ಪ್ರವಾಹದ ಭೀತಿ ಸಹಜ. ಆದರೆ ಕಳೆದ 3 ವರ್ಷಗಳಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡು ಸಂತ್ರಸ್ತರಾದ ಲಕ್ಷಾಂತರ ಮಂದಿಯ ಪೈಕಿ ಹಲವರಿಗೆ ಇನ್ನೂ ಸರಕಾರದಿಂದ ಪುನರ್ವಸತಿ ಲಭಿಸಿಲ್ಲ.

ಜಿಲ್ಲಾಡಳಿತದ ಮೂಲಕ ಆಯಾ ಜಿಲ್ಲೆಗಳಲ್ಲಿ ನೆರೆಯಿಂದ ಸಂಪೂರ್ಣ ಹಾನಿಗೊಂಡ, ಭಾಗಶಃ ಮತ್ತು ಅಲ್ಪಸ್ವಲ್ಪ ಹಾನಿಗೊಳಗಾದ ಮನೆಗಳೆಂಬ ವರ್ಗೀಕರಣ ಮಾಡಿ ಸಂತ್ರಸ್ತರನ್ನು ಗುರುತಿಸ ಲಾಗುತ್ತಿದೆ. ಕಳೆದ ಮೂರು ಮಳೆಗಾಲಗಳಲ್ಲಿ ಪರಿಹಾರಕ್ಕೆ ಅರ್ಹರಾದ ಒಟ್ಟು 54,401 ಫ‌ಲಾನುಭವಿಗಳಿಗೆ ನಿಗಮದ ನೆರೆ ಸಂತ್ರಸ್ತರ ಪುನರ್ವಸತಿ ಯೋಜನೆಯಡಿ ಮನೆ ನಿರ್ಮಿಸಿ ಕೊಡುವ ಕಾರ್ಯಕ್ಕೆ ಇನ್ನೂ ಚಾಲನೆ ದೊರೆತಿಲ್ಲ.

2019ರ 7,164, 2020ರ 26,061 ಮತ್ತು 2021ರ 21,176 ಮನೆ ನಿರ್ಮಾಣ ಬಾಕಿ ಉಳಿ ದಿದೆ. ವಸತಿ ಇಲಾಖೆಯ ಈ ಅಂಕಿಅಂಶ ನೋಡಿದರೆ ಪ್ರವಾಹದಿಂದ ಸೂರು ಕಳೆದುಕೊಳ್ಳುವ ಬಡವರ್ಗ ದವರಿಗೆ ಪುನರ್ವಸತಿ ಕಲ್ಪಿಸುವ ಕಾರ್ಯ ಕಾಲಮಿತಿ ಯೊಳಗೆ ಆಗುತ್ತಿಲ್ಲ ಎನ್ನುವುದು ಸ್ಪಷ್ಟವಾಗುತ್ತದೆ.

2019ರ ಕಥೆ
2019ರಲ್ಲಿ ಅತಿವೃಷ್ಟಿ ಮತ್ತು ಮಹಾರಾಷ್ಟ್ರದ ಅಣೆಕಟ್ಟುಗಳಿಂದ ರಾಜ್ಯಕ್ಕೆ ಹರಿದು ಬಂದ ಪ್ರವಾಹದಿಂದಾಗಿ ನೆರೆ ಹಾನಿಯಾಗಿತ್ತು. ಆಗ ಸರಕಾರ ಒಟ್ಟು 29 ಜಿಲ್ಲೆಗಳ 103 ತಾಲೂಕುಗಳನ್ನು ಪ್ರವಾಹಪೀಡಿತ ಎಂದು ಘೋಷಿಸಿತ್ತು. ರಾಜೀವ್‌ ಗಾಂಧಿ ವಸತಿ ನಿಗಮದಡಿ ಒಟ್ಟು 1,37,336 ಮಂದಿಯನ್ನು ನೆರೆ ಸಂತ್ರಸ್ತರೆಂದು ಗುರುತಿಸಿ ಪುನರ್ವಸತಿಗೆ ಕ್ರಮ ತೆಗೆದುಕೊಳ್ಳಲಾಯಿತು. ಆಗ ಸಂತ್ರಸ್ತರಾದ ಒಟ್ಟು 1.37 ಲಕ್ಷ ಮಂದಿಯ ಪೈಕಿ ಸುಮಾರು 1,12,972 ಮಂದಿಗೆ ಪೂರ್ಣ ಪುನರ್ವಸತಿ ಲಭಿಸಿದೆ. 2019ರ ಸುಮಾರು 10 ಸಾವಿರ ಮನೆಗಳ ನಿರ್ಮಾಣ ಕಾರ್ಯ ಇನ್ನೂ ಪ್ರಗತಿ ಹಂತದಲ್ಲಿದ್ದು, ಒಟ್ಟು 7,164 ಮನೆಗಳ ನಿರ್ಮಾಣ ಕಾರ್ಯವೇ ಪ್ರಾರಂಭವಾಗಿಲ್ಲ.

2020, 21ರ ವ್ಯಥೆ
2020ರಲ್ಲಿ 39,172 ಮಂದಿ ನೆರೆ ಸಂತ್ರಸ್ತರನ್ನು ಗುರುತಿಸಲಾಗಿದ್ದು, 6,556 ಮಂದಿಗಷ್ಟೇ ಪುನರ್ವಸತಿ ಲಭಿಸಿದೆ. 4,910 ಮಂದಿಯ ಪುನರ್ವಸತಿ ಪ್ರಗತಿಯಲ್ಲಿದ್ದರೆ, 26,061 ಸಂತ್ರಸ್ತರ ಮನೆ ನಿರ್ಮಾಣ ಆರಂಭವಾಗಿಲ್ಲ. 2021ರಲ್ಲಿಯೂ 25,529 ನೆರೆ ಸಂತ್ರಸ್ತರನ್ನು ಪುನರ್ವಸತಿಗೆ ಅನುಮೋದಿಸಲಾಗಿದ್ದು, ಕೇವಲ 114 ಮನೆಗಳನ್ನಷ್ಟೇ ದುರಸ್ತಿಗೊಳಿಸಲಾಗಿದೆ. 3,774 ಮನೆ ಪ್ರಗತಿ ಹಂತದಲ್ಲಿದ್ದರೆ, 21,176 ಮನೆಗಳ ದುರಸ್ತಿ ಕಾರ್ಯ ಕಡತದಲ್ಲೇ ಇದೆ. ಇನ್ನೊಂದೆಡೆ, ಸರಕಾರದ ಮಾಹಿತಿಯಂತೆ 2019 ಮತ್ತು 20ರಲ್ಲಿ ಒಟ್ಟು 1,65,032 ಮನೆಗಳಿಗೆ ವಿವಿಧ ಹಂತಗಳಲ್ಲಿ ಹಣ ಪಾವತಿ ಮಾಡಲಾಗಿದೆ.

ಹಣದ ಕೊರತೆ
3 ವರ್ಷಗಳಲ್ಲಿ ನೆರೆ ಸಂತ್ರಸ್ತರ ಪುನರ್ವಸತಿ ಯೋಜನೆಯಡಿ ಒಟ್ಟು 2.29 ಲಕ್ಷ ಮಂದಿಯ ಪುನರ್ವಸತಿಗೆ 3,884.17 ಕೋ.ರೂ. ಅನುದಾನ ಅಂದಾಜಿಸಲಾಗಿತ್ತು. ಮೂರು ವರ್ಷಗಳಲ್ಲಿ ಫ‌ಲಾನುಭವಿಗಳ ಖಾತೆಗಳಿಗೆ ಹಂತಹಂತವಾಗಿ ಸರಕಾರದಿಂದ ಹಣ ಬಿಡುಗಡೆ ಮಾಡಲಾಗುತ್ತಿದೆ. 2019ರಲ್ಲಿ ಕಾಮಗಾರಿ ಪ್ರಾರಂಭಗೊಂಡ ಹಲವು ಮನೆಗಳಿಗೆ ಇನ್ನೂ ಒಂದೆರಡು ಕಂತು ಬಿಡುಗಡೆ ಬಾಕಿ ಇರುವ ಪ್ರಕರಣಗಳಿವೆ.

ಸರಕಾರದಿಂದ ಮೂರು ವರ್ಷಗಳಲ್ಲಿ ಬಿಡುಗಡೆಯಾದ ಅನುದಾನ 2074.36 ಕೋಟಿ ರೂ. ಈಗ ಮತ್ತೂಂದು ಮಳೆಗಾಲ ಪ್ರಾರಂಭವಾಗುತ್ತಿದ್ದರೂ ಈ ಹಿಂದಿನ ನೆರೆ ಸಂತ್ರಸ್ತರ ಪುನರ್ವಸತಿಗೆ 1,809.81 ಕೋಟಿ ರೂ. ಬೇಕಿದೆ. ರಾಜೀವ್‌ ಗಾಂಧಿ ವಸತಿ ನಿಗಮ 1,958.53 ಕೋ.ರೂ. ಮತ್ತು ಆಯಾ ಜಿಲ್ಲಾಡಳಿತಗಳು 400 ಕೋಟಿ ರೂ. ಖರ್ಚು ಮಾಡಿದೆ. 2019ರ ಅನಂತರದ ನೆರೆ ಪುನರ್ವಸತಿಗೆ 1,500 ಕೋ.ರೂ.ಗಳಿಗೂ ಅಧಿಕ ಮೊತ್ತ ಅಗತ್ಯವಿದ್ದರೆ, ವಸತಿ ನಿಗಮದಲ್ಲಿ ಲಭ್ಯವಿರುವ ಮೊತ್ತ 115.83 ಕೋ.ರೂ. ಮಾತ್ರ.

ಸರಕಾರದ ಮಾನದಂಡಗಳಂತೆ, ಕಳೆದ ಮೂರು ಮಳೆಗಾಲಗಳಲ್ಲಿ ನೆರೆಯಿಂದಾಗಿ ಒಟ್ಟು 2,03,869 ಮಂದಿ ಮನೆಗಳನ್ನು ಕಳೆದುಕೊಂಡು ನೆರೆ ಸಂತ್ರಸ್ತರೆನಿಸಿಕೊಂಡಿದ್ದಾರೆ. 2019ರಿಂದ 2021ರ ವರೆಗೆ ನೆರೆ ಸಂತ್ರಸ್ತರಾದ ಕುಟುಂಬಗಳಿಗೆ ರಾಜೀವ ಗಾಂಧಿ ವಸತಿ ನಿಗಮದ ನೆರೆ ಸಂತ್ರಸ್ತರ ಪುನರ್ವಸತಿ ಯೋಜನೆಯಡಿ ಮನೆಗಳನ್ನು ನಿರ್ಮಿಸಿ ಕೊಡುವ ಕಾರ್ಯ ಪ್ರಗತಿಯಲ್ಲಿದೆ.

ನೆರೆ ಸಂತ್ರಸ್ತರ ಪುನರ್ವಸತಿ
ಯೋಜನೆಯಡಿ ಮನೆಗಳ ನಿರ್ಮಾಣಕ್ಕೆ ಫ‌ಲಾನುಭವಿಗಳ ಖಾತೆಗಳಿಗೆ ಹಂತಹಂತವಾಗಿ ಹಣ ಬಿಡುಗಡೆ ಮಾಡಲಾಗುತ್ತಿದೆ. ಈ ಕುರಿತು ಆಗಾಗ ಪ್ರಗತಿ ಪರಿಶೀಲನೆ ನಡೆಯುತ್ತಿದ್ದು, ವಿಳಂಬವಾದ ಕಡೆ ಅಗತ್ಯ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳ ಲಾಗುವುದು. ಮುಖ್ಯಮಂತ್ರಿಗಳು ಕೂಡ ಆದ್ಯತೆ ಮೇರೆಗೆ ನೆರೆ ಸಂತ್ರಸ್ತರಿಗೆ ಮನೆಗಳನ್ನು ನಿರ್ಮಿಸುವ ಕಾರ್ಯ ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ.
-ಡಾ| ಎಸ್‌. ಬಸವರಾಜು
ವ್ಯವಸ್ಥಾಪಕ ನಿರ್ದೇಶಕರು, ರಾಜೀವ ಗಾಂಧಿ ವಸತಿ ನಿಗಮ

-ಸುರೇಶ್‌ ಪುದುವೆಟ್ಟು

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.