ಸರ್ಜಿಕಲ್ ದಾಳಿ ಮೂಲಕ ಪಾಕ್ಗೆ ತಕ್ಕ ಉತ್ತರ
Team Udayavani, May 5, 2019, 3:01 AM IST
ಗಂಗಾವತಿ: ಭಾರತ, ಶ್ರೀಲಂಕಾ ಸೇರಿ ದಕ್ಷಿಣ ಏಷ್ಯಾದಲ್ಲಿ ಅಶಾಂತಿ ಸೃಷ್ಟಿಸುತ್ತಿರುವವರಿಗೆ ಪಾಕಿಸ್ತಾನದಲ್ಲಿ ನೆಲೆ ಸಿಗುತ್ತಿರುವುದು ಘೋರ ಅನ್ಯಾಯ. ಸರ್ಜಿಕಲ್ ದಾಳಿ ಮೂಲಕ ಭಾರತದ ಸೈನಿಕರು ತಕ್ಕ ಉತ್ತರ ನೀಡಿದ್ದಾರೆ ಎಂದು ಪೇಜಾವರ ಶ್ರೀಗಳು ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾ ಗಾಂಧಿ ಹಾಗೂ ಅಟಲ್ ಬಿಹಾರಿ ವಾಜಪೇಯಿ ಅವರು ಸೈನಿಕ ದಾಳಿ ಮೂಲಕ ಪಾಕಿಸ್ತಾನಕ್ಕೆ ಬುದ್ಧಿ ಕಲಿಸಿದ್ದರೂ ಸುಧಾರಿಸಿಲ್ಲ. ಸರ್ಜಿಕಲ್ ದಾಳಿ ನಡೆಸಿದ ಸೈನಿಕರು ಮತ್ತು ಪ್ರಧಾನಿ ಮೋದಿಯವರು ಅಭಿನಂದನಾರ್ಹರು.
ಭಾರತ ದೈವಿಭೂಮಿಯಾಗಿದ್ದು, ಇಲ್ಲಿಯ ಪ್ರಜೆಗಳು ಧರ್ಮ ಮಾರ್ಗದಲ್ಲಿ ನಡೆಯುವವರು. ಇಡೀ ಜಗತ್ತು ಸುಖ-ಶಾಂತಿಯಿಂದ ಇರಬೇಕೆನ್ನುವ ಮನೋಭಾವದವರು. ಶ್ರೀಲಂಕಾದಲ್ಲಿ ಜರುಗಿದ ಚರ್ಚ್ ದಾಳಿ ಖಂಡನೀಯ. ಇಂತಹ ಕೃತ್ಯಕ್ಕೆ ಕಾರಣರಾದವರನ್ನು ಭಾರತ ಸೇರಿ ವಿಶ್ವದ ರಾಷ್ಟ್ರಗಳು ಸುಮ್ಮನೆ ಬಿಡಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ