ಕಾಂಗ್ರೆಸ್‌, ಬಿಜೆಪಿಗೆ ಒಳ ಏಟಿನ ಆತಂಕ

ಪರಿಷತ್‌ ಚುನಾವಣೆ: ಆಂತರಿಕ ಸಂಘರ್ಷದ ಹೊಗೆ ; ಜೆಡಿಎಸ್‌ ನಡೆಯೂ ಕುತೂಹಲ

Team Udayavani, Nov 25, 2021, 7:10 AM IST

ಕಾಂಗ್ರೆಸ್‌, ಬಿಜೆಪಿಗೆ ಒಳ ಏಟಿನ ಆತಂಕ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆ ಟಿಕೆಟ್‌ ಹಂಚಿಕೆಯಲ್ಲಿನ ಅಸಮಾಧಾನ, ಮೂರನೇ ಅಭ್ಯರ್ಥಿ ಸ್ಪರ್ಧೆ, ಅನ್ಯ ಪಕ್ಷ ದವರ ಕರೆತಂದು ಟಿಕೆಟ್‌ ನೀಡಿರುವುದರಿಂದ ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿಗೆ “ಒಳಏಟು’ ಆತಂಕ ಪ್ರಾರಂಭವಾಗಿದೆ.

ಬೆಳಗಾವಿ ಕ್ಷೇತ್ರ ದಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ಯಾಗಿ ವಿಧಾನ ಪರಿಷತ್‌ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಸ್ಪರ್ಧಿಸಿದ್ದರೂ ಲಖನ್‌ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದು ಬಿಜೆಪಿ ನಾಯಕರ ಆತಂಕಕ್ಕೆ ಕಾರಣವಾಗಿದೆ.

ಒಂದೊಮ್ಮೆ ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಟಾಳ್ಕರ್‌ ಹಾಗೂ ರಮೇಶ್‌ ಜಾರಕಿಹೊಳಿ ನಡುವಿನ ಸಂಘರ್ಷದಲ್ಲಿ ಜಾತಿ ಪ್ರಾಮುಖ್ಯ ಪಡೆದರೆ ಫ‌ಲಿತಾಂಶ ಬುಡಮೇಲು ಆಗಬಹುದು. ಲಖನ್‌ ಜಾರಕಿಹೊಳಿ ಪಕ್ಷೇತರರಾಗಿ ಸ್ಪರ್ಧಿಸದಂತೆ ರಮೇಶ್‌ ಜಾರಕಿಹೊಳಿ ತಡೆಯಬಹುದಿತ್ತು ಎಂದು ಅಲ್ಲಿನ ಮುಖಂಡರು ಪಕ್ಷದ ನಾಯಕರ ಮುಂದೆ ಪ್ರಸ್ತಾವಿಸಿದ್ದಾರೆ ಎಂದು ಹೇಳಲಾಗಿದೆ.

ಅದೇ ರೀತಿ ಮಂಡ್ಯದಲ್ಲಿ ಕಾಂಗ್ರೆಸ್‌ ಟಿಕೆಟ್‌ ಸಿಗಲು ಬಿಜೆಪಿಯ ಹಿರಿಯ ನಾಯಕ ಎಸ್‌.ಎಂ. ಕೃಷ್ಣ ಸೂಚನೆ ನೀಡಿದ್ದರು ಎಂದು ದಿನೇಶ್‌ ಗೂಳಿಗೌಡ ತಮಗೆ ಹೇಳಿದ್ದಾಗಿ ಖುದ್ದು ಸಚಿವ ಎಸ್‌.ಟಿ. ಸೋಮಶೇಖರ್‌ ಅವರೇ ಹೇಳಿರುವುದರಿಂದ ಮಂಡ್ಯ ಅಧಿಕೃತ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಆತಂಕ ಕ್ಕೊಳಗಾಗಿದ್ದಾರೆ ಎಂದು ಹೇಳಲಾಗಿದೆ.

ಕಾಂಗ್ರೆಸ್‌ಗೆ ಆತಂಕ ಹೆಚ್ಚು
ಈ ಮಧ್ಯೆ ಆಡಳಿತ ಪಕ್ಷ ಬಿಜೆಪಿಗೆ ಹೋಲಿಸಿದರೆ ವಿಪಕ್ಷ ಕಾಂಗ್ರೆಸ್‌ನಲ್ಲಿಯೇ ಆಂತರಿಕ ಹೊಡೆತ ಹೆಚ್ಚಾಗುವ ಭೀತಿ ನಾಯಕರಲ್ಲಿ ಮೂಡಿದೆ. ಮೇಲ್ಮನೆ ವಿಪಕ್ಷ ನಾಯಕ ಎಸ್‌.ಆರ್‌. ಪಾಟೀಲ್‌ ಅವರಿಗೆ ಟಿಕೆಟ್‌ ತಪ್ಪಿರುವುದರಿಂದ ಬೆಂಬಲಿಗರು ಚುನಾವಣೆಯಲ್ಲಿ ಯಾವ ರೀತಿ ಕಾರ್ಯ ನಿರ್ವಹಿಸುತ್ತಾರೆ ಎನ್ನುವುದು ಕುತೂಹಲ ಮೂಡಿಸಿದೆ.

ಬೆಳಗಾವಿಯಲ್ಲಿ ರಮೇಶ್‌ ಜಾರಕಿಹೊಳಿ ವಿರುದ್ಧ ಜಿದ್ದಿಗೆ ಬಿದ್ದು ಲಕ್ಷ್ಮೀ ಹೆಬ್ಟಾಳ್ಕರ್‌ ಸೋದರನಿಗೆ ಟಿಕೆಟ್‌ ನೀಡಲಾಗಿದೆ. ಅಲ್ಲಿ ಬೇರೆ ಯಾರೇ ಅಭ್ಯರ್ಥಿಯಾಗಿದ್ದರೂ ಲಖನ್‌ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರಲಿಲ್ಲ. ಈಗ 3 ಅಭ್ಯರ್ಥಿಗಳು ಕಣದಲ್ಲಿರುವುದರಿಂದ ಸವಾಲು ಎದುರಿಸಬೇಕಾಗಿದೆ.

ಧಾರವಾಡದಲ್ಲಿ ಹಿರಿಯ ನಾಯಕ ಎ.ಎಂ. ಹಿಂಡಸಗೇರಿಗೆ ಟಿಕೆಟ್‌ ತಪ್ಪಿಸಿ, ಡಿ.ಕೆ. ಶಿವಕುಮಾರ್‌ ಹಠಕ್ಕೆ ಬಿದ್ದು ಕೆಪಿಸಿಸಿ ಕಾರ್ಯಾ ಧ್ಯಕ್ಷ ಸಲೀಂ ಅಹಮದ್‌ಗೆ ಟಿಕೆಟ್‌ ಕೊಡಿಸಿದ್ದು, ಸ್ಥಳೀಯ ನಾಯಕರ ನಡೆ ಕಾಂಗ್ರೆಸ್‌ಗೆ ಆಂತರಿಕ ಹೊಡೆತದ ಆತಂಕ ಸೃಷ್ಟಿಸಿದೆ.

ಕೋಲಾರದಲ್ಲಿ ಕೇಂದ್ರದ ಮಾಜಿ ಸಚಿವ ಮುನಿಯಪ್ಪ ಅವರ ವಿರೋಧದ ನಡುವೆ ಅನಿಲ್‌ ಕುಮಾರ್‌ಗೆ ಟಿಕೆಟ್‌ ನೀಡಲಾಗಿದ್ದು, ಮುನಿಯಪ್ಪ ಬೇಸರಗೊಂಡಿದ್ದಾರೆ. ಮುನಿಯಪ್ಪ ತಟಸ್ಥರಾದರೆ ಪಕ್ಷದ ಅಭ್ಯರ್ಥಿ ಗೆಲುವಿಗೆ ಕಷ್ಟವಾಗಬಹುದು ಎಂದು ಹೇಳಲಾಗಿದೆ.

ಕೊಡಗಿನಲ್ಲಿ ಸ್ಥಳೀಯ ಟಿಕೆಟ್‌ ಆಕಾಂಕ್ಷಿ ಯನ್ನು ನಿರ್ಲಕ್ಷಿಸಿದ ಕಾಂಗ್ರೆಸ್‌, ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಎ. ಮಂಜು ಪುತ್ರ ಮಂಥರ ಗೌಡಗೆ ಟಿಕೆಟ್‌ ನೀಡಿರುವುದು ಕಾಂಗ್ರೆಸ್‌ನಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಬಳ್ಳಾರಿಯಲ್ಲಿ ಸ್ಥಳೀಯ ಶಾಸಕರ ವಿರೋಧದ ನಡುವೆ ಕೆ.ಸಿ. ಕೊಂಡಯ್ಯರಿಗೆ ಟಿಕೆಟ್‌ ನೀಡಿದ್ದು, ಒಳ ಹೊಡೆತದ ಭಯ ಹೆಚ್ಚಾಗುವಂತೆ ಮಾಡಿದೆ.

ಬೆಳಗಾವಿಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಲಖನ್‌ ಜಾರಕಿಹೊಳಿ ಸ್ಪರ್ಧಿಸಿರುವುದರಿಂದ ಬಿಜೆಪಿಗೆ ಯಾವುದೇ ಸಮಸ್ಯೆ ಇಲ್ಲ. ಅವರು ಪಕ್ಷೇತರರಾಗಿ ಸ್ಪರ್ಧಿಸುತ್ತಿದ್ದಾರೆ.
– ಬಸವರಾಜ ಬೊಮ್ಮಾಯಿ, ಸಿಎಂ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.