ಇ-ಪಾವತಿ ವಿರೋಧಿಸಿ ರಾಜ್ಯಾದ್ಯಂತ ಎಪಿಎಂಸಿ ಬಂದ್
Team Udayavani, Aug 24, 2017, 9:00 AM IST
ಬೆಂಗಳೂರು/ಹುಬ್ಬಳ್ಳಿ: ಇ-ಪಾವತಿ ರದಟಛಿತಿಗೆ ಒತ್ತಾಯಿಸಿ ಎಪಿಎಂಸಿ ವ್ಯಾಪಾರಸ್ಥರ ಸಂಘದಿಂದ ಬುಧವಾರ ರಾಜ್ಯಾದ್ಯಂತ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ
ನೇತೃತ್ವದಲ್ಲಿ ನಡೆದ ಬಂದ್ ವೇಳೆ ಎಪಿಎಂಸಿ ಪ್ರಾಂಗಣದಲ್ಲಿನ ತೆರೆದಿದ್ದ ಅಂಗಡಿಗಳನ್ನು ಬಂದ್ ಮಾಡಿಸಲಾಯಿತು.
ಪ್ರತಿಭಟನಾಕಾರರು ತೋಳಿಗೆ ಕಪ್ಪು ಪಟ್ಟಿ ಧರಿಸಿ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿದರು. ಪ್ರತಿಭಟನಾರ್ಥವಾಗಿ
ಹಲವೆಡೆ ಬೈಕ್ ರ್ಯಾಲಿಗಳು ನಡೆದವು. ರಾಜ್ಯ ಸರ್ಕಾರ ಬೇಡಿಕೆಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಈ ಮಧ್ಯೆ, ಗಣೇಶ ಚತುರ್ಥಿ
ಪ್ರಯುಕ್ತ ಬೆಂಗಳೂರಿನ μÅàಡಂ ಪಾರ್ಕ್ನಲ್ಲಿ ಆ.24ರಂದು ಹಮ್ಮಿಕೊಳ್ಳಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ಮುಂದೂಡಲಾಗಿದೆ.