![1-assam](https://www.udayavani.com/wp-content/uploads/2024/07/1-assam-415x233.jpg)
ರಾಘವೇಶ್ವರ ಶ್ರೀಗಳ ವಿರುದ್ಧದ ಮೇಲ್ಮನವಿ ತಿರಸ್ಕರಿಸಿದ ಸುಪ್ರೀಂ
Team Udayavani, Feb 17, 2017, 3:45 AM IST
![raghaveshwar.jpg](https://www.udayavani.com/wp-content/uploads/2017/02/16/raghaveshwar.jpg)
ಬೆಂಗಳೂರು: ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಮತ್ತು ಧರ್ಮಚಕ್ರ ಟ್ರಸ್ಟ್ ವಿರುದ್ಧ ತನಿಖೆಗೆ ಆಗ್ರಹಿಸಿ ಪಿಐಎಲ್ ದಾಖಲಿಸಿದ್ದಕ್ಕೆ ದಂಡ ಮತ್ತು ನಿರ್ಬಂಧ ವಿಧಿಸಿದ್ದಲ್ಲದೆ, ಅರ್ಜಿ ವಜಾಗೊಳಿಸಿದ್ದ ಹೈಕೋರ್ಟ್ ಕ್ರಮ ಪ್ರಶ್ನಿಸಿ ಅಸ್ತ್ರ ಸಂಘಟನೆ ಮತ್ತು ಶ್ರೀಕ್ಷೇತ್ರ ಗೋಕರ್ಣ ಹಿತರಕ್ಷಣಾ ಸಮಿತಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ರಾಘವೇಶ್ವರಶ್ರೀ ಮತ್ತು ಮಠದ ಧರ್ಮಚಕ್ರ ಟ್ರಸ್ಟ್ ವಿರುದ್ಧ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ್ದ ಹೈ ಕೋರ್ಟ್, ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿತ್ತಲ್ಲದೆ, ಅವರ ಪರ ವಕೀಲರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸು ವುದಕ್ಕೆ ಶಾಶ್ವತ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅಸ್ತ್ರ ಸಂಘಟನೆ ಮತ್ತು ಗೋಕರ್ಣ
ಹಿತರಕ್ಷಣಾ ಸಮಿತಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಅರ್ಜಿದಾರರು ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು 247 ದಿನ ವಿಳಂಬ ಮಾಡಿರುವುದು ಮತ್ತು ಮರು ಅರ್ಜಿ ಸಲ್ಲಿಸಲು 264 ದಿನ ವಿಳಂಬ ಮಾಡಿದ್ದು, ಈ ವಿಳಂಬಕ್ಕೆ ಯಾವುದೇ ಕಾರಣ ನೀಡಿಲ್ಲವೆಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯ
ಮೂರ್ತಿಗಳನ್ನೊಳಗೊಂಡ ಪೀಠ ಅರ್ಜಿಯನ್ನು ತಿರಸ್ಕರಿಸಿದೆ.
ಏನಿದು ಪ್ರಕರಣ?: ಅಸ್ತ್ರ ಟ್ರಸ್ಟ್ ಆಡಳಿತ ಟ್ರಸ್ಟಿ ಎಂ.ಸಿ.ಚಂದನ, ಗೋಕರ್ಣ ಹಿತರಕ್ಷಣಾ ಸಮಿತಿ ಅಧ್ಯಕ್ಷ ಗಣಪತಿ ಗಜಾನನ ರೇ ಎಂಬು ವರು 2013ರಲ್ಲಿ ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿ, ರಾಘವೇಶ್ವರ ಶ್ರೀ ಮತ್ತು ಮಠದ ಧರ್ಮಚಕ್ರ ಟ್ರಸ್ಟ್ ವಿದೇಶಿ ದೇಣಿಗೆ ಕಾಯ್ದೆ ಉಲ್ಲಂ ಸಿದ್ದಾರೆಂದು ಆರೋಪಿಸಿದ್ದರು. ಈ ಕುರಿತು ಸಿಬಿಐ ತನಿಖೆ
ನಡೆಸಬೇಕೆಂದು ಕೋರಿದ್ದರು.
ಟಾಪ್ ನ್ಯೂಸ್
![1-assam](https://www.udayavani.com/wp-content/uploads/2024/07/1-assam-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.