15 ಸಾವಿರ ಕೋಟಿ ಅನುದಾನಕ್ಕೆ ಮನವಿ
Team Udayavani, Feb 29, 2020, 3:05 AM IST
ಕಲಬುರಗಿ: ಲೋಕೋಪಯೋಗಿ ಇಲಾಖೆಗೆ 2020-21ನೇ ಸಾಲಿನ ಬಜೆಟ್ನಲ್ಲಿ 15 ಸಾವಿರ ಕೋಟಿ ರೂ. ಅನುದಾನ ತೆಗೆದಿರಿಸುವಂತೆ ಮನವಿ ಸಲ್ಲಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ, ಲೋಕೋಪಯೋಗಿ, ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ ತಿಳಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಉತ್ತರ ಕರ್ನಾಟಕದಲ್ಲಿ ಎದುರಾದ ನೆರೆ ಹಾವಳಿಯಿಂದಾಗಿ ಒಟ್ಟಾರೆ 7,021 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆಗಳಿಗೆ ಹಾನಿಯಾಗಿದೆ. ಹೀಗಾಗಿ ಹೆಚ್ಚಿನ ಅನುದಾನಕ್ಕಾಗಿ 15 ಸಾವಿರ ಕೋಟಿ ನೀಡುವಂತೆ ಕೋರಲಾಗಿದೆ. ಕಳೆದ ವರ್ಷ ಇಲಾಖೆಗೆ 9,450 ಕೋಟಿ ರೂ. ಅನುದಾನ ಹಂಚಿಕೆಯಾಗಿತ್ತು ಎಂದು ಹೇಳಿದರು.
ಬೆಂಬಲ ಬೆಲೆ ಯೋಜನೆ ಅಡಿ 10 ಕ್ವಿಂಟಲ್ ಬದಲಾಗಿ 20 ಕ್ವಿಂಟಲ್ ತೊಗರಿ ಖರೀದಿಸುವ ನಿಟ್ಟಿನಲ್ಲಿ ಈಗ ನಿಗದಿ ಮಾಡಲಾಗಿರುವ ಖರೀದಿ ಪ್ರಮಾಣ ಹೆಚ್ಚಿಸುವಂತೆ ಕೋರಿ ಮುಖ್ಯಮಂತ್ರಿ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದಾರೆ. ಹೆಚ್ಚಿನ ಖರೀದಿಗೆ ಅನುಮೋದನೆ ಸಿಗುವ ನಿರೀಕ್ಷೆಯಿದೆ. ಕೇಂದ್ರದ ಅನುಮತಿ ಬಂದ ನಂತರ 20 ಕ್ವಿಂಟಲ್ ಖರೀದಿಗೆ ಮುಂದಾಗಲಾಗುವುದು ಎಂದರು.
ಕಡಲೆಗೆ ಪ್ರೋತ್ಸಾಹ ಧನ: ಉತ್ತರ ಕರ್ನಾಟಕ ಪ್ರಮುಖ ಹಿಂಗಾರಿ ಬೆಳೆಯಾಗಿರುವ ಕಡಲೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲಾಗುವುದು. ಆದರೆ ರಾಜ್ಯ ಸರ್ಕಾರದ ಪ್ರೋತ್ಸಾಹ ಧನ ನಿಗದಿ ಮಾಡಿಲ್ಲ. ಸಚಿವ ಸಂಪುಟದ ಉಪ ಸಮಿತಿಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಪ್ರೋತ್ಸಾಹ ಧನ ನೀಡುವ ಕುರಿತು ನಿರ್ಧಾರ ಕೈಗೊಳ್ಳಲು ಯತ್ನಿಸಲಾಗುವುದು. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಏ.1ರೊಳಗೆ ಹೊಸ ಅಧ್ಯಕ್ಷರ ನೇಮಕವಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ