ಕಾಂಗ್ರೆಸ್ ಟಿಕೆಟ್ ಗೆ ಅರ್ಜಿಗಳ ಮಹಾಪೂರ: ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನ
ಈ ಪ್ರಹಸನದ ಅಗತ್ಯವಿತ್ತೇ ?; ಕಾಂಗ್ರೆಸ್ ನಲ್ಲೇ ಕೆಲವರ ಟೀಕೆ !
Team Udayavani, Nov 14, 2022, 5:21 PM IST
ಬೆಂಗಳೂರು : ಕಾಂಗ್ರೆಸ್ ಟಿಕೆಟ್ ಅರ್ಜಿ ಸಲ್ಲಿಕೆಗೆ ಇನ್ನು ಒಂದೇ ದಿನ ಬಾಕಿ ಇದ್ದು ಇಂದು ಆಕಾಂಕ್ಷಿಗಳು ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಲು ಮುಗಿಬಿದ್ದರು.
ಸುಮಾರು 300 ಕ್ಕೂ ಹೆಚ್ಚು ಜನರು ಇದುವರೆಗೆ ಅರ್ಜಿ ಸಲ್ಲಿಸಿದ್ದು, ಈ ಸಂದರ್ಭದಲ್ಲಿ ಕೆಲವರು ಜನ-ಧನ ಬಲದ ಶಕ್ತಿ ಪ್ರದರ್ಶನ ನಡೆಸಿದರು.
ನೂರಾರು ಬೆಂಬಲಿಗರ ಜೊತೆಗೆ ಬಂದು ಆಕಾಂಕ್ಷಿಗಳು ಟಿಕೆಟ್ ಗೆ ಅರ್ಜಿ ಸಲ್ಲಿಸಿದರು. ಕೆಲವರು ಈ ಸಂದರ್ಭದಲ್ಲಿ ಮುಹೂರ್ತಕ್ಕೂ ಆದ್ಯತೆ ನೀಡಿದ್ದರು. ಮಂಡ್ಯ,ಶಿವಮೊಗ್ಗ, ರಾಯಚೂರು, ಕಲಬುರ್ಗಿ ಭಾಗದ ಆಕಾಂಕ್ಷಿಗಳಿಂದ ಇಂದು ಹೆಚ್ಚಿನ ಪ್ರಮಾಣದಲ್ಲಿ ಅರ್ಜಿ ಸಲ್ಲಿಕೆಯಾಗಿದೆ.ನಾಳೆ(ಮಂಗಳವಾರ) ಕೊನೆಯ ದಿನವಾದ ಕಾರಣ ಕೆಪಿಸಿಸಿ ಕಚೇರಿಗೆ ಇಂದೇ ಆಕಾಂಕ್ಷಿಗಳು ಮುಗಿಬಿದ್ದರು.
ರಾಮನಗರ ಕ್ಷೇತ್ರಕ್ಕೆ ಇಕ್ಬಾಲ್ ಹುಸೇನ್ ಮತ್ತೊಮ್ಮೆ ಅರ್ಜಿ ಸಲ್ಲಿಸಿದರೆ, ಬೊಮ್ಮನಹಳ್ಳಿ ಕ್ಷೇತ್ರಕ್ಕೆ ನಿರ್ಮಾಪಕ ಡಿ.ಉಮಾಪತಿ,ಮಹಾದೇವಪುರ, ಸಕಲೇಶಪುರ ಕ್ಷೇತ್ರಗಳಿಗೆ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರ್ ನಾಥ್, ಸಿಂಧನೂರು ಕ್ಷೇತ್ರಕ್ಕೆ ಅರ್ಜಿ ಮಾಜಿ ಯೂಥ್ ಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಬಾದರ್ಲಿ ಅರ್ಜಿ ಸಲ್ಲಿಸಿದರು.
ಆದರೆ ಈ ಪ್ರಕ್ರಿಯೆ ಬಗ್ಗೆ ಕಾಂಗ್ರೆಸ್ ನಲ್ಲೇ ಕೆಲವರು ಟೀಕೆ ವ್ಯಕ್ತಪಡಿಸಿದ್ದಾರೆ. ಈ ಪ್ರಹಸನದ ಅಗತ್ಯವಿರಲಿಲ್ಲ ಎಂಬ ಮಾತೂ ಕೇಳಿ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!