ಟ್ಯಾಗೂರ್ ಪ್ರಶಸ್ತಿಗೆ ಅರ್ಜಿ
Team Udayavani, Aug 17, 2019, 3:00 AM IST
ಬೆಂಗಳೂರು: ಗುರುದೇವ್ ರವೀಂದ್ರನಾಥ್ ಟ್ಯಾಗೂರ್ ಅವರ 150ನೇ ಜನ್ಮದಿನೋತ್ಸವದ ಅಂಗವಾಗಿ ಸ್ಥಾಪಿತವಾದ ಟ್ಯಾಗೂರ್ ಪ್ರಶಸ್ತಿಗೆ ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವಾಲಯ ಅರ್ಹ ಗಣ್ಯರಿಂದ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವಾಲಯ, ಸಂಸ್ಕೃತಿ ಸಾಮರಸ್ಯಕ್ಕಾಗಿ ನೀಡಲಾಗುವ “ಟ್ಯಾಗೂರ್ ಪ್ರಶಸ್ತಿ’ಗೆ ರಾಜ್ಯ ದಿಂದ ನಾಮ ನಿರ್ದೇಶನ ಕಳುಹಿಸುವಂತೆ ಕರ್ನಾಟಕದ ರಾಜ್ಯಪಾಲರನ್ನು ಕೋರಿದೆ.
2012ರಲ್ಲಿ ಕೇಂದ್ರ ಸರ್ಕಾರದಿಂದ ಈ ಪ್ರಶಸ್ತಿ ಸ್ಥಾಪನೆಯಾಗಿದೆ. ಟ್ಯಾಗೂರ್ ಅವರ ಸಾಧನೆ, ಧ್ಯೆಯೋದ್ದೇಶ ಮತ್ತು ಪರಿಕಲ್ಪನೆಗಳ ಮೌಲ್ಯಗಳನ್ನು ಉತ್ತೇಜಿಸಲು ಈ ಪ್ರಶಸ್ತಿ ಕೊಡಲಾಗುತ್ತಿದೆ. ಈ ಪ್ರಶಸ್ತಿ 1 ಕೋಟಿ ರೂ. ನಗದು, ಪ್ರಶಸ್ತಿ ಪತ್ರ, ಬಿನ್ನವತ್ತಳೆ ಮತ್ತು ಒಂದು ಸೊಗಸಾದ ಸಾಂಪ್ರದಾಯಿಕ ಕರಕುಶಲ ಕೈಮಗ್ಗ ವಸ್ತುಗಳನ್ನು ಒಳಗೊಂಡಿರುತ್ತದೆ.
ಟ್ಯಾಗೂರ್ ಪ್ರಶಸ್ತಿಯ ಆಯ್ಕೆಗೆ ಇರುವ ಕಾರ್ಯ ವಿಧಾನಗಳ ಬಗ್ಗೆ ಇರುವ ಸಂಪೂರ್ಣ ವಿವರಗಳನ್ನು ಬೆಂಗಳೂರು ವಿಶ್ವವಿದ್ಯಾಲಯದ ಅಧಿಕೃತ ವೆಬ್ಸೈಟ್ www.bangaloreuniversity.ac.in ನಲ್ಲಿ ಪ್ರಕಟಿಸಲಾಗಿದೆ. ಅರ್ಹ ವ್ಯಕ್ತಿಗಳು/ಸಂಘ-ಸಂಸ್ಥೆಗಳು ತಮ್ಮ ಶಿಫಾರಸು ಹಾಗೂ ಪೂರ್ಣ ವಿವರಗಳನ್ನು ಸಮಿತಿ ಅಧ್ಯಕ್ಷರಾದ ಬೆಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಕೆ.ಆರ್. ವೇಣುಗೋಪಾಲ್ ಅವರಿಗೆ ಆ.24ರ ಒಳಗಾಗಿ ಸಲ್ಲಿಸುವಂತೆ ಕುಲಪತಿಯವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
MUST WATCH
ಹೊಸ ಸೇರ್ಪಡೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ