ಆನ್‌ ಲೈನ್‌ ಪ್ರವೇಶ: ಬೆರಳತುದಿಯಲ್ಲೇ ಪದವಿ ಶಿಕ್ಷಣಕ್ಕೆ ಅರ್ಜಿ ಅಲೆದಾಟ ತಪ್ಪಿಸಲು ಕ್ರಮ


Team Udayavani, Aug 2, 2020, 6:42 AM IST

ಆನ್‌ ಲೈನ್‌ ಪ್ರವೇಶ: ಬೆರಳತುದಿಯಲ್ಲೇ ಪದವಿ ಶಿಕ್ಷಣಕ್ಕೆ ಅರ್ಜಿ ಅಲೆದಾಟ ತಪ್ಪಿಸಲು ಕ್ರಮ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ದ್ವಿತೀಯ ಪಿಯುಸಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪದವಿ ಕಾಲೇಜು ಪ್ರವೇಶಕ್ಕಾಗಿ ಕಾಲೇಜು ಅಲೆಯಬೇಕಾಗಿಲ್ಲ.

ಮನೆಯಿಂದ ಬೆರಳ ತುದಿಯಲ್ಲೇ ದಾಖಲಾತಿ ಪ್ರಕ್ರಿಯೆ ಪೂರ್ಣಗೊಳಿಸಬಹುದು.

ಕೋವಿಡ್ 19 ಹಿನ್ನೆಲೆಯಲ್ಲಿ ಮೊಬೈಲ್‌ ಮೂಲಕವೇ ತಮಗೆ ಬೇಕಾದ ಸರಕಾರಿ ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಕಾಲೇಜು ಶಿಕ್ಷಣ ಇಲಾಖೆ ಅವಕಾಶ ಕಲ್ಪಿಸಿದೆ.

ರಾಜ್ಯದ ಯಾವುದೇ ಸರಕಾರಿ ಕಾಲೇಜಿಗೆ ವಿದ್ಯಾರ್ಥಿ ಇರುವಲ್ಲಿಂದಲೇ ಅರ್ಜಿ ಸಲ್ಲಿಸಬಹುದು.

ಅರ್ಜಿಯನ್ನು ಆನ್‌ಲೈನ್‌ನಲ್ಲಿ ಉಚಿತವಾಗಿ ಪಡೆಯಬಹುದು. ಕಾಲೇಜು ಶಿಕ್ಷಣ ಇಲಾಖೆ ವೆಬ್‌ಸೈಟ್‌ಗೆ ಭೇಟಿ ನೀಡಿದರೆ, 2020-21ನೇ ಸಾಲಿಗೆ ಅರ್ಜಿ ಸಲ್ಲಿಸಬಹುದಾದ ಲಿಂಕ್‌ ಲಭ್ಯವಾಗುತ್ತದೆ.

ವೆಬ್‌ಸೈಟ್‌ನ ಮುಖಪುಟದಲ್ಲಿ ಆನ್‌ಲೈನ್‌ ಸೇವೆಗಳು ಎಂಬ ಆಯ್ಕೆಯ ಕೆಳಗೆ ರಾಜ್ಯದ 430 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಏಕೀಕೃತ ವೆಬ್‌ಸೈಟ್‌ ಮಾಹಿತಿ ಸಿಗುತ್ತದೆ.

ಅಲ್ಲಿಯೇ ಪಕ್ಕದಲ್ಲಿ 2020-21ನೇ ಪ್ರವೇಶ ಪ್ರಕ್ರಿಯೆಯ ಲಿಂಕ್‌ ಸಿಗಲಿದೆ. ಅದನ್ನು ಕ್ಲಿಕ್‌ ಮಾಡಿ ಪ್ರವೇಶ ಪ್ರಕ್ರಿಯೆ ಮುಂದುವರಿಸಬಹುದು.

ಆನ್‌ಲೈನ್‌ ಪ್ರವೇಶ ಹೇಗೆ?
ಇಲಾಖೆಯ https://dce.karnataka.gov.in ವೆಬ್‌ಸೈಟ್‌ನಲ್ಲಿ ಪ್ರಸಕ್ತ ಸಾಲಿನ ಆನ್‌ಲೈನ್‌ ಪ್ರಕ್ರಿಯೆಯ ಪ್ರತ್ಯೇಕ ಲಿಂಕ್‌ ಕಲ್ಪಿಸಲಾಗಿದೆ. ಇದನ್ನು ಕ್ಲಿಕ್ಕಿಸಿದರೆ ಹೊಸ ವಿಂಡೋ ತೆರೆದುಕೊಳ್ಳುತ್ತದೆ. ‘ಆನ್‌ಲೈನ್‌ ಪ್ರವೇಶ ಅರ್ಜಿಗಾಗಿ ಇಲ್ಲಿ ಕ್ಲಿಕ್‌ ಮಾಡಿ’ ಎಂಬ ಇನ್ನೊಂದು ಆಯ್ಕೆ ಸಿಗುತ್ತದೆ. ಅಲ್ಲಿ ಕ್ಲಿಕ್‌ ಮಾಡಿದ ಬಳಿಕ ವಿದ್ಯಾರ್ಥಿಯು ತನ್ನ ಮೊಬೈಲ್‌ ಸಂಖ್ಯೆಯನ್ನು ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಕೆ ಆರಂಭಿಸಬಹುದು.

ಒಟಿಪಿ ಬಂದ ಬಳಿಕ ಅಗತ್ಯವಿರುವ ದಾಖಲೆಗಳನ್ನು ಅದರ ಲ್ಲಿಯೇ ಭರ್ತಿ ಮಾಡಬಹುದು. ವಿದ್ಯಾರ್ಥಿ ಆಯ್ಕೆ ಮಾಡಿಕೊಳ್ಳುವ ಕಾಲೇಜಿಗೆ ಸಂಬಂಧಿಸಿದ ಎಲ್ಲ ವಿವರಗಳು ಮೊಬೈಲ್‌ನಲ್ಲೇ ಲಭ್ಯವಾಗುತ್ತವೆ. ಏಕಕಾಲಕ್ಕೆ 4ಕ್ಕೂ ಅಧಿಕ ಕಾಲೇಜುಗಳಿಗೆ ಅರ್ಜಿ ಸಲ್ಲಿಸಬಹುದು. ದಾಖಲಾತಿ ಪಡೆದ ಬಳಿಕ ಇತರ ಕಾಲೇಜಿನ ಅರ್ಜಿ ಡಿಲೀಟ್‌ ಆಗುತ್ತದೆ ಎಂದು ಇಲಾಖೆ ನಿರ್ದೇಶಕ ಪ್ರೊ| ಎಸ್‌. ಮಲ್ಲೇಶ್ವರಪ್ಪ ತಿಳಿಸಿದ್ದಾರೆ.

ಆಯ್ಕೆ ಪ್ರಕ್ರಿಯೆ ಹೇಗೆ?
ಸರಕಾರಿ ಕಾಲೇಜಿಗೆ ಅರ್ಜಿ ಸಲ್ಲಿಸಿದ ಪ್ರತಿಯೋರ್ವರಿಗೂ ಸೀಟು ಲಭಿಸುತ್ತದೆ. ಒಂದೊಮ್ಮೆ ಆಯ್ದುಕೊಂಡಿರುವ ಕಾಂಬಿನೇಷನ್‌ನಲ್ಲಿ 15 ಅಥವಾ ಅದಕ್ಕಿಂತ ಕಡಿಮೆ ವಿದ್ಯಾರ್ಥಿಗಳಿದ್ದಾಗ ಮಾತ್ರ ಬೇರೆ ಕಾಂಬಿನೇ ಷನ್‌ ಪಡೆಯಲು ಸಲಹೆ ನೀಡಲಾಗುತ್ತದೆ. ದಾಖಲಾತಿ ಪ್ರಮಾಣ ಗರಿಷ್ಠ ಮಿತಿ ದಾಟಿದರೂ ಸರಕಾರದಿಂದ ಹೆಚ್ಚುವರಿ ಅನುಮತಿ ಕಲ್ಪಿಸಲಾಗುತ್ತದೆ. ಉನ್ನತ ಶಿಕ್ಷಣದಲ್ಲಿ ದಾಖಲಾತಿ ಪ್ರಮಾಣ ಹೆಚ್ಚಿಸಲು ಆನ್‌ಲೈನ್‌ ಪ್ರವೇಶ ಪ್ರಕ್ರಿಯೆಯನ್ನು ಆರಂಭಿಸಿದ್ದು ಮಾತ್ರವಲ್ಲದೆ, ಅತ್ಯಂತ ಸರಳಗೊಳಿಸಿದ್ದೇವೆ ಎಂದು ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಆಫ್ಲೈನ್‌ ಅವಕಾಶವೂ ಇದೆ
ಇಂಟರ್‌ನೆಟ್‌ ಅಥವಾ ಇನ್ಯಾವುದೇ ಕಾರಣಕ್ಕೆ ಆನ್‌ಲೈನ್‌ ಅರ್ಜಿ ಸಲ್ಲಿಸಲು ಸಾಧ್ಯವಾಗದ ಅಭ್ಯರ್ಥಿಗಳು ಕಾಲೇಜಿಗೆ ಹೋಗಿ ಅರ್ಜಿ ಭರ್ತಿ ಮಾಡಿ, ಪ್ರವೇಶ ಪಡೆಯಬಹುದು. ಹೀಗೆ ಸ್ವೀಕರಿಸಿದ ಅರ್ಜಿಗಳ ವಿವರಗಳನ್ನು ಕಾಲೇಜಿ ನವರು ಕಾಲೇಜು ಲಾಗ್‌ಇನ್‌ ಮೂಲಕವೇ ಆನ್‌ಲೈನ್‌ ಅರ್ಜಿ ಟೆಂಪ್ಲೇಟ್‌ನಲ್ಲಿ ಭರ್ತಿ ಮಾಡಬೇಕು.

ವಾಟ್ಸ್‌ಆ್ಯಪ್‌ ಸಹಾಯವಾಣಿ
ಆನ್‌ಲೈನ್‌ ಪ್ರವೇಶಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾದಲ್ಲಿ ವಾಟ್ಸ್‌ಆ್ಯಪ್‌ನಲ್ಲಿ ನಿವೇದಿಸಿಕೊಂಡು, ಪರಿಹಾರ ಪಡೆಯಬಹುದು. ಹಾಗೆಯೇ ಇ-ಮೇಲ್‌ ಕೂಡ ಇದೆ.
ಸಹಾಯವಾಣಿ ವಾಟ್ಸ್‌ಆ್ಯಪ್‌ : 8277735113, 8277573373

ಸರಕಾರಿ ಕಾಲೇಜುಗಳ ಆನ್‌ಲೈನ್‌ ಪ್ರವೇಶ ಅರ್ಜಿ ಸಂಪೂರ್ಣ ಉಚಿತ. ಪ್ರಥಮ, ದ್ವಿತೀಯ ಮತ್ತು ತೃತೀಯ ಪದವಿ ಆನ್‌ಲೈನ್‌ ಪ್ರವೇಶ ಪ್ರಕ್ರಿಯೆಯನ್ನು ಈ ವರ್ಷ ಆರಂಭಿಸಿದ್ದೇವೆ. ಇಂಟರ್‌ನೆಟ್‌ ಸಮಸ್ಯೆ ಇದ್ದರೆ ಕಾಲೇಜಿಗೆ ಹೋಗಿಯೂ ದಾಖಲಾಗಬಹುದು.
– ಪ್ರೊ| ಎಸ್‌. ಮಲ್ಲೇಶ್ವರಪ್ಪ, ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕ

ಇ-ಮೇಲ್‌: [email protected]

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.