Council session; ಮಾನವೀಯತೆ ಆಧಾರದಲ್ಲಿ 28 ಮಂದಿಗೆ ನೇಮಕಾತಿ ಪತ್ರ: ಪರಮೇಶ್ವರ್
Team Udayavani, Feb 23, 2024, 11:04 PM IST
ಬೆಂಗಳೂರು: ವಿವಿಧ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳಿಗೆ 2012ನೇ ಸಾಲಿನಲ್ಲಿ ನಡೆದ ಭರ್ತಿ ಪ್ರಕ್ರಿಯೆಯಲ್ಲಿ ನೇಮಕಾತಿ ಆದೇಶಗಳನ್ನು ಪಡೆದುಕೊಳ್ಳದ 28 ಮಂದಿಗೆ ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೇಮಕಾತಿ ಆದೇಶ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್ ತಿಳಿಸಿದರು.
ಬಿಜೆಪಿಯ ಎನ್. ರವಿಕುಮಾರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, 750 ಪೊಲೀಸ್ ಹುದ್ದೆಗಳ ನೇಮಕಾತಿಗೆ 2012ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಅದರಲ್ಲಿ 354 ಮಂದಿ ಆಯ್ಕೆಗೊಂಡಿದ್ದರು. ದೈಹಿಕ ಸಾಮರ್ಥ್ಯ ಮತ್ತು ಇತರ ಅರ್ಹತೆಗಳಿದ್ದರೂ ಕಡಿಮೆ ಅಂಕಗಳು ಇರುವ ಕಾರಣಕ್ಕೆ 488 ಅಭ್ಯರ್ಥಿಗಳ ಪಟ್ಟಿ ಉಳಿದಿತ್ತು. ಇದರಲ್ಲಿ 111 ಮಂದಿ ನೇಮಕಾತಿ ಆದೇಶ ಪಡೆದು ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಉಳಿದವರು ಮಾನವೀಯತೆ ಆಧಾರದಲ್ಲಿ ಒಂದು ಬಾರಿಗೆ ಅಂತಿಮ ಅವಕಾಶ ನೀಡುವ ಸಂಬಂಧ ವರದಿ ಸಲ್ಲಿಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಲಾಗಿದೆ. ಇಲಾಖೆ ವರದಿಯ ನಿರೀಕ್ಷೆಯಲ್ಲಿದೆ. ಈ 28 ಅಭ್ಯರ್ಥಿಗಳಿಗೆ ಸಂಬಂಧಿಸಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಸಚಿವ ಸಂಪುಟದ ಮುಂದೆ ತಂದು ಮಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ