7 ನೂತನ ವಿ.ವಿ.ಗಳಿಗೆ ಕುಲಪತಿಗಳ ನೇಮಕ: ಸಚಿವ ಡಾ.ಸಿ. ಎನ್. ಅಶ್ವತ್ಥನಾರಾಯಣ
Team Udayavani, Mar 20, 2023, 8:52 PM IST
ಬೆಂಗಳೂರು: ರಾಜ್ಯ ಸರಕಾರವು ನೂತನವಾಗಿ ಸ್ಥಾಪಿಸಿರುವ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿಶ್ವವಿದ್ಯಾಲಯಗಳಿಗೆ ಚೊಚ್ಚಲ ಕುಲಪತಿಗಳನ್ನು ನೇಮಿಸಿ, ಸೋಮವಾರ ಆದೇಶ ಹೊರಡಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಇದರಂತೆ ಬೆಂಗಳೂರು ವಿವಿ ಪತ್ರಿಕೋದ್ಯಮ ವಿಭಾಗದ ಡಾ.ಬಿ ಕೆ ರವಿ ಅವರನ್ನು ಕೊಪ್ಪಳ ವಿವಿ, ಬಾಗಲಕೋಟೆಯ ತೋಟಗಾರಿಕೆ ವಿ.ವಿ.ದ ಡಾ.ಅಶೋಕ ಸಂಗಪ್ಪ ಆಲೂರು ಅವರನ್ನು ಕೊಡಗು ವಿವಿ, ಮೈಸೂರು ವಿವಿ ಮಾನವಶಾಸ್ತ್ರ ವಿಭಾಗದ ಡಾ.ಎಂ ಆರ್. ಗಂಗಾಧರ ಅವರನ್ನು ಚಾಮರಾಜನಗರ ವಿವಿ, ಬೆಳಗಾವಿಯ ಕೆ.ಎಸ್.ಗೋಗಟೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಆನಂದ್ ಶರದ್ ದೇಶಪಾಂಡೆ ಅವರನ್ನು ಬಾಗಲಕೋಟೆ ವಿವಿ, ಕುವೆಂಪು ವಿ.ವಿ.ದ ಡಾ.ಬಿ ಎಸ್ ಬಿರಾದಾರ್ ಅವರನ್ನು ಬೀದರ್ ವಿವಿ, ಬಾಗಲಕೋಟೆಯ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಡಾ.ಸುರೇಶ್ ಎಚ್ ಜಂಗಮಶೆಟ್ಟಿ ಅವರನ್ನು ಹಾವೇರಿ ವಿವಿ ಮತ್ತು ಧಾರವಾಡದ ಕರ್ನಾಟಕ ವಿ.ವಿ.ದ ನಿವೃತ್ತ ಪ್ರೊಫೆಸರ್ ಆಗಿರುವ ಡಾ.ಟಿ ಸಿ ತಾರಾನಾಥ್ ಅವರನ್ನು ಹಾಸನ ವಿಶ್ವವಿದ್ಯಾಲಯದ ಕುಲಪತಿಗಳಾಗಿ ನೇಮಿಸಲಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಸರಕಾರವು ಜಿಲ್ಲೆಗೆ ಒಂದಾದರೂ ವಿಶ್ವವಿದ್ಯಾಲಯ ಇರಬೇಕು ಎನ್ನುವ ತತ್ತ್ವದಡಿಯಲ್ಲಿ ಈ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.
ಇದನ್ನೂ ಓದಿ: ಬೋಗಸ್ ಕಾರ್ಡ್ ಗಳ ಬಿಡುಗಡೆ ಸರಣಿ ಆರಂಭ : ಸಿಎಂ ಬೊಮ್ಮಾಯಿ ಲೇವಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು