ಮುಕ್ತ ವಿವಿಗೆ ಮಾನ್ಯತೆ ನೀಡಿ
Team Udayavani, Dec 13, 2017, 6:25 AM IST
ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ 2017-18ನೇ ಸಾಲಿನಲ್ಲಿ ತಾಂತ್ರಿಕೇತರ ಕೋರ್ಸ್ ಗಳನ್ನು ನಡೆಸಲು ಮಾನ್ಯತೆ ನೀಡುವಂತೆ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ)ಕ್ಕೆ ಹೈಕೋರ್ಟ್ ಆದೇಶಿಸಿದೆ.
ಕೆಎಸ್ಒಯುನ 2017-18ನೇ ಸಾಲಿನ ಕೋರ್ಸ್ಗಳಿಗೆ ಮಾನ್ಯತೆ ನೀಡಲು ನಿರಾ ಕರಿಸಿದ್ದ ಯುಜಿಸಿ ಕ್ರಮ ಪ್ರಶ್ನಿಸಿ ವಿವಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ಅವರಿದ್ದ ಏಕಸದಸ್ಯ ಪೀಠ ಮಂಗಳವಾರ ಈ ಕುರಿತು ಯುಜಿಸಿಗೆ ನಿರ್ದೇಶನ ನೀಡಿದೆ. ಈ ಆದೇಶ 2017-18ನೇ ಸಾಲಿನ ತಾಂತ್ರಿಕೇತರ ಕೋರ್ಸ್ಗಳಿಗೆ ಮಾತ್ರ ಅನ್ವಯವಾಗುತ್ತದೆ. ಅಷ್ಟೇ ಅಲ್ಲ, ಕೆಎಸ್ಒಯು ಮಾತ್ರ ವಿದ್ಯಾರ್ಥಿ ಗಳಿಗೆ ಪ್ರವೇಶಾತಿ ಕಲ್ಪಿಸಬೇಕು. ಕೆಎಸ್ಒಯು ಅಡಿಯಲ್ಲಿ ಬರುವ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಕ್ಕೆ ಅನುಮತಿ ಇರುವುದಿಲ್ಲ.