ಅನಿವಾರ್ಯ ಇದ್ದವರಿಗೆ ಅಂತರ್ ಜಿಲ್ಲಾ ವರ್ಗಾವಣೆಗೆ ಚಿಂತನೆ: ಆರಗ ಜ್ಞಾನೇಂದ್ರ
Team Udayavani, Oct 23, 2022, 7:48 PM IST
ಶಿರಸಿ: ಅನಿವಾರ್ಯ ಇದ್ದವರಿಗೆ ಅಂತರ್ ಜಿಲ್ಲಾ ಪೊಲೀಸ್ ವರ್ಗಾವಣೆ ಅವಕಾಶ ಕೊಡುವಂತೆ ಒತ್ತಡವಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಪೊಲೀಸ್ ಇಲಾಖೆಯಲ್ಲಿ ಬೆಳಗಾವಿ, ಕಲಬುರಗಿ, ರಾಯಚೂರು ಜಿಲ್ಲೆಯವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕೆಲವರು ಅನಿವಾರ್ಯಕ್ಕೆ ಸಂಖ್ಯೆ ಕಡಿಮೆ ಇದ್ದ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದಾರೆ. ಎಲ್ಲ ಜಿಲ್ಲೆಯಲ್ಲೂ ಪೊಲೀಸ್ ಬಲ ಸಮ ಪ್ರಮಾಣದಲ್ಲಿ ಇರಬೇಕು ಎಂಬ ಕಾರಣಕ್ಕೆ ಅಂತರ್ಜಿಲ್ಲಾ ವರ್ಗಾವಣೆ ಕೈ ಬಿಡುವ ತೀರ್ಮಾನ ಸರ್ಕಾರ ಕೈಗೊಂಡಿತ್ತು. ಆದರೆ, ಮಾಜಿ ಸೈನಿಕರು, ತಂದೆ, ತಾಯಿ, ಪತ್ನಿ, ಪತಿಗಳಿಗೆ ಸಮಸ್ಯೆ ಆಗುವುದು ಗಮನಕ್ಕೆ ಬಂದಿದೆ. ಅಂಥವರ ಸಮಸ್ಯೆ ಪರಿಹರಿಸಬೇಕು ಎಂಬ ಚಿಂತನೆ ನಡೆದಿದೆ. ವರ್ಗಾವಣೆ ನಿರ್ಬಂಧದಿಂದ ಪತಿ, ಪತ್ನಿ, ತಂದೆ, ತಾಯಿ ಕುಟುಂಬಸ್ಥರಿಗೆ ಆಗುವ ಸಮಸ್ಯೆ ಬಗೆಹರಿಸಬೇಕಾಗಿದೆ. ಈ ಬಗ್ಗೆಯೂ ಚಿಂತನೆ ಇದೆ ಎಂದರು.
ಪಿಎಫ್ಐ ನಿಷೇಧದ ಬಳಿಕ ಅಲ್ಲಿ ಕಾಣಿಸಿಕೊಂಡವರ ಮೇಲೆ ತೀವ್ರ ನಿಗಾ ಇಡಲಾಗಿದೆ. ಹಿಂದೆ ಸಿಮಿ ನಿರ್ಬಂಧಿಸಿದಾಗ ಪಿಎಫ್ಐ ಕಾಣಿಸಿಕೊಂಡಿತು. ಪರಮೇಶ ಮೇಸ್ತಾ ಪ್ರಕರಣವನ್ನು ಸಿಬಿಐ ಮರು ತನಿಖೆಗೆ ಸ್ವತಃ ಅವರ ತಂದೆಯೇ ಹೇಳಿದ್ದಾರೆ. ಕೊಲೆ ಹೌದಾ ಅಲ್ಲವಾ ಎಂಬ ಪ್ರಶ್ನೆ ಇದೆ. ಸರ್ಕಾರದ ಮುಂದೆ ಮರು ತನಿಖೆ ಪ್ರಸ್ತಾವ ಇದೆ. ಶಿರಸಿ ಟ್ರಾಫಿಕ್ ಠಾಣೆಗೆ ಸ್ವತಃ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯ ಮಾಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ