ಸಹಕಾರ ಚಳುವಳಿಗೆ ಕಪ್ಪು ಚುಕ್ಕೆ ತರುವವರ ವಿರುದ್ಧ ಕಠಿಣ ಕ್ರಮ: ಸಚಿವ ಆರಗ ಜ್ಞಾನೇಂದ್ರ
Team Udayavani, Sep 19, 2022, 3:20 PM IST
ಬೆಂಗಳೂರು: ಸಹಕಾರ ಕ್ಷೇತ್ರದ ಲಾಭ ಪಡೆದು, ಅದಕ್ಕೆ ಕಪ್ಪುಚುಕ್ಕೆ ತರುವ ಯಾರನ್ನೇ ಆಗಲಿ ಸಹಿಸದೆ, ತಕ್ಕ ಶಿಕ್ಷೆ ವಿಧಿಸಿ, ಸಾರ್ವಜನಿಕರ ವಿಶ್ವಾಸವನ್ನು ಉಳಿಸಿಕೊಂಡು ಹೋಗಬೇಕೆಂದು, ಗೃಹ ಸಚಿವ ಆರಗ ಜ್ಞಾನೇಂದ್ರ ಕರೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ, ಸಹಕಾರಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದ ಅವರು, “ಸಹಕಾರ ತತ್ವಕ್ಕೆ ವಿರುದ್ಧವಾಗಿ, ಸ್ವಾರ್ಥದಿಂದ, ವರ್ತಿಸಿ, ಸಹಕಾರಿ ಚಳುವಳಿ ಬಗ್ಗೆ ಅಗೌರವ ಮೂಡಿಸುವ ಯಾವುದೇ ಚಟುವಟಿಕೆಗಳ ವಿರುದ್ಧ ಜಾಗೃತವಾಗಿರಬೇಕು” ಎಂದು ಕರೆ ನೀಡಿದರು.
ಸಹಕಾರ ಸಂಸ್ಥೆಗಳನ್ನು ಅಚ್ಚುಕಟ್ಟಾಗಿ ನಡೆಸಬೇಕು ಹಾಗೂ ಸಾರ್ವಜನಿಕರು ನಮ್ಮ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಂಡು ಹೋಗಬೇಕು” ಎಂದು ಹೇಳಿದ ಸಚಿವರು, ಪ್ರಧಾನಿ ನರೇಂದ್ರ ಮೋದಿಯವರು, ಸಹಕಾರಿ ಚಳುವಳಿಯ ಮಹತ್ವವನ್ನು ಪರಿಗಣಿಸಿ, ಕೇಂದ್ರದಲ್ಲಿ ಪ್ರತ್ಯೇಕ ಸಚಿವ ಖಾತೆಯನ್ನೇ ಸೃಜಿಸಿದ್ದಾರೆ ಎನ್ನುವುದು, ಹೆಮ್ಮೆಯ ಸಂಗತಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ