ಅರಳಗೋಡಿನ ನಾಲ್ವರಿಗೆ ಮಂಗನ ಕಾಯಿಲೆ ದೃಢ
Team Udayavani, Feb 18, 2020, 3:03 AM IST
ಸಾಗರ: ತಾಲೂಕಿನ ಅರಳಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಮಂಡವಳ್ಳಿಯ ಯಶೋಧಾ ಬೀರಪ್ಪ ಅವರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ. ಶಿವಮೊಗ್ಗದ ಪರಿಮಾಣ ಕ್ರಿಮಿ ಪರಿಶೋಧನಾ ಪ್ರಯೋಗಾಲಯ ಭಾನುವಾರ ಪ್ರಕಟಿಸಿರುವ 71 ಮಂದಿ ರಕ್ತದ ಸ್ಯಾಂಪಲ್ನ ವರದಿ ಪ್ರಕಾರ, ಯಶೋಧಾ ಅವರನ್ನು ಒಳಗೊಂಡಂತೆ ಜಿಲ್ಲೆಯ ನಾಲ್ವರಲ್ಲಿ ಕೆಎಫ್ಡಿ ವೈರಸ್ ಪಾಸಿಟಿವ್ ದಾಖಲಾಗಿದೆ.
ಉಳಿದ ಮೂರು ಪ್ರಕರಣಗಳು ತೀರ್ಥಹಳ್ಳಿ ತಾಲೂಕಿನಲ್ಲಿ ಕಾಣಿಸಿಕೊಂಡಿದ್ದು, ಅಲ್ಲಿನ ಕನ್ನಗಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಹಿರೇಬೈಲಿನ ಪದ್ಮಾವತಿ ರವೀಂದ್ರ, ಕೋಣಂದೂರು ಪಿಎಚ್ಸಿ ವ್ಯಾಪ್ತಿಯ ಕಲ್ಗದ್ದೆಯ ರತೀಶ್ ಕುಬೇರ್ ಗೌಡ ಹಾಗೂ ಮಂಡಗದ್ದೆ ಮಾವಳ್ಳಿಯ ಚಂದ್ರಕಲಾ ಜಯರಾಮ್ ಅವರಿಗೆ ಸೋಂಕು ತಗುಲಿದೆ ಎಂದು ವಿಡಿಎಲ್ ವರದಿ ನೀಡಿದೆ. ಸಾಗರದಲ್ಲಿ ಶಂಕಿತ ಕ್ಯಾಸನೂರು ಅರಣ್ಯ ಕಾಯಿಲೆ ಪತ್ತೆಗಾಗಿ ಒಟ್ಟು 16 ಜನರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಫೆ.15ರಂದು ಯಶೋಧಾ ಅವರಲ್ಲಿ ಜ್ವರ ಕಾಣಿಸಿದ ಹಿನ್ನೆಲೆಯಲ್ಲಿ ರಕ್ತ ಸಂಗ್ರಹಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು