ಅರವಿಂದ ಲಿಂಬಾವಳಿ ಹಾಗೆ ಮಾಡುವ ವ್ಯಕ್ತಿಯಲ್ಲ: ಪ್ರಹ್ಲಾದ ಜೋಶಿ
Team Udayavani, Sep 3, 2022, 10:46 PM IST
ಧಾರವಾಡ: ಮೂರು ಬಾರಿ ಶಾಸಕರಾಗಿರುವ ಅರವಿಂದ ಲಿಂಬಾವಳಿ ಅವರಿಗೆ ಜನರ ಸಮಸ್ಯೆ ಬಗ್ಗೆ ಗೊತ್ತಿರುತ್ತದೆ. ನೈಜ ಘಟನೆ ಏನೆಂದು ತಿಳಿದು ಆ ಕುರಿತು ಪ್ರತಿಕ್ರಿಯಿಸುವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಲಿಂಬಾವಳಿ ಮಹಿಳೆಗೆ ಏನು ಹೇಳಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ಅವರು ಹಾಗೆ ಮಾಡುವ ವ್ಯಕ್ತಿಯಲ್ಲ. ಆ ವಿಷಯವನ್ನು ಸರಿಯಾಗಿ ತಿಳಿದುಕೊಂಡು ಮಾತನಾಡುವೆ. ಸಾಮಾನ್ಯವಾಗಿ ಯಾರೇ ಮನವಿ ಕೊಡಲು ಬಂದರೆ ಮನವಿ ಪಡೆಯಬೇಕು. ಅವರೂ ಮನವಿ ಪಡೆದಿರಬಹುದು ಎಂದರು.
ಐಟಿ-ಬಿಟಿ ಕಂಪನಿಗಳಿಂದ ಸಿಎಂಗೆ ಪತ್ರ ವಿಚಾರ ಕುರಿತು ಪ್ರತಿಕ್ರಿಯಿಸಿದ ಜೋಶಿ, ಕಾಲುವೆ ಒತ್ತುವರಿ ಬಗ್ಗೆ ಸಿಎಂಗೆ ಹೇಳಿರುವ ಅವರ ಕಾಳಜಿ ಒಪ್ಪುತ್ತೇನೆ. ಆದರೆ ಎಲ್ಲರೂ ಸೇರಿ ಅತಿಕ್ರಮಣ ಮಾಡಿದ್ದಾರೆ. ಇದರಲ್ಲಿ ಐಟಿಯವರೂ ಸೇರಿ ಬೇರೆ ಬೇರೆ ಉದ್ಯಮದವರು ಇದ್ದಾರೆ. ನೀರು ಹರಿಯದಂತೆ ಕೆರೆ-ಕಾಲುವೆ ಅತಿಕ್ರಮಣ ಮಾಡಿದ್ದಾರೆ ಎಂದು ಹೇಳಿದರು.
ಪ್ರತಿ ಬಾರಿ ಸಾವಿರಾರು ಕೋಟಿ ರೂ. ರಸ್ತೆಗಾಗಿ ವೆಚ್ಚವಾಗುತ್ತಿದೆ. ಏಳೆಂಟು ಸಾವಿರ ಕೋಟಿ ರೂ. ಬೆಂಗಳೂರು ಬಜೆಟ್ ಇದೆ. ಜತೆಗೆ ರಾಜ್ಯ ಸರ್ಕಾರವೂ ಬೆಂಗಳೂರಿಗೆ ಬಹಳ ಮಹತ್ವ ಕೊಟ್ಟಿದೆ. ಆದರೆ ಈಗ ಅತಿಕ್ರಮಣ ಬಗ್ಗೆ ಕ್ರಮ ಕೈಗೊಳ್ಳುತ್ತಿದ್ದಾರೆ. ನೀರು ಒಂದು ಕಡೆ ನಿಂತು ರಸ್ತೆ ಹಾಳಾಗುತ್ತಿವೆ. ಈ ಕುರಿತು ಶುಕ್ರವಾರ ಮುಖ್ಯಮಂತ್ರಿ ಜತೆಗೆ ಮಾತನಾಡಿದ್ದೇನೆ. ಸಿಎಂ ಸಹ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ