ಸೋನಿಯಾ ಗಾಂಧಿ,ರಾಹುಲ್ ಸಂವಿಧಾನಕ್ಕಿಂತ ದೊಡ್ಡವರೇ? : ಬಿಜೆಪಿ ಕಿಡಿ

ಮೋದಿ ಅವರನ್ನು ವಿಚಾರಣೆ ಮಾಡಿಲ್ಲವೇ? ಶಾ ಜೈಲಿಗೆ ಹೋಗಿಲ್ಲವೇ?, ಇ ಡಿ,‌ ಸುಪ್ರೀಂ ಕೋರ್ಟ್ ಮುಚ್ಚುತ್ತೇವೆ ಅಂತ ಪ್ರಣಾಳಿಕೆ ಮಾಡಿ

Team Udayavani, Jul 22, 2022, 4:48 PM IST

bjp-congress

ಬೆಂಗಳೂರು : ಕೇಂದ್ರ ಸರಕಾರದ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ ಹೊರ ಹಾಕಿದ್ದು, ಪ್ರಜಾಪ್ರಭುತ್ವದ ವ್ಯಾಪ್ತಿಯೊಳಗಡೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಇಲ್ಲವೇ ಎಂದು ಪ್ರಶ್ನಿಸಿದೆ.

ಶುಕ್ರವಾರ ಸಚಿವ ಬಿ.ಸಿ ನಾಗೇಶ್, ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ಮತ್ತು ನವೀನ್ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಎನ್. ರವಿಕುಮಾರ್ ಮಾತನಾಡಿ, ಕಾಂಗ್ರೆಸ್‌ ಕಾರ್ಯಕರ್ತರು, ನಾಯಕರು ಕೇಂದ್ರದ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ. ಸೋನಿಯಾ ಮತ್ತು ರಾಹುಲ್ ಗಾಂಧಿ ಅವರನ್ನ ವಿಚಾರಣೆಗೆ ಕರೆಯಬಾರದು. ಇ ಡಿ, ಸಿಬಿಐ ಯಾವುದೇ ಇದ್ದರೂ ಕಾಂಗ್ರೆಸ್ ನಾಯಕರನ್ನ ಕರೆಯಬಾರದು.ಕೇಂದ್ರ ಸರ್ಕಾರದ ನಿರ್ಧಾರದಂತೆ ಎಲ್ಲವೂ ಕಾರ್ಯಾಚರಣೆ ಮಾಡುತ್ತಿವೆ ಎಂದು ಗಂಭೀರ ಆಪಾದನೆ ಮಾಡಿದ್ದಾರೆ.ಸಿಬಿಐ, ಇ ಡಿ ಎಲ್ಲವೂ ಬಿಜೆಪಿ ಬಂದ ಬಳಿಕ ಬಂದದ್ದಲ್ಲ, ಕಾಂಗ್ರೆಸ್ ಇದ್ದಾಗ, ಸ್ವಾತಂತ್ರ್ಯ ಬಂದ ನಂತರ, ಗಣತ್ರಂತ್ರ ಬಂದ ನಂತರ ಬಂದಿದೆ ಎಂದರು.

ಮೋದಿ ಅವರನ್ನು ವಿಚಾರಣೆ ಮಾಡಿಲ್ಲವೇ? ಅಮಿತ್ ಶಾ ವಿಚಾರಣೆ ಎದುರಿಸಿ ಜೈಲಿಗೆ ಹೋಗಿಲ್ಲವೇ?. ಪ್ರಜಾಪ್ರಭುತ್ವದಲ್ಲಿ ಸೋನಿಯಾ, ರಾಹುಲ್ ಗಾಂಧಿ ಇಲ್ಲವೇ? ಆಲ್ ಇಂಡಿಯಾ ಬಾಡೀಸ್ ಎಲ್ಲವೂ ಸಂವಿಧಾನ ವ್ಯವಸ್ಥೆ ಆಗಿವೆ‌. ಸೋನಿಯಾ, ರಾಹುಲ್ ಗಾಂಧಿ ಸಂವಿಧಾನಕ್ಕಿಂತ ದೊಡ್ಡವರೇ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿ ಎಲ್ಲಾ ಪ್ರತಿಭಟನಾ ನಿರತರನ್ನು ಪ್ರಶ್ನೆ ಮಾಡುತ್ತೇನೆ, ಕಾಂಗ್ರೆಸ್ ಪಕ್ಷವನ್ನು ಬಗ್ಗು ಬಡಿಯಲು ಈ ರೀತಿ ಮಾಡುತ್ತಿದ್ದಾರೆ ಅನ್ನುವ ಆರೋಪ‌ ಇದೆ. ಆದರೆ ಆ ರೀತಿ ಮಾಡುವ ಅವಶ್ಯಕತೆ ಬಿಜೆಪಿಗೆ ಇಲ್ಲ. ನೀವು 60ವರ್ಷ ಆಡಳಿತ ನಡೆಸಿದ್ದೀರಿ. ಅನೇಕ ಕೆಲಸ ಮಾಡಿದ್ದೀರಿ.ಆದರೆ ಈಗ ಪ್ರತಿಭಟನೆ ಮಾಡುವುದು ನಾಚಿಕೆಗೇಡಿನ ಸಂಗತಿ. ಮೋದಿ ವಿಚಾರಣೆ ವೇಳೆ ಬಿಜೆಪಿ ಪ್ರತಿಭಟನೆ ನಡೆಸಿತ್ತಾ? ಅಮಿತ್ ಶಾ ಜೈಲಿಗೆ ಕಳುಹಿಸಿದಾಗ ಪ್ರತಿಭಟನೆ ಮಾಡಿದ್ದೇವಾ? ಇದು ಸಂವಿಧಾನ ವಿರೋಧಿ ಕಾರ್ಯಕ್ರಮ ಎಂದರು.

ನಿನ್ನೆ ರಮೇಶ್ ಕುಮಾರ್ ಸತ್ಯ ಹೇಳಿದ್ದಾರೆ. ಬ್ರಿಟಿಷರು ಲೂಟಿ ಮಾಡಿದ ರೀತಿಯಲ್ಲೇ ನೀವು ಲೂಟಿ ಮಾಡಿದ್ದೀರಿ.ನ್ಯಾಷನಲ್ ಹೆರಾಲ್ಡ್ ಮೂಲಕ ಅನ್ಯಾಯ, ಅಕ್ರಮದ ಮೂಲಕ ನೀವು ಹಣ ಮಾಡಿದ್ದೀರಿ. ಸುಪ್ರೀಂ ಕೋರ್ಟ್, ಇಡಿ ಬಂದ್ ಮಾಡಬೇಕು ಅಂತ ಹೇಳಿ.ನಾವು ಅಧಿಕಾರಕ್ಕೆ ಬಂದ ಮೇಲೆ ಇ ಡಿ,‌ ಸುಪ್ರೀಂ ಕೋರ್ಟ್ ಮುಚ್ಚುತ್ತೇವೆ ಅಂತ ಪ್ರಣಾಳಿಕೆ ಮಾಡಿ ಹೊರಡಿಸಿ, ಬನ್ನಿ ಚುನಾವಣೆಗೆ ಹೋಗೋಣ ಎಂದು ರವಿಕುಮಾರ್. ಸವಾಲು ಹಾಕಿದರು.

ನಿನ್ನೆ ನಲಪಾಡ್ ಬಾಯಿಗೆ ಬಂದಂತೆ ಭಾಷಣ ಮಾಡಿದ್ದಾರೆ. ಅವರೂ ಬೇಲ್ ಮೇಲೆ ಹೊರಗೆ ಇರುವ ಗಿರಾಕಿ. ಟ್ರಾಫಿಕ್ ಜಾಮ್ ಆಗುವಂತೆ, ಸಾರ್ವಜನಿಕರಿಗೆ ತೊಂದರೆ ಆಗುವಂತೆ ಪ್ರತಿಭಟನೆ ಯಾಕೆ ಮಾಡಿದಿರಿ? ಸಾರ್ವಜನಿಕರಿಗೆ ಉಪಯೋಗ ಆಗುವಂತೆ ಯಾವುದಾದರೂ ಪ್ರತಿಭಟನೆ ಮಾಡಿದ್ದೀರಾ ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.