ಮುಖ್ಯಮಂತ್ರಿಯಾಗಿದ್ದವರಗೆ ಭೂ ಸ್ವಾಧೀನ ಪ್ರಕ್ರಿಯೆಗಳ ಬಗ್ಗೆ ಅರಿವಿಲ್ಲವೇ?: ಸಚಿವ ಸುಧಾಕರ್
Team Udayavani, Aug 26, 2022, 8:56 PM IST
ಚಿಕ್ಕಬಳ್ಳಾಪುರ: ಎರಡು ಬಾರಿ ಮುಖ್ಯಮಂತ್ರಿಯಾಗಿದ್ದವರಿಗೆ ಭೂ ಸ್ವಾಧೀನ ಪ್ರಕ್ರಿಯೆಗಳ ಬಗ್ಗೆ ಅರಿವಿಲ್ಲವೇ? ಭೂ ಸ್ವಾಧೀನ ಮಾಡದೆಯೇ ನೀರಾವರಿ ಯೋಜನೆಗಳು, ಕೈಗಾರಿಕೆಗಳನ್ನು ಸ್ಥಾಪಿಸಲು ಸಾಧ್ಯವಾಗುತ್ತದೆಯೇ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವಾಗ್ಧಾಳಿ ನಡೆಸಿದರು.
ತಾಲೂಕಿನ ಬೀಡಗಾನಹಳ್ಳಿಯಲ್ಲಿ ಕುಮಾರಸ್ವಾಮಿ ಅವರ ಆರೋಪದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಚುನಾವಣೆ ಸಮೀಪದಲ್ಲಿ ನೀಡುವ ಬಾಲಿಶ ಹೇಳಿಕೆಗಳಿಗೆ ಅರ್ಥವಿಲ್ಲ. ಸಾಕ್ಷಿ ಸಮೇತ ಆರೋಪ ಮಾಡಬೇಕು, ದಾಖಲೆಗಳನ್ನು ಸಂಬಂಧಿಸಿದ ತನಿಖಾ ಸಂಸ್ಥೆಗಳಿಗೆ ಅಥವಾ ನ್ಯಾಯಾಲಯಗಳಿಗೆ ನೀಡಬೇಕೆಂದು ತಿರುಗೇಟು ನೀಡಿದರು.
ತಮಗೆ ಸಂಬಂಧವಿಲ್ಲ: ಕೈಗಾರಿಕಾ ಭೂ ಸ್ವಾಧೀನಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಈಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವನಾಗಿದ್ದೇನೆ, ಆದರೆ ಕಳೆದ ಒಂದು ವರ್ಷದಿಂದ ಭೂ ಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಭೂ ಸ್ವಾಧೀನ ಪ್ರಕ್ರಿಯೆ ನಡೆಸುವವರು ಕೈಗಾರಿಕಾ ಇಲಾಖೆಯವರು, ಈ ಸಂಬಂಧ ಕೈಗಾರಿಕಾ ಸಚಿವರ ಜೊತೆಯೂ ಮಾತನಾಡಲಾಗಿದೆ ಎಂದು ಹೇಳಿದರು.
ಹಿಂದೆ ಅವರೂ ಮುಖ್ಯಮಂತ್ರಿ ಆಗಿದ್ದರು, ಅವರೂ ಭೂ ಸ್ವಾಧೀನ ಮಾಡಿದ್ದಾರೆ, ಅವರ ಅವಧಿಯಲ್ಲಿ ಭೂ ಸ್ವಾಧೀನ ಮಾಡಿಲ್ಲವೇ? ಭೂ ಸ್ವಾಧೀನವಾಗದೆ ನೀರಾವರಿ ಯೋಜನೆಗಳು, ಕೈಗಾರಿಕೆಗಳು ಆಗಿದೆಯಾ, ಕೇವಲ ರಾಜಕೀಯ ಸ್ಟೆಂಟ್ ಮಾಡಿದರೆ ಏನು ಪ್ರಯೋಜನ ಎಂದು ಸಚಿವರು ಖಾರವಾಗಿ ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ