ಬ್ರಿಟನ್ನಿಂದ 3,137 ಪ್ರಯಾಣಿಕರ ಆಗಮನ: ಸರಕಾರದಿಂದ ಮಾಹಿತಿ
Team Udayavani, Jan 6, 2021, 10:41 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಬ್ರಿಟನ್ನಿಂದ ರಾಜ್ಯಕ್ಕೆ ಒಟ್ಟು 3,137 ಪ್ರಯಾಣಿಕರು ಬಂದಿದ್ದು, 3,061 ಪ್ರಯಾಣಿಕರನ್ನು ಪತ್ತೆ ಹಚ್ಚಲಾಗಿದೆ. ಆ ಪೈಕಿ 2,292 ಮಂದಿಗೆ ಆರ್ಟಿಪಿಸಿಆರ್ ಪರೀಕ್ಷೆ ನಡೆಸಲಾಗಿದೆ ಎಂದು ಹೈಕೋರ್ಟ್ಗೆ ಸರಕಾರ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಸರಕಾರ ಹಾಗೂ ಬಿಬಿಎಂಪಿಗೆ ನಿರ್ದೇಶಿಸಲು ಕೋರಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾ| ಎ. ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಸರಕಾರಿ ವಕೀಲ ವಿಕ್ರಂ ಹುಯಿಲಗೋಳ್ ಲಿಖೀತ ಹೇಳಿಕೆ ಸಲ್ಲಿಸಿ, ಡಿ.7ರ ಬಳಿಕ ಬ್ರಿಟನ್ನಿಂದ ರಾಜ್ಯಕ್ಕೆ ಒಟ್ಟು 3,137 ಪ್ರಯಾಣಿಕರು ಬಂದಿದ್ದಾರೆ. ಅವರಲ್ಲಿ 3,061 ಪ್ರಯಾಣಿಕರನ್ನು ಪತ್ತೆ ಹಚ್ಚಲಾಗಿದೆ. ಇಂಗ್ಲೆಂಡ್ನಿಂದ ರಾಜ್ಯಕ್ಕೆ ಬಂದು ಹೊರ ರಾಜ್ಯಕ್ಕೆ ತೆರಳಿದ ಪ್ರಯಾಣಿಕರ ಸಂಖ್ಯೆ 594 ಆಗಿದ್ದು, ಅವರಲ್ಲಿ 75 ಪ್ರಯಾಣಿಕರು ಈವರೆಗೆ ಪತ್ತೆಯಾಗಿಲ್ಲ ಎಂದು ತಿಳಿಸಿದರು.
ಈವರೆಗೆ 2,292 ಪ್ರಯಾಣಿಕರಿಗೆ ಆರ್ಟಿಪಿಸಿಆರ್ ಪರೀಕ್ಷೆ ನಡೆಸಲಾಗಿದ್ದು, 176 ಮಂದಿಯ ಫಲಿತಾಂಶ ಬರಬೇಕಿದೆ. ಒಟ್ಟು 34 ಪ್ರಯಾಣಿಕರಲ್ಲಿ ಕೋವಿಡ್-19 ಸೋಂಕು ಪತ್ತೆಯಾಗಿದೆ ಎಂದು ಸರಕಾರ ನೀಡಿದ ಲಿಖೀತ ಹೇಳಿಕೆಯಲ್ಲಿ ಮಾಹಿತಿ ನೀಡಲಾಗಿದೆ.
ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಪತ್ತೆಯಾಗಿರುವ 3,061 ಪ್ರಯಾಣಿಕರ ಪೈಕಿ 2,292 ಪ್ರಯಾಣಿಕರನ್ನು ಮಾತ್ರ ಆರ್ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿದೆ. ಉಳಿದ 700ಕ್ಕೂ ಹೆಚ್ಚು ಪ್ರಯಾಣಿಕರಿಗೆ ಯಾಕೆ ಪರೀಕ್ಷೆ ನಡೆಸಿಲ್ಲ ಎಂದು ಪ್ರಶ್ನಿಸಿ, ವಿಚಾರಣೆಯನ್ನು ಜ.12ಕ್ಕೆ ಮುಂದೂಡಿತು.
ಏಳು ಲ್ಯಾಬ್ಗಳಿಗೆ ದಂಡ
ಆರ್ಟಿಪಿಆರ್ ಪರೀಕ್ಷೆಯ ಫಲಿತಾಂಶವನ್ನು 48 ಗಂಟೆಗಳಿಗಿಂತ ವಿಳಂಬವಾಗಿ ನೀಡುವ ಮತ್ತು ಐಸಿಎಂಆರ್ ವೆಬ್ಪೋರ್ಟಲ್ನಲ್ಲಿ ವಿಳಂಬವಾಗಿ ದಾಖಲಿಸುವ ಖಾಸಗಿ ಪ್ರಯೋಗಾಲಯಗಳಿಗೆ ಪರೀಕ್ಷೆಗೆ ತಗಲಿರುವ ಮೊತ್ತದಲ್ಲಿ ಶೇ. 10ರಷ್ಟು ದಂಡ ವಿಧಿಸಬೇಕಾಗುತ್ತದೆ. ಅದರಂತೆ ನಗರದ ಏಳು ಖಾಸಗಿ ಪ್ರಯೋಗಾಲಯಗಳಲ್ಲಿ ಒಟ್ಟು 410 ಪ್ರಕರಣಗಳಲ್ಲಿ ಫಲಿತಾಂಶ ವಿಳಂಬವಾಗಿದೆ. ಅದಕ್ಕಾಗಿ ಅವುಗಳಿಗೆ ದಂಡ ವಿಧಿಸಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ