ಅಪಘಾತ ತಡೆಯಲು “ಕೃತಕ ಬುದ್ಧಿಮತ್ತೆ’
Team Udayavani, Jun 11, 2021, 6:50 AM IST
ಬೆಂಗಳೂರು: ಸಂಚರಿಸುತ್ತಿರುವ ಸರಕಾರಿ ಬಸ್ ಯಾವುದಾ ದರೂ ವಾಹನಕ್ಕೆ ಢಿಕ್ಕಿ ಹೊಡೆಯುವ ಮೊದಲೇ ಚಾಲಕನಿಗೆ ಅಪಾಯದ ಮುನ್ಸೂಚನೆ ಸಿಗುವಂಥ ತಂತ್ರ ಜ್ಞಾನದ ಬಳಕೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮುಂದಾಗಿದೆ.
ಕೆಲವು ಮುಂದುವರಿದ ರಾಷ್ಟ್ರ ಗಳಲ್ಲಿ ಇಂತಹ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ. ಆದರೂ, ಸರಕಾರಿ ಸಾರಿಗೆ ಕ್ಷೇತ್ರಕ್ಕೆ ಇದು ಹೊಸದು. ಬೇರೆ ವಾಹನ ಸಮೀಪಕ್ಕೆ ಬಂದಾಗ ಅಥವಾ ಚಾಲಕ ನಿದ್ರಿಸುತ್ತಿದ್ದರೆ ಅಲಾರಂ ಮಾಡಿ ಕಂಟ್ರೋಲ್ ರೂಂಗೆ ಮಾಹಿತಿ ರವಾನಿಸುತ್ತದೆ ಸಚಿವ ಲಕ್ಷ್ಮಣ ಸವದಿ ತಿಳಿಸಿದರು.
“ಮೊದಲ ಹಂತದಲ್ಲಿ ಕೆಎಸ್ಆರ್ಟಿಸಿಯ 1,044 ಬಸ್ಗಳಲ್ಲಿ ಈ ತಂತ್ರಜ್ಞಾನವನ್ನು ಅಳವಡಿಸಲು ಉದ್ದೇಶಿ ಸಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ವಾಹನಗಳಿಗೆ ವಿಸ್ತರಿಸಲಾಗುವುದು ಎಂದು ಸವದಿ ತಿಳಿಸಿದ್ದಾರೆ.
ಯಾವ ಮಾರ್ಗಕ್ಕೆ ಆದ್ಯತೆ? :
ಘಟ್ಟ ಪ್ರದೇಶಗಳು ಹಾಗೂ ಹೆಚ್ಚು ಅಪಘಾತ ಸಂಭವಿಸುವ ಮಾರ್ಗ ಗಳಲ್ಲಿ ರಾತ್ರಿ ವೇಳೆ ಸಂಚರಿಸುವ ಬಸ್ಗಳಲ್ಲಿ ಈ ತಂತ್ರಜ್ಞಾನಗಳನ್ನು ಅಳವಡಿಸಲಾಗುವುದು. ದಕ್ಷಿಣ ಭಾರತದ ಸಾರ್ವಜನಿಕ ಸಾರಿಗೆ ಗಳಲ್ಲಿ ಇದು ಮೊದಲ ಪ್ರಯೋಗ ಎಂದು ಕೆಎಸ್ಆರ್ಟಿಸಿ ಎಂ.ಡಿ. ಶಿವಯೋಗಿ ಕಳಸದ ತಿಳಿಸಿದರು.
ಕೃತಕ ಬುದ್ಧಿಮತ್ತೆಯನ್ನು ಪ್ರಯಾಣಿಕರ ಸುರಕ್ಷೆಗಾಗಿ ಅಳವಡಿಸಲು ನಿಗಮವು ಉದ್ದೇಶಿಸಿದೆ. ಇದನ್ನು ಅಳವಡಿಸಿರುವ ಬಸ್ಗಳ 30 ಮೀಟರ್ ಅಂತರದಲ್ಲಿ ಯಾವುದೇ ವಾಹನ ಹಾದುಹೋದರೆ ಚಾಲಕನಿಗೆ ಎಚ್ಚರಿಕೆ ನೀಡುತ್ತದೆ. ಸಾರ್ವಜನಿಕ ಸಾರಿಗೆ ಕ್ಷೇತ್ರದ ಇತಿಹಾಸದಲ್ಲಿ ಇದು ವಿನೂತನ ಪ್ರಯೋಗ.–ಲಕ್ಷ್ಮಣ ಸವದಿ , ಸಾರಿಗೆ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ