ರಾಯರ ಮಠದಲ್ಲಿ ಆಷಾಢ ಏಕಾದಶಿ ಪೂಜೆ
Team Udayavani, Jul 2, 2020, 7:27 AM IST
ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಆಷಾಢ ಶುಕ್ಲ ಏಕಾದಶಿ ಪ್ರಯುಕ್ತ ಬುಧವಾರ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನೆರವೇರಿಸಲಾಯಿತು. ರಾಯರ ಮೂಲಬೃಂದಾವನ ಸೇರಿ ಮಠದ ಆವರಣದಲ್ಲಿರುವ ಯತಿಗಳ ಬೃಂದಾವನಗಳಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.
ಮೂಲರಾಮ ದೇವರಿಗೆ ವಿಶೇಷ ಪೂಜೆ, ಶ್ರೀಗುರು ಸಾರ್ವಭೌಮರ ಮೂಲ ಬೃಂದಾವನಕ್ಕೆ ವಿಶೇಷ ಮಂಗಳಾರತಿ ನೆರವೇರಿಸಿದರು. ಬಳಿಕ ಮಠದಲ್ಲಿ ಸುದರ್ಶನ ಹೋಮ ಜರುಗಿಸಿ ಮುದ್ರಾಧಾರಣೆ ಮಾಡಿಕೊಂಡರು. ಈ ವೇಳೆ ಅನುಗ್ರಹ ಸಂದೇಶ ನೀಡಿದ ಶ್ರೀಗಳು, ಭಕ್ತರು ಕೋವಿಡ್ 19 ವೈರಸ್ನಿಂದ ಜಾಗೃತಿ ವಹಿಸಬೇಕು. ಈ ಬಾರಿ ನೇರವಾಗಿ ಮುದ್ರಾಧಾರಣೆ ಮಾಡಲು ಆಗಿಲ್ಲ.
ರಾಯರ ಪೂಜಾ ಕಾರ್ಯಕ್ರಮಗಳನ್ನು ಸಾಮಾಜಿಕ ಜಾಲತಾಣಗಳಲ್ಲೇ ಕಣ್ತುಂಬಿಕೊಳ್ಳಬೇಕು ಎಂದರು. ಈ ವೇಳೆ ಮಠದ ಪಂಡಿತರು, ವಿದ್ವಾಂಸರು, ಶಿಷ್ಯರು, ಅಧಿಕಾರಿ, ಸಿಬ್ಬಂದಿ ವರ್ಗದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ