ನಮ್ಮತನವಿರುವ ಶಿಕ್ಷಣ ಪದ್ಧತಿಗೆ ಒತ್ತು: ಸಚಿವ ಅಶ್ವತ್ಥನಾರಾಯಣ


Team Udayavani, Mar 5, 2023, 10:10 PM IST

ನಮ್ಮತನವಿರುವ ಶಿಕ್ಷಣ ಪದ್ಧತಿಗೆ ಒತ್ತು: ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ಭಾರತದ ಮೇಲೆ ದಾಳಿ ಮಾಡಿದ ವಿದೇಶೀ ಆಕ್ರಮಣಕಾರರು ನಮ್ಮ ಶಿಕ್ಷಣ ಪದ್ಧತಿಯನ್ನೇ ಸಂಪೂರ್ಣ ಹಾಳು ಮಾಡಿದರು. ನಾವೀಗ ಕೇವಲ ಗುಮಾಸ್ತರನ್ನು ಸೃಷ್ಟಿಸುವಂತಹ ಮೆಕಾಲೆ ಪ್ರಣೀತ ಶಿಕ್ಷಣ ಪದ್ಧತಿಯಿಂದ ನಿಧಾನವಾಗಿ ಹೊರಬರುತ್ತಿದ್ದು, ದೇಶದ ಅಗತ್ಯಗಳಿಗೆ ತಕ್ಕ ಶೈಕ್ಷಣಿಕ ಕ್ರಮವನ್ನು ರೂಪಿಸುತ್ತಿದ್ದೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

‘ಅಂಡರ್ 25’ ಸಂಸ್ಥೆಯು ಏರ್ಪಡಿಸಿದ್ದ ಯುವ ಸಮಾವೇಶದಲ್ಲಿ ಭಾನುವಾರ ಸಂವಾದದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದೇಶದ ವಿವಿಧ ಭಾಗಗಳ 25 ವರ್ಷದೊಳಗಿನ ಯುವಕರು ಎರಡು ದಿನಗಳ ಸಮಾವೇಶದಲ್ಲಿ ಭಾಗವಹಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ದೇಶವು ಅಮೃತ ಕಾಲದಲ್ಲಿ ಮುನ್ನಡೆಯುತ್ತಿದೆ. ಸ್ವಾವಲಂಬನೆ ಮತ್ತು ಉದ್ಯೋಗ ಗಳಿಕೆ ಎರಡನ್ನೂ ಸಾಧ್ಯವಾಗಿಸುವಂತಹ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನದೊಂದಿಗೆ ನಮ್ಮ ಸ್ವಾತಂತ್ರವು ಪರಿಪೂರ್ಣವಾಗಲಿದೆ. ಜೊತೆಗೆ, ದೇಶದ ಯುವಜನರಲ್ಲಿ ಸಮರ್ಥ ನಾಯಕತ್ವ ಸೃಷ್ಟಿಯಾಗಲಿದೆ ಎಂದು ಅವರು ಆಶಿಸಿದರು.

ಕರ್ನಾಟಕವು ಸ್ಟಾರ್ಟಪ್‌, ಎಂಜಿನಿಯರಿಂಗ್, ಸೆಮಿಕಂಡಕ್ಟರ್, ಐಟಿ, ಬಿಟಿ, ಸಂಶೋಧನೆ, ಕೈಗಾರಿಕಾ ಬೆಳವಣಿಗೆಗಳಲ್ಲಿ ಅಗ್ರಸ್ಥಾನದಲ್ಲಿದೆ. ರಾಜ್ಯವು ಎಲ್ಲ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದು ನಿರುದ್ಯೋಗ ನಿವಾರಣೆಗೆ ರಚನಾತ್ಮಕ ಕ್ರಮಗಳನ್ನು ಕೈಗೊಂಡಿದೆ. ಇದರ ಭಾಗವಾಗಿ ರಾಜ್ಯದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಕಡ್ಡಾಯಗೊಳಿಸಿದ್ದು, ಸರಕಾರದ ವತಿಯಿಂದ ಉಚಿತವಾಗಿ ಕೊಡಲಾಗುತ್ತಿದೆ ಎಂದು ಅವರು ತಿಳಿಸಿದರು.

ನಾಯಕತ್ವವು ನಿರ್ವಾತದಲ್ಲಿ ಸೃಷ್ಟಿಯಾಗುವುದಿಲ್ಲ. ಅದಕ್ಕೆ ತಕ್ಕ ಕಾರ್ಯ ಪರಿಸರ ಮತ್ತು ಹೊಣೆಗಾರಿಕೆಯನ್ನು ತಮ್ಮದೆಂದು ಭಾವಿಸುವ ಮನೋಭಾವ ಅತ್ಯಗತ್ಯವಾಗಿ ಬೇಕಾಗುತ್ತವೆ. ರಾಜ್ಯದ ಉನ್ನತ ಶಿಕ್ಷಣ ಕ್ರಮದಲ್ಲಿ ಇಂತಹ ಅಂಶಗಳನ್ನು ಪರಿಗಣಿಸಲಾಗಿದೆ. ಇಲ್ಲಿ ಎಲ್ಲರೂ ದೈಹಿಕ, ಮಾನಸಿಕ, ಸಾಂಸ್ಕೃತಿಕ, ಸಾಮಾಜಿಕ ಮತ್ತಿತರ ಜವಾಬ್ದಾರಿಗಳನ್ನು ನಿರ್ವಹಿಸುವಂತಹ ವಾತಾವರಣವನ್ನು ಸೃಷ್ಟಿಸಲಾಗುತ್ತಿದೆ ಎಂದು ಅವರು ನುಡಿದರು.

ರಾಜ್ಯದಲ್ಲಿ ಜಾಗತಿಕ ಮಟ್ಟದ ನೂರಾರು ಕಂಪನಿಗಳಿದ್ದು, ಉದ್ಯೋಗಾವಕಾಶಕ್ಕೇನೂ ಕೊರತೆ ಇಲ್ಲ. ಇನ್ನೊಂದೆಡೆಯಲ್ಲಿ ನಮ್ಮಲ್ಲಿಗೆ ಅಗಾಧ ಪ್ರಮಾಣದ ಬಂಡವಾಳ ಕೂಡ ಹರಿದು ಬರುತ್ತಿದೆ. ಇವುಗಳನ್ನು ನಮ್ಮ ಯುವಜನರ ಭವಿಷ್ಯಕ್ಕೆ ಪೂರಕವಾಗಿ ಬಳಸಿಕೊಳ್ಳಲು ನಾವು ಬಯಸಿದ್ದೇವೆ. ಏಕೆಂದರೆ, ಪ್ರತಿಯೊಬ್ಬರಿಗೂ ಉದ್ಯೋಗವನ್ನು ದೊರಕಿಸಿ ಕೊಡುವುದು ಸಮಾಜದ ಆರ್ಥಿಕ ಮತ್ತು ಇನ್ನಿತರ ಬೆಳವಣಿಗೆಯ ದೃಷ್ಟಿಯಿಂದ ಅತ್ಯಂತ ಮಹತ್ತ್ವದ್ದಾಗಿದೆ ಎಂದು ಅವರು ಪ್ರತಿಪಾದಿಸಿದರು.

ಕಾರ್ಯಕ್ರಮದಲ್ಲಿ, ಅಂಡರ್ 25 ಸಂಸ್ಥೆಯ ಸಹಸಂಸ್ಥಾಪಕ ಶ್ರೇಯಾಂಶ್ ಜೈನ್‌ ಉಪಸ್ಥಿತರಿದ್ದರು.

ಇದನ್ನೂ ಓದಿ: ತನಿಖೆ ನೆಪದಲ್ಲಿ ಸಿಬಿಐ ಅಧಿಕಾರಿಗಳಿಂದ ಮನೀಶ್ ಸಿಸೋಡಿಯಾ ಗೆ ಮಾನಸಿಕ ಹಿಂಸೆ: ಆಪ್ ಆರೋಪ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.