ಮಲ್ಲೇಶ್ವರಂ ಕ್ಷೇತ್ರದಲ್ಲಿ ಲಸಿಕಾ ಅಭಿಯಾನ ತ್ವರಿತಗೊಳಿಸಲು ಅಶ್ವತ್ಥ ನಾರಾಯಣ ಒತ್ತು
Team Udayavani, Jul 4, 2021, 1:09 PM IST
ಬೆಂಗಳೂರು: ಮಲ್ಲೇಶ್ವರಂ ಕ್ಷೇತ್ರ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆಯ ಮೊದಲನೇ ಡೋಸ್ ಇನ್ನೂ ಯಾರಿಗೆ ಆಗಿಲ್ಲವೋ ಅಂಥವರ ಹೆಸರುಗಳ ಪಟ್ಟಿಯನ್ನು ತಮ್ಮ ಕಚೇರಿಗೆ ಸಲ್ಲಿಸುವಂತೆ ಕ್ಷೇತ್ರದ ಶಾಸಕರೂ ಆದ ಉಪ ಮುಖ್ಯಮಂತ್ರಿ ಹಾಗೂ ರಾಜ್ಯ ಕೋವಿಡ್ ಕಾರ್ಯಪಡೆ ಮುಖ್ಯಸ್ಥರಾದ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ಮನವಿ ಮಾಡಿದ್ದಾರೆ.
ಈ ಕುರಿತು ಕ್ಷೇತ್ರ ವ್ಯಾಪ್ತಿಯ ಸಂಘ ಸಂಸ್ಥೆಗಳಿಗೆ ಅವರು ಪತ್ರ ಬರೆದಿದ್ದಾರೆ. ಕೋವಿಡ್ ಲಸಿಕೆಯ ಒಂದನೇ ಡೋಸ್ ಹಾಕಿಸಿಕೊಳ್ಳಬೇಕಾಗಿರುವವರ 18 ವರ್ಷವಾದವರ ಪಟ್ಟಿಯನ್ನು ತಮ್ಮ ಕ್ಷೇತ್ರ ಕಚೇರಿಗೆ ಸಲ್ಲಿಸಲು ಅಥವಾ +91 80 23563944 ಸಂಖ್ಯೆಯನ್ನು ಬೆಳಿಗ್ಗೆ 9ರಿಂದ- ಸಂಜೆ 5ರೊಳಗೆ ಸಂಪರ್ಕಿಸಿ ಮಾಹಿತಿ ಕೊಡಲು ಕೋರಿದ್ದಾರೆ.
ಮೇ ತಿಂಗಳಿಂದ ಇಲ್ಲಿಯವರೆಗೆ ಕ್ಷೇತ್ರದ ಎಲ್ಲಾ ವಾರ್ಡ್ ಗಳಲ್ಲಿ 81 ಲಸಿಕಾ ಶಿಬಿರಗಳನ್ನು ನಡೆಸಲಾಗಿದ್ದು, 18ರಿಂದ 45 ವಯೋಮಾನದೊಳಗಿನ 40,043 ನಾಗರಿಕರು ಪ್ರಯೋಜನ ಪಡೆದಿದ್ದಾರೆ. 45 ವರ್ಷವಾದವರನ್ನು ಸರ್ಕಾರಿ ಲಸಿಕಾ ಕೇಂದ್ರಗಳಿಗೆ ತೆರಳಲು ಉತ್ತೇಜಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಮಲ್ಲೇಶ್ವರಂ ಕ್ಷೇತ್ರವು 18 ವರ್ಷ ಮೇಲ್ಪಟ್ಟವರಿಗೆ ಶೇ 100ರಷ್ಟು ಲಸಿಕೆ ಪೂರೈಸಿದ ಮೊದಲ ಕ್ಷೇತ್ರವಾಗಬೇಕೆಂಬ ಗುರಿಯೊಂದಿಗೆ ಕೆಲಸ ಮಾಡಲಾಗುತ್ತಿದೆ, ಲಸಿಕಾ ವ್ಯಾಪ್ತಿಗೆ ಎಲ್ಲರನ್ನೂ ಒಳಪಡಿಸಲು ಅಗತ್ಯ ಸಹಕಾರ ನೀಡಬೇಕು. ಈ ಸಂಬಂಧ ಯಾವುದೇ ಮಾಹಿತಿಯನ್ನು [email protected] ಗೆ ಇ-ಮೇಲ್ ಕೂಡ ಮಾಡಬಹುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
MUST WATCH
ಹೊಸ ಸೇರ್ಪಡೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ
FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್
Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ
Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ