ಮಿಸ್ಟರ್ ಡಿಕೆಶಿ ಗೂಂಡಾಗಿರಿ ಬಿಡಿ,ಪ್ರಜಾಪ್ರಭುತ್ವ ಆಶಯಕ್ಕೆ ಧಕ್ಕೆ ತರಬೇಡಿ;ಅಶ್ವತ್ಥನಾರಾಯಣ

ನಾನು ಹೀಗೆ ಮಾತನಾಡಬೇಕೆಂದು ಹೇಳುವ ಹಕ್ಕು ಯಾರಿಗೂ ಇಲ್ಲ.

Team Udayavani, Jan 4, 2022, 4:34 PM IST

ಮಿಸ್ಟರ್ ಡಿಕೆಶಿ ಗೂಂಡಾಗಿರಿ ಬಿಡಿ,ಪ್ರಜಾಪ್ರಭುತ್ವ ಆಶಯಕ್ಕೆ ಧಕ್ಕೆ ತರಬೇಡಿ;ಅಶ್ವತ್ಥನಾರಾಯಣ

ಬೆಂಗಳೂರು: ಮಿಸ್ಟರ್ ಡಿಕೆಶಿ ಗೂಂಡಾಗಿರಿ ಬಿಡಿ, ಪ್ರಜಾಪ್ರಭುತ್ವದ ಆಶಯಕ್ಕೆ ಧಕ್ಕೆ ತರಬೇಡಿ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ತಿರುಗೇಟು ಮಾಡಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಮನಗರಕ್ಕೂ ನನಗೂ ಏನು ಸಂಬಂಧ ಎಂದು ಕೇಳುವ ಡಿ.ಕೆ.ಶಿವಕುಮಾರ್ ಪ್ರಶ್ನೆಗೆ ಚಿಕ್ಕಕಲ್ಯ ನಾರಾಯಣಪ್ಪ ಅಶ್ವತ್ಥನಾರಾಯಣ ಎಂಬ ನನ್ನ ಪೂರ್ಣ ಹೆಸರು ನೆನಪಿಸಬೇಕಿದೆ ಎಂದು ಹೇಳಿದ್ದಾರೆ.

ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು ಸರಕಾರದ ವತಿಯಿಂದ ಏರ್ಪಡಿಸಿದ್ದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿಪಡಿಸಿ, ಗೂಂಡಾಗಿರಿ ಪ್ರದರ್ಶಿಸಿದ್ದು ಖಂಡನೀಯ.

ರಾಮನಗರ ಜಿಲ್ಲೆಗೆ ದೊಡ್ಡ ಇತಿಹಾಸವಿದೆ. ನಾಡಪ್ರಭು ಕೆಂಪೇಗೌಡ, ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಗಳು, ಆದಿಚುಂಚನಗಿರಿ ಮಠದ ಶ್ರೀ ಬಾಲಗಂಗಾನಾಥ ಸ್ವಾಮೀಜಿಗಳು ಈ ಜಿಲ್ಲೆಯಲ್ಲೇ ಜನಿಸಿದ ಪುಣ್ಯಪುರುಷರು. ಜೊತೆಗೆ ಕೆಂಗಲ್ ಹನುಮಂತಯ್ಯ, ಎಚ್.ಡಿ.ದೇವೇಗೌಡರು, ಕುಮಾರಸ್ವಾಮಿಯವರು ಜಿಲ್ಲೆಯನ್ನು ಪ್ರತಿನಿಧಿಸಿರುವ ಪರಂಪರೆ ಇದೆ. ಆದರೆ, ಕಾಂಗ್ರೆಸ್ ಕಾರ್ಯಕರ್ತರು ದುರುದ್ದೇಶಪೂರ್ವಕವಾಗಿಯೇ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವ ಮೂಲಕ ಜಿಲ್ಲೆಯ ಸಂಸ್ಕೃತಿಗೆ ಮಸಿ ಬಳಿದಿದ್ದಾರೆ’ ಎಂದು ಹರಿಹಾಯ್ದರು.

ಮುಖ್ಯಮಂತ್ರಿಗಳು ಬಂದಾಗ ಪಕ್ಷಾತೀತವಾಗಿ ಗೌರವಿಸಬೇಕು. ಇಷ್ಟಕ್ಕೂ ನಾವು ಆಯೋಜಿಸಿದ್ದು ಸರಕಾರದ ಕಾರ್ಯಕ್ರಮ. ಇಂತಹ ಕಾರ್ಯಕ್ರಮಕ್ಕೆ ಶುರುವಿನಿಂದಲೂ ಅಡ್ಡಿಪಡಿಸಬೇಕು ಎನ್ನುವ ಪಿತೂರಿ ಕಾಂಗ್ರೆಸ್ ಕಾರ್ಯಕರ್ತರದಾಗಿತ್ತು. ಇವರ ಈ ವರ್ತನೆಯಿಂದ ರಾಮನಗರ ಜಿಲ್ಲೆಯ ಜನ ರಾಜ್ಯದ ಮುಂದೆ ತಲೆ ತಗ್ಗಿಸುವಂತಾಯಿತು. ಈ ಕೃತ್ಯದಿಂದ ತಮಗೆ ಅತೀವ ನೋವಾಗಿರುವುದು ನಿಜ. ಆದರೆ, ಇಂತಹ ಕಿಡಿಗೇಡಿತನವನ್ನು ಮಟ್ಟ ಹಾಕಲಾಗುವುದು’ ಎಂದು ಅವರು ಖಡಕ್ಕಾಗಿ ಎಚ್ಚರಿಸಿದರು.

`ಬಿಜೆಪಿ ನೇತೃತ್ವದ ಸರಕಾರ ಮಾಡುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಕಂಡು ಕಾಂಗ್ರೆಸ್ಸಿಗರು ಆತಂಕಕ್ಕೆ ಒಳಗಾಗಿದ್ದಾರೆ. ಮುಖ್ಯಮಂತ್ರಿಗಳಿಗೇ ಆಗಲಿ, ಸಚಿವರಿಗೇ ಆಗಲಿ, ಹೀಗೆಯೇ ಮಾತನಾಡಬೇಕೆಂದು ಹೇಳುವ ಹಕ್ಕು ಯಾರಿಗೂ ಇಲ್ಲ. ಇಂತಹ ಅನಾಗರಿಕತೆಯನ್ನು ನಾವು ಎಳ್ಳಷ್ಟೂ ಸಹಿಸಿಕೊಳ್ಳುವುದಿಲ್ಲ,’ ಎಂದು ಅಶ್ವತ್ಥನಾರಾಯಣ ಗರಂ ಆದರು.

ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲೆಯ ಸಂಸ್ಕೃತಿಗೆ ಕಳಂಕ ಮೆತ್ತಿದ್ದಾರೆ. ಇದಕ್ಕಾಗಿ ಅವರು ಜನತೆಯ ಕ್ಷಮೆ ಕೋರಬೇಕು. ಇದು ಕಾಂಗ್ರೆಸ್ಸಿನ ಸಂಸ್ಕೃತಿ ಎಷ್ಟು ಕೀಳು ಮಟ್ಟದ್ದು ಎನ್ನುವುದನ್ನು ತೋರಿಸುತ್ತದೆ. ಇಂಥವರಿಗೆ ಹೇಗೆ ಪಾಠ ಕಲಿಸಬೇಕೆನ್ನುವುದು ಜಿಲ್ಲೆಯ ಜನರಿಗೆ ಗೊತ್ತಿದೆ ಎಂದು ಅವರು ಹೇಳಿದರು.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.