ಸಿಎಎ, ಎನ್‌ಆರ್‌ಸಿ ಕಾಯಿದೆ ವಿರೋಧಿಸಿ ಉಗ್ರ ನಂಟು!


Team Udayavani, Jul 27, 2022, 7:30 AM IST

ಕಾಯಿದೆ ವಿರೋಧಿಸಿ ಉಗ್ರ ನಂಟು!

ಬೆಂಗಳೂರು: ಬಂಧನಕ್ಕೆ ಒಳಗಾಗಿರುವ ಅಸ್ಸಾಂ ಮೂಲದ ಅಖ್ತರ್‌ ಹುಸೇನ್‌ ಲಷ್ಕರ್‌ ಮತ್ತು ಜುಬಾನ್‌ ಅಲಿಯಾಸ್‌ ಆದಿಲ್‌ ಅಲಿಯಾಸ್‌ ರೂಬಾ ಕೇಂದ್ರದ ಬಿಜೆಪಿ ಸರಕಾರವು ಸಿಎಎ ಮತ್ತು ಎನ್‌ಆರ್‌ಸಿ ಜಾರಿಗೆ ತಂದುದಕ್ಕೆ ಪ್ರತೀಕಾರ ತೀರಿಸಲು ಅಲ್‌ಕಾಯಿದಾ ಮತ್ತಿತರ ಉಗ್ರ ಸಂಘಟನೆಗಳ ಸಂಪರ್ಕ ಬೆಳೆಸಿಕೊಂಡಿದ್ದರು. ಇವರ ಪ್ರಾಥಮಿಕ ವಿಚಾರಣೆ ವೇಳೆ ಈ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಶಂಕಿತರು 3 ವರ್ಷಗಳ ಹಿಂದೆ ಕೇಂದ್ರ ಜಾರಿಗೆ ತಂದಿದ್ದ ಎನ್‌ಆರ್‌ಸಿ, ಸಿಎಎಗಳಿಗೆ ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಅಸ್ಸಾಂನಲ್ಲಿ ನಡೆದ ಪ್ರತಿಭಟನೆಗಳಲ್ಲೂ ಪಾಲ್ಗೊಂಡಿದ್ದರು. ಇವರಿಬ್ಬರ ಪೂರ್ವಜರು ಮ್ಯಾನ್ಮಾರ್‌ನಿಂದ ಬಾಂಗ್ಲಾದೇಶಕ್ಕೆ ವಲಸೆ ಬಂದಿದ್ದು, ಅನಂತರ ಅಸ್ಸಾಂನಲ್ಲಿ ನೆಲೆ ಕಂಡುಕೊಂಡಿದ್ದಾರೆ. ಅಸ್ಸಾಂನಲ್ಲಿ ಚುನಾವಣ ಗುರುತಿನ ಚೀಟಿ, ಆಧಾರ್‌ ಕಾರ್ಡ್‌ ಪಡೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಸ್ಸಾಂನಲ್ಲೇ ಉಗ್ರವಾದ
ಅಸ್ಸಾಂನಲ್ಲಿ ಇದ್ದಾಗಲೇ ಈ ಇಬ್ಬರು ಉಗ್ರವಾದದ ಬಗ್ಗೆ ಆಸಕ್ತಿ ಬೆಳೆಸಿಕೊಂಡಿದ್ದರು. ಅಖ್ತರ್‌ ಟೆಲಿಗ್ರಾಂನಲ್ಲಿ “ದಿ ಈಗಲ್‌ ಆಫ್ ಖೊರಾಸನ್‌ ಆ್ಯಂಡ್‌ ಹಿಂಡರ್‌- ಈಗಲ್‌’ ಎಂಬ ಗ್ರೂಪ್‌ ರಚಿಸಿದ್ದ. ಹಿಂದೂಗಳ ವಿರುದ್ಧ ಮುಸ್ಲಿಮರನ್ನು ಪ್ರಚೋದಿಸುತ್ತಿದ್ದ.

ಅಫ್ಘಾನಿಸ್ಥಾನ ಮತ್ತು ಪಾಕಿಸ್ಥಾನದಲ್ಲಿರುವ ಅಲ್‌ಕಾಯಿದಾ ಸದಸ್ಯರು ಈತನ ಪ್ರಚೋದನಕಾರಿ ಪೋಸ್ಟ್‌ಗಳನ್ನು ಗಮನಿಸಿ, ಭಾರತದಲ್ಲಿ ಇರುವ ತಮ್ಮ ಸ್ಲೀಪರ್ ಸೆಲ್‌ಗಳ ಮೂಲಕ ಈತನ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ಸಾಮಾಜಿಕ ಜಾಲತಾಣಗಳ ಮೂಲಕ ಈತನೂ ಅಲ್‌ಕಾಯಿದಾ ಸದಸ್ಯರನ್ನು ಸಂಪರ್ಕಿಸಿದ್ದ. ಸ್ನೇಹಿತ ಜುಬಾನ್‌ನನ್ನೂ ಉಗ್ರವಾದದ ಕಡೆ ಸೆಳೆದಿದ್ದ.

ಬೆಂಗಳೂರು ಮಾಹಿತಿಗಾಗಿ ಬಂದಿದ್ದರು!
ಮತ್ತೊಂದು ಸ್ಫೋಟಕ ವಿಚಾರವೆಂದರೆ ಈ ಶಂಕಿತರು ಅಲ್‌ಕಾಯಿದಾದ ಸೂಚನೆಯ ಮೇರೆಗೆ ಬೆಂಗಳೂರಿಗೆ ಬಂದು, ಫ‌ುಡ್‌ ಡೆಲಿವರಿ ಬಾಯ್‌ಗಳಾಗಿ ಕೆಲಸಕ್ಕೆ ಸೇರಿಕೊಂಡು ಇಲ್ಲಿನ ಪ್ರದೇಶಗಳ ಬಗ್ಗೆ ತಿಳಿದುಕೊಂಡಿದ್ದರು. ಆದರೆ ಯಾವುದೇ ನೀಲನಕ್ಷೆ ಸಿದ್ಧಪಡಿಸಿರಲಿಲ್ಲ. ಅಖ್ತರ್‌, ಜುಬಾನ್‌ ಜತೆಗೆ ನೆರೆ ರಾಜ್ಯಗಳಲ್ಲಿ ಇರುವ ಇತರ ಐವರು ಸೇರಿ ಒಟ್ಟು 7 ಮಂದಿ ಅಫ್ಘಾನಿಸ್ಥಾನಕ್ಕೆ ತೆರಳಲು ಸಿದ್ಧತೆ ನಡೆಸಿದ್ದರು. ಕಾಶ್ಮೀರದ ವರೆಗೆ ಸ್ವಂತ ಖರ್ಚಿನಲ್ಲಿ ಬರಬೇಕು. ಅಲ್ಲಿಂದ ಪಾಕಿಸ್ಥಾನ, ಕೆಲವು ದಿನಗಳ ಬಳಿಕ ಅಫ್ಘಾನ್‌ಗೆ ಕರೆಸಿಕೊಳ್ಳುವುದಾಗಿ 7 ಮಂದಿಗೂ ಸಂಘಟನೆಯವರು ಸೂಚಿಸಿದ್ದರು. ಅದರಂತೆ ಇಬ್ಬರು ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ಹೊರಡಲು ಸಿದ್ಧರಾಗಿದ್ದರು. ಉಳಿದ ಐವರು ಯಾರೆಂಬ ಮಾಹಿತಿ ಪಡೆಯಬೇಕಿದೆ ಎಂದು ಮೂಲಗಳು ತಿಳಿಸಿವೆ.

ಹಿಂದುತ್ವದ ವಿರುದ್ಧ ಉರಿ
“ಭಾರತದಲ್ಲಿ ಇರುವ ಕೆಲವು ಉಗ್ರ ಹಿಂದುತ್ವವಾದಿಗಳಿಗೆ ತಕ್ಕ ಪಾಠ ಕಲಿಸಬೇಕು’- ಇದು ನಿಷೇಧಿತ ಅಲ್‌ಕಾಯಿದಾ ಸಂಘಟನೆ ಬಿಡುಗಡೆ ಮಾಡಿರುವ ಪತ್ರದಲ್ಲಿ ಉಲ್ಲೇಖಿಸಲಾಗಿರುವ ಅಂಶ. ಈ ಪತ್ರ ಬಹಿರಂಗವಾಗುತ್ತಿದ್ದಂತೆ ದೇಶಾದ್ಯಂತ ಹೈಅಲರ್ಟ್‌ ಘೋಷಿಸಿ, ಸ್ಲೀಪರ್ ಸೆಲ್‌ಗಳಿಗಾಗಿ ಶೋಧ ಆರಂಭಿಸಲಾಗಿತ್ತು. ಇದರ ನಡುವೆ ನಗರದಲ್ಲಿ ಇಬ್ಬರು ಶಂಕಿತರು ಬಂಧನಕ್ಕೆ ಒಳಗಾಗಿದ್ದಾರೆ. “ದೇಶದಲ್ಲಿರುವ ಪ್ರಬಲ ಹಿಂದೂ ಮುಖಂಡರ ಅಂತ್ಯ ಸನ್ನಿಹಿತವಾಗಿದೆ. ಅವರು ದಿಲ್ಲಿ, ಗುಜರಾತ್‌, ಉತ್ತರ ಪ್ರದೇಶ, ಮುಂಬಯಿ ಸೇರಿ ಎಲ್ಲಿ ಅಡಗಿದರೂ ಬದುಕಲು ಸಾಧ್ಯವಿಲ್ಲ’ ಎಂದೂ ಪತ್ರದಲ್ಲಿ ಬರೆಯಲಾಗಿತ್ತು.

-ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.