ಪಂಜಾಬ್, ಗೋವಾ ರಾಜ್ಯದಲ್ಲಿ ಕೇಜ್ರಿವಾಲ್ “AAP” Ka Kya Hoga?
Team Udayavani, Mar 11, 2017, 1:12 PM IST
ನವದೆಹಲಿ:ಪಂಜಾಬ್ ಮತ್ತು ಗೋವಾ ರಾಜ್ಯದಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಕನಸು ಭಗ್ನವಾದಂತಾಗಿದೆ. ಪಂಜಾಬ್ ನಲ್ಲಿ ಅಧಿಕಾರದ ಗದ್ದುಗೆ ಏರುವ ಹುಮ್ಮಸ್ಸಿನಲ್ಲಿದ್ದ ಆಪ್ 2ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳುವಂತಾಗಿದೆ.
ಗೋವಾದಲ್ಲಿಯೂ ಆಪ್ ಪಕ್ಷದ ಮ್ಯಾಜಿಕ್ ಯಾವುದೇ ಕೆಲಸ ಮಾಡಿಲ್ಲ. ದೆಹಲಿಯಲ್ಲಿ ಅಧಿಕಾರದ ಗದ್ದುಗೆ ಏರಿದ್ದ ಆಮ್ ಆದ್ಮಿ ಪಕ್ಷ, ಪಂಜಾಬ್ ನಲ್ಲಿ ಅಧಿಕಾರ ಹಿಡಿಯುವ ಮೂಲಕ ದೆಹಲಿಯಿಂದ ಹೊರಗೂ ತನ್ನ ವರ್ಚಸ್ಸು ಬೆಳೆಸಿಕೊಳ್ಳುವ ಲೆಕ್ಕಚಾರ ಹಾಕಿತ್ತು.
ಆದರೆ ಪಂಜಾಬ್ ನಲ್ಲಿ ಆಪ್ ಪಕ್ಷದ ಲೆಕ್ಕಚಾರ ತಲೆಕೆಳಗಾಗಿದೆ. ಪಂಜಾಬ್ ನಲ್ಲಿ ಅಮರೀಂದರ್ ಸಿಂಗ್ ಅವರ “ಕೈ’ ಹಿಡಿಯುವ ಮೂಲಕ ಕಾಂಗ್ರೆಸ್ ಅಧಿಕಾರದ ಗದ್ದುಗೆಗೆ ಏರಿದೆ.
ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಪ್ ಅಥವಾ ಕಾಂಗ್ರೆಸ್ ಅಧಿಕಾರ ಹಿಡಿಯುವ ಸಾಧ್ಯತೆ ಇರುವುದಾಗಿ ಮತಗಟ್ಟೆ ಸಮೀಕ್ಷೆ ತಿಳಿಸಿತ್ತು.
ಪಂಜಾಬ್ ನಲ್ಲಿ ಆಪ್ ನ ಭಗವಂತ್ ಮಾನ್ ಪ್ರಮುಖ ಅಭ್ಯರ್ಥಿಯಾಗಿ ಅಖಾಡಕ್ಕಿಳಿದಿದ್ದರು. 117 ಸದಸ್ಯ ಬಲದ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ 100 ಸ್ಥಾನ ಗಳಿಸುವುದಾಗಿ ಆಪ್ ಹೇಳಿತ್ತು. ಗೋವಾ ಮತ್ತು ಪಂಜಾಬ್ ನಲ್ಲಿನ ಫಲಿತಾಂಶದಿಂದ ನಿರಾಸೆಯಾಗಿದೆ ಎಂದು ಆಪ್ ನ ಸೋಮನಾಥ ಭಾರ್ತಿ ಪ್ರತಿಕ್ರಿಯೆ ನೀಡಿದ್ದಾರೆ.
ನಾವು ರಾಜಕೀಯಕ್ಕೆ ಹೊಸಬರು, ಚುನಾವಣೆಯಲ್ಲಿ ನಂಬರ್ ಗೇಮ್ ಮುಖ್ಯ ಎಂಬುದರ ಬಗ್ಗೆ ಲೆಕ್ಕಚಾರ ಹಾಕಿಲ್ಲ. ನಾವು ಕಠಿಣ ಕೆಲಸದಲ್ಲಿ ಭರವಸೆ ಇಟ್ಟಿದ್ದೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ