ಜಾನಪದ ಪರಿಷತ್ತು: 30 ಜನರ ಕಾಯಂಗೆ ಪರಿಶೀಲಿಸಿ ಕ್ರಮ: ಸುನಿಲ್ ಕುಮಾರ್
Team Udayavani, Sep 19, 2022, 8:57 PM IST
ವಿಧಾನ ಪರಿಷತ್ತು: ಕರ್ನಾಟಕ ಜಾನಪದ ಪರಿಷತ್ತು ಹೊರಗುತ್ತಿಗೆ ಆಧಾರದ ಮೆಲೆ ನೇಮಕ ಮಾಡಿಕೊಂಡ 30 ಜನರನ್ನು ಕಾಯಂಗೊಳಿಸುವ ಬಗ್ಗೆ ಆರ್ಥಿಕ ಇಲಾಖೆ ಅಭಿಪ್ರಾಯದೊಂದಿಗೆ ನಿಯಮಾನುಸಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ತಿಳಿಸಿದರು.
ಸೋಮವಾರ ಪ್ರಶ್ನೋತ್ತರ ವೇಳೆ ಕಾಂಗ್ರೆಸ್ನ ಎಂ.ಎಲ್. ಅನಿಲ್ ಕುಮಾರ್ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಾನಪದ ಪರಿಷತ್ತು ಶಾಶ್ವತ ಅನುದಾನ ಸಂಹಿತೆಗೆ ಒಳಪಡಿಸಿದ ಸಂದರ್ಭದಲ್ಲಿ ಮಂಜೂರಾದ ಹುದ್ದೆಗಳನ್ನು ಹೊರತುಪಡಿಸಿ 30 ಜನರನ್ನು ಹೊರಗುತ್ತಿಗೆ ಆಧಾರದಲ್ಲಿ ಹೆಚ್ಚುವರಿಯಾಗಿ ನೇಮಕ ಮಾಡಿಕೊಂಡಿದೆ. ಈ ವೇಳೆ ಯಾವುದೇ ಮಾನದಂಡಗಳು ಮತ್ತು ಸರ್ಕಾರದ ಪೂರ್ವಾನುಮತಿಯನ್ನೂ ಪಡೆದಿಲ್ಲ. ಅವರನ್ನು ಹೇಗೆ ಮುಂದುವರಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಿದರು.
ಇಂತಹ ಸಿಬ್ಬಂದಿಗೆ ವೇತನ ಪಾವತಿಗೆ ನಿಯಮಗಳಲ್ಲಿ ಅವಕಾಶ ಇರುವುದಿಲ್ಲ. ಈ ಮಧ್ಯೆ ಕಾಯಂ ಮಾಡಿಕೊಳ್ಳುವಂತೆ ಪರಿಷತ್ತು ಕೋರಿದೆ. ಆದ್ದರಿಂದ ನಿಯಮ ಮೀರಿ ನೇಮಕ ಮಾಡಿಕೊಂಡ ಈ ಸಿಬ್ಬಂದಿ ಕುರಿತು ಕೆಲವು ಸ್ಪಷ್ಟೀಕರಣ ಕೋರಿದ್ದು, ಉತ್ತರ ನಿರೀಕ್ಷಿಸಲಾಗಿದೆ. ಪರಿಷತ್ತಿನಿಂದ ಉತ್ತರ ಬಂದ ನಂತರ ಆರ್ಥಿಕ ಇಲಾಖೆ ಅಭಿಪ್ರಾಯ ಪಡೆದು ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸುನಿಲ್ ಕುಮಾರ್ ಸ್ಪಷ್ಟಪಡಿಸಿದರು.
“ಕನ್ನಡ-ಸಂಸ್ಕೃತಿ ಇಲಾಖೆಯಲ್ಲೇ ಇರಲಿ ಜಾನಪದ ವಿವಿ’
ಜಾನಪದ ವಿಶ್ವವಿದ್ಯಾಲಯವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲೇ ಉಳಿಸಿ, ಅಲ್ಲಿ ಚಟುವಟಿಕೆಗಳು ನಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮನವಿ ಮಾಡಿದರು.
ಪ್ರಶ್ನೋತ್ತರ ವೇಳೆ ಕಾಂಗ್ರೆಸ್ ಅನಿಲ ಕುಮಾರ್ ಕೇಳಿದ ಪ್ರಶ್ನೆಗೆ ಸಂಬಂಧಿಸಿದ ಚರ್ಚೆಯಲ್ಲಿ ಮಾತನಾಡಿದ ಅವರು, “ನಾನು ಕನ್ನಡ ಮತ್ತು ಸಂಸ್ಕೃತಿ ಸಚಿವನಾಗಿದ್ದಾಗಲೇ ಜಾನಪದ ವಿವಿ ಆರಂಭಿಸಲಾಯಿತು. ಅದಕ್ಕೆ ಅನುದಾನವನ್ನೂ ಬಿಡುಗಡೆ ಮಾಡಲಾಯಿತು. ನಂತರದಲ್ಲಿ ಅದನ್ನು ಉನ್ನತ ಶಿಕ್ಷಣ ಇಲಾಖೆಗೆ ವಹಿಸಲಾಯಿತು. ತದನಂತರದಲ್ಲಿ ಅಲ್ಲಿ ಚಟುವಟಿಕೆಗಳು ಕುಂಠಿತವಾಗಿವೆ. ಆದ್ದರಿಂದ ಇಬ್ಬರೂ ಸಚಿವರು (ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ) ಚರ್ಚಿಸಿ, ಈ ನಿಟ್ಟಿನಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ