ಕಾರ್ಯಕರ್ತನ ಮೇಲೆ ಹಲ್ಲೆ: ಎಸ್‌ಐ ಅಮಾನತಿಗೆ ಆಗ್ರಹ


Team Udayavani, Oct 26, 2019, 3:00 AM IST

Udayavani Kannada Newspaper

ಬೆಂಗಳೂರು: ಯಾದಗಿರಿಯಲ್ಲಿ ಜೆಡಿಎಸ್‌ನ ಕಾರ್ಯಕರ್ತನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದು, ಸಂಬಂಧಪಟ್ಟ ಸಬ್‌ಇನ್‌ಸ್ಪೆಕ್ಟರ್‌ ಬಾಪುಗೌಡ ಅವರನ್ನು ಕೂಡಲೇ ಅಮಾನತುಪಡಿಸಬೇಕೆಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡರು ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಯಾದಗಿರಿಯಲ್ಲಿ ಮುಖ್ಯ ಮಂತ್ರಿಗಳು ಪ್ರಯಾಣಿಸುವ ವಾಹನವನ್ನು ಅಡ್ಡಗಟ್ಟಿದರೆಂಬ ಕಾರಣಕ್ಕೆ ಪಕ್ಷದ ಕಾರ್ಯಕರ್ತನ ಮೇಲೆ ಪೊಲೀಸರು ಹೇಯಕೃತ್ಯ ನಡೆಸಿದ್ದು, ಅದನ್ನು ಖಂಡಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದೆ.

ಮುಖ್ಯಮಂತ್ರಿಗಳ ವಾಹನಕ್ಕೆ ಯಾವುದೇ ರೀತಿ ಹಾನಿ, ಅವಮಾನ ಮಾಡಿಲ್ಲ. ಈ ಹಿಂದೆ ಕುಮಾರಸ್ವಾಮಿ ಸಿಎಂ ಆಗಿದ್ದಾಗ ನೀಡಿದ್ದ ಅನುದಾನ ಕಡಿತಗೊಳಿ ಸಿದ್ದು, ಈ ಬಗ್ಗೆ ಮನವಿ ಮಾಡಲು ಹೋಗಿ ದ್ದರು. ಆ ಮೂಲಕ ಯಡಿಯೂರಪ್ಪ ಅವರು ಅನುದಾನದ ವಿಚಾರದಲ್ಲಿ ರಾಜಕೀಯ ಸೇಡು ತೋರಿಸಿದ್ದಾರೆಂದು ಕಿಡಿ ಕಾರಿದರು. ಆ ದಿನ ರಾತ್ರಿ ಗುರುಮಿಟ್ಕಲ್‌ ಯುವ ಘಟಕದ ಕಾರ್ಯಾಧ್ಯಕ್ಷ ಮಾರ್ಕಂಡಪ್ಪ ಮಾನೇಗಾರ್‌ ಮೇಲೆ ಎಫ್ಐಆರ್‌ ದಾಖಲಿಸಿ ಅದರಲ್ಲಿ ಪಕ್ಷದ ಯುವ ಘಟಕದ ಅಧ್ಯಕ್ಷ ಶರಣಗೌಡ ಪಾಟೀಲ್‌ ಹೆಸರು ಸೇರಿಸಿದ್ದಾರೆ.

ಪಕ್ಷದ ಕೋಲಿ ಸಮುದಾಯದ ಮುಖಂಡನನ್ನು ಸಬ್‌ಇನ್ಸ್‌ಪೆಕ್ಟರ್‌ ಹಾಗೂ ಪೇದೆಗಳು ಮನಸೋ ಇಚ್ಛೆ ಥಳಿಸಿದ್ದಾರೆ. ಪೊಲೀಸ್‌ ಠಾಣೆಯಲ್ಲಿ ಬೂಟ್‌ ಕಾಲಿನಲ್ಲಿ, ಬೆಲ್ಟ್ನಲ್ಲಿ ಹೊಡೆದಿದ್ದಾರೆ. ಮುಖ್ಯಮಂತ್ರಿಗಳ ವಿರುದ್ಧ ಶರಣಗೌಡ ಕುಂದಕೂರ ಅವರೇ ಮುಖ್ಯಮಂತ್ರಿಗಳು ಬಂದಾಗ ಪ್ರತಿಭಟನೆ ನಡೆಸುವಂತೆ ಸೂಚಿಸಿದ್ದರು ಎಂಬುದಾಗಿ ಲಿಖೀತವಾಗಿ ಬರೆದುಕೊಡುವಂತೆ ಒತ್ತಡ ಹೇರಿದ್ದಾರೆ. ಸಬ್‌ಇನ್ಸ್‌ಪೆಕ್ಟರ್‌ ಕಾರ್ಯಕರ್ತನ ಬಾಯಲ್ಲಿ ಪಿಸ್ತೂಲ್‌ ಇಟ್ಟು ಎನ್‌ಕೌಂಟರ್‌ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ ಎಂದು ಹೇಳಿದರು.

ಯಡಿಯೂರಪ್ಪ ವಿರುದ್ಧ ಕೇಳಿಬಂದ ಆಡಿಯೋ ಪ್ರಕರಣದ ಹಿನ್ನೆಲೆಯಲ್ಲಿ ಈ ಪ್ರಕರಣದಲ್ಲಿ ಶರಣಗೌಡ ಅವರನ್ನು ಸಿಲುಕಿಸಲು ಪೊಲೀಸರು ಮುಂದಾಗಿದ್ದಾರೆ. ಇದನ್ನು ಸರ್ಕಾರವೇ ಹೇಳಿ ಮಾಡಿಸಿದಂತಿದೆ. ಯಡಿಯೂರಪ್ಪ ವಿರುದ್ಧದ ಕುಟುಕು ಕಾರ್ಯಾಚರಣೆಗೆ ಸೇಡು ತೀರಿಸಿಕೊಳ್ಳಲು ಪೊಲೀಸರು ಹೀಗೆ ಮಾಡುತ್ತಿದ್ದಾರೆ. ಈ ಬಗ್ಗೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರೊಂದಿಗೆ ಮಾತನಾಡಿದಾಗ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ನಂತರ ಕ್ರಮ ಕೈಗೊಳ್ಳಲು ಕಷ್ಟವಾಗಲಿದೆ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಇದರ ಹಿಂದೆ ಸರ್ಕಾರದ ಒತ್ತಡವಿರಬಹುದು ಎಂದರು.

ಇತಿಹಾಸದಲ್ಲೇ ಸಬ್‌ಇನ್‌ಸ್ಪೆಕ್ಟರ್‌ ಪಿಸ್ತೂಲ್‌ ಬಾಯಿಗಿಟ್ಟಿರುವುದು ಕೇಳಿದ್ದು ಇದೇ ಮೊದಲು. ಪೊಲೀಸರು ಇಂತಹ ಹೀನ ಕೃತ್ಯ ಮಾಡಬಾರದು. ಹಾಗಾಗಿ ಸಬ್‌ಇನ್ಸ್‌ ಪೆಕ್ಟರ್‌, ಪೇದೆಯನ್ನು ಅಮಾನತುಪಡಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಿಎಂಗೆ ಪತ್ರ ಬರೆದಿದ್ದೇನೆ ಎಂದರು. ದೇವೇಗೌಡರ ಪತ್ರಕ್ಕೂ ಮುಖ್ಯಮಂತ್ರಿಗಳು ಬೆಲೆ ಕೊಡುವುದಿಲ್ಲ ಅಂದರೆ ನನ್ನ ಕಾರ್ಯಕರ್ತರನ್ನು ಉಳಿಸಿಕೊಳ್ಳುವುದಕ್ಕೆ ಏನು ಮಾಡಬೇಕೆಂದು ಯೋಚನೆ ಮಾಡುತ್ತೇನೆಂದು ತಿಳಿಸಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.