ದಲಿತರಲ್ಲಿ ಗೊಂದಲ ಮೂಡಿಸಲು ಸಿದ್ದು ಯತ್ನ: ಕಾರಜೋಳ
Team Udayavani, Jul 28, 2023, 11:22 PM IST
ಬೆಂಗಳೂರು: ಪರಿಶಿಷ್ಟ ಜಾತಿ ಒಳಮೀಸಲು ವಿಚಾರದಲ್ಲಿ ಕೇಂದ್ರ ಸಚಿವ ನಾರಾಯಣ ಸ್ವಾಮಿ ಲೋಕಸಭೆಯಲ್ಲಿ ನೀಡಿದ ಉತ್ತರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ದಲಿತ ಸಮುದಾಯದಲ್ಲಿ ಗೊಂದಲ ಮೂಡಿಸಲು ಯತ್ನಿಸುತ್ತಿದ್ದಾರೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾ ಡಿದ ಅವರು, ಸಂವಿಧಾನದ ಆರ್ಟಿಕಲ್ 341 ಪ್ರಕಾರ ಯಾವುದೇ ಒಳಮೀಸಲಾತಿಗೆ ಸ್ಪಷ್ಟ ನಿರ್ದೇಶನ ಇಲ್ಲ ಎಂಬ ವಿಚಾರ ಪ್ರಸ್ತಾಪಿಸಿ ಪ್ರಶ್ನೆಗೆ ಸೀಮಿತ ಉತ್ತರ ಕೊಟ್ಟಿದ್ದಾರೆ. ಆದರೆ ಸಿದ್ದರಾಮಯ್ಯ ನವರು ಕೇಂದ್ರ ಸರಕಾರ ಹಾಗೂ ಹಿಂದಿನಬಿಜೆಪಿ ಸರಕಾರದ ವಿರುದ್ಧ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದಾರೆ. ಸುಳ್ಳು ಹೇಳಿ ಮೋಸ ಮಾಡುವುದರಲ್ಲಿ ಅವರು ನಿಸ್ಸೀಮರು ಎಂದು ಆರೋಪಿಸಿದರು.
ಬಸವರಾಜ ಬೊಮ್ಮಾಯಿಯ ವರ ನೇತೃತ್ವದ ಸರಕಾರ ಇದ್ದಾಗ ಮಾಧುಸ್ವಾಮಿಯವರ ಅಧ್ಯಕ್ಷತೆ ಯಲ್ಲಿ ಸಂಪುಟ ಉಪ ಸಮಿತಿ ರಚಿಸಲಾಗಿತ್ತು. ಅಲ್ಲಿ ನಿರ್ಣಯಿಸಿ ಜನಸಂಖ್ಯೆಗೆ ಅನುಗುಣವಾಗಿ 101 ಜಾತಿಗೆ ಅನ್ಯಾಯ ಆಗಲಾರದ ರೀತಿಯಲ್ಲಿ ಕೇಂದ್ರಕ್ಕೆ ಶಿಫಾರಸು ಮಾಡಿದ್ದೆವು. 4 ಗುಂಪುಗಳಾಗಿ ವಿಂಗಡಿಸಿ ಸಂವಿಧಾನ ತಿದ್ದುಪಡಿಗೆ ಶಿಫಾರಸು ಮಾಡಿದ್ದೆವು. ಸ್ವಾತಂತ್ರ್ಯ ಬಂದಾಗಿನಿಂದ ಜನರಿಗೆ ಕಾಂಗ್ರೆಸ್ಸಿನಿಂದ ಮೋಸ ಆಗುತ್ತಿದೆ. ಬಿಜೆಪಿ ಹಾಗೂ ಆರೆಸ್ಸೆಸ್ ಸಾಮಾಜಿಕ ನ್ಯಾಯದ ಪರವಾಗಿದೆ ಎಂದು ಸ್ಪಷ್ಟಪಡಿಸಿದರು.
ಎಸ್ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಚಲವಾದಿ ನಾರಾಯಣ ಸ್ವಾಮಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ
Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್
Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ ಮಾಡಿದ ಡಿಕೆಶಿ; ವಿಡಿಯೋ ವೈರಲ್
Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ
PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್ ಗೆದ್ದಿದೆ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್ ಭಾಗಿ ಅನುಮಾನ
ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ
Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್
ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್ ʼರಾಯನ್ʼ ಬಿಡುಗಡೆಗೆ ಪ್ಲ್ಯಾನ್
AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ಆಯ್ಕೆ