ಮೀಸಲು ಕ್ಷೇತ್ರದ ಟಿಕೇಟ್ಗಾಗಿ ಮಾಜಿ ಸಚಿವರ ಕೊಲೆಗೆ ಸಂಚು?
Team Udayavani, Oct 1, 2017, 4:05 PM IST
ಕಲಬುರಗಿ : ಅಧಿಕಾರಕ್ಕಾಗಿ ರಾಜಕಾರಣಿಗಳು ಯಾವುದೇ ಕನಿಷ್ಠ ಮಟ್ಟಕ್ಕೆ ಇಳಿಯುತ್ತಾರೆ ಎನ್ನುವುದಕ್ಕೆ ಈ ಘಟನೆ ಸಾಕ್ಷಿ. ಮೀಸಲು ಕ್ಷೇತ್ರದ ಟಿಕೇಟ್ಗಾಗಿ ಮಾಜಿ ಸಚಿವ, ದಲಿತ ನಾಯಕ ರೇವು ನಾಯಕ್ ಬೆಳಮಗಿ ಅವರನ್ನು ಕಾರು ಅಪಘಾತದಲ್ಲಿ ಕೊಲೆಗೈಯುವ ಸಂಚು ನಡೆಸಿರುವುದು ಇದೀಗ ಬಯಲಾಗಿದೆ. ಆತಂಕಕಾರಿ ಬೆಳವಣಿಗೆ ಎಂಬಂತೆ ಸಂಚಿನಲ್ಲಿ ಕಾರೂ ಚಾಲಕನೂ ಬಾಗಿಯಾಗಿದ್ದ.
ಈ ಬಗ್ಗೆ ಬೆಳಮಗಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದು,’ನನ್ನ ಕಾರು ಚಾಲಕ ಸೇರಿ ಹಲವರು ನನ್ನನ್ನು ರಸ್ತೆ ಅಪಘಾತ ಮಾಡಿಸಿ ಹತ್ಯೆಗೈಯಲು ಸಂಚು ಹೂಡಿದ್ದರು. ಕಲಬುರಗಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಟಿಕೇಟ್ ಆಕಾಂಕ್ಷಿಗಳೇ ಕೃತ್ಯಕ್ಕೆ ಸಂಚು ರೂಪಿಸಿದ್ದಾರೆ ಎಂದು ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಆಡಿಕೊಳ್ಳುತ್ತಿದ್ದಾರೆ. ನನಗೆ ಹಲವು ಅನುಮಾನಗಳಿದ್ದು, ಅಪಘಾತಕ್ಕೆ ಕಾರಣವಾದ ಚಾಲಕನೂ ಪರಾರಿಯಾಗಿದ್ದಾನೆ. ಈ ಬಗ್ಗೆ ವರಿಷ್ಠರಿಗೆ ದೂರು ನೀಡುತ್ತೇನೆ. ಅವರ ಸೂಚನೆಯಂತೆ ಹೋರಾಟ ಮುಂದುವರೆಸುತ್ತೇನೆ’ ಎಂದರು.
ಮೇ 20 ಆಳಂದದ ಚಿಂಚನಸೂರ ಗ್ರಾಮದಲ್ಲಿ ಬೆಳಮಗಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಸೇತುವೆಗೆ ಡಿಕ್ಕಿಯಾಗಿ ಪಲ್ಟಿಯಾಗಿತ್ತು. ಅವಘಡದಲ್ಲಿ ಬೆಳಮಗಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಆ ಬಳಿಕ ಕಾರಿನಲ್ಲಿದ್ದ ಚಾಲಕ ನಾಪತ್ತೆಯಾಗಿದ್ದ.
ಪೊಲೀಸರು ಪ್ರಕರಣದ ತನಿಖೆ ಮುಂದುವರೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು