ಶಾಸಕರ ಮನೆ ಆವರಣದಲ್ಲಿ ಶ್ರೀಗಂಧ ಮರಕ್ಕೆ ಕೊಡಲಿ: ಕಳ್ಳತನ ಯತ್ನ ವಿಫಲ
Team Udayavani, Nov 14, 2020, 11:06 AM IST
ವಿಜಯಪುರ: ನಗರದಲ್ಲಿ ಶಾಸಕರೊಬ್ಬರ ಮನೆಯ ಆವರಣದಲ್ಲಿ ಬೆಳೆದಿದ್ದ ಶ್ರೀಗಂಧದ ಮರವನ್ನು ಕಡಿದು, ಕಳ್ಳತನಕ್ಕೆ ನಡೆಸಿದ ಯತ್ನ ವಿಫಲವಾದ ಘಟನೆ ನಡೆದಿದೆ.
ಶನಿವಾರ ನಸುಕಿನಲ್ಲಿ ನಾಗಠಾಣ ಶಾಸಕ ದೇವಾನಂದ ಚವ್ಹಾಣ ಅವರ ಮನೆಯ ಆವರಣದಲ್ಲಿ ಬೆಳೆದಿರುವ ಶ್ರೀಗಂಧದ ಮರವನ್ನು ಗರಗಸದಿಂದ ಕತ್ತರಿಸಿದ್ದಾರೆ. ಗರಗಸದ ಸದ್ದು ಕೇಳಿ ಮನೆಯಲ್ಲಿದ್ದವರನ್ನು ಎಚ್ಚರಿಸಿದೆ.
ಆದರೆ ಅಷ್ಟರಲ್ಲಾಗಲೇ ಬುಡದಿಂದಲೇ ಕತ್ತರಿಸಿದ್ದ ಶ್ರೀಗಂಧದ ಮರ ಮುರಿದು ಕಾಂಪೌಂಡ್ ಗೋಡೆ ಮೇಲೆ ಬಿದ್ದಿದೆ. ಇದರಿಂದ ಶ್ರೀಗಂಧ ಮರಗಳ್ಳತನಕ್ಕೆ ಮುಂದಾದುದನ್ನು ಕಂಡ ಮನೆಯಲ್ಲಿದ್ದವರು ಹೊರ ಬಂದಿದ್ದಾರೆ. ಮನೆಯ ಬಾಗಿಲು ತೆಗೆಯುವ ಸದ್ದು ಕೇಳುತ್ತಲೇ ಕಳ್ಳರು ಶ್ರೀಗಂಧದ ಕತ್ತರಿಸಿದ ಮರವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.
ಇದನ್ನೂ ಓದಿ:ರಾಜಸ್ಥಾನದ ಲೋಂಗೇವಾಲಾ ಗಡಿಯಲ್ಲಿ ಯೋಧರ ಜತೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ
ಈ ಕುರಿತು ಶಾಸಕ ದೇವಾನಂದ ಅವರು ಆದರ್ಶ ನಗರ ಠಾಣಾ ಪೊಲೀಸರಿಗೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳಿಗಳಿಗೆ ದೂರು ನೀಡಲು ಮುಂದಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?