ಕನ್ನಡ ಬಳಸದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾದ ಪ್ರಾಧಿಕಾರ


Team Udayavani, Jan 18, 2021, 9:05 AM IST

t s nagabharana

ಬೆಂಗಳೂರು: ಬ್ಯಾಂಕ್‌ಗಳಲ್ಲಿ ಕನ್ನಡ ಬಳಕೆ ಕಡೆಗಣನೆ ಇದೀಗ ಆಂದೋಲನ ಸ್ವರೂಪ ಪಡೆ ದುಕೊಳ್ಳುತ್ತಿದೆ. ಆದರೆ, ಸರ್ಕಾರಿ ಅಧಿಕಾರಿಗಳೇ ಆಂಗ್ಲ ಭಾಷೆಯಲ್ಲಿ ಸುತ್ತೋಲೆ ಹಾಗೂ ಆದೇಶಗಳನ್ನು ಹೊರಡಿಸುತ್ತಿದ್ದು, ಅಂತಹ 114 ಜನ ಪ್ರಮುಖ ಅಧಿಕಾರಿಗಳ ಮೇಲೆ ಶಿಸ್ತು ಕ್ರಮಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಕನ್ನಡ ಅನುಷ್ಠಾನ ಸಮಿತಿ ಹಾಗೂ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಕನ್ನಡ ಭಾಷೆಯನ್ನು ರಾಜ್ಯದ ಆಡಳಿತದ ಎಲ್ಲ ಮಟ್ಟದಲ್ಲಿಯೂ ಅನುಷ್ಠಾನ ಮಾಡಬೇಕು. ರಾಜ್ಯ ಸರ್ಕಾರ ಮತ್ತು ಸ್ಥಳೀಯ ಸಂಸ್ಥೆಗಳು ಅಧಿಕಾರಿಗಳು ಆಡಳಿತದಲ್ಲಿ ಕನ್ನಡ ಭಾಷೆ ಬಳಕೆ ಮತ್ತು ಅನುಷ್ಠಾನದ ಲೋಪವೆಸಗಿದರೆ, “ಕರ್ತವ್ಯ ಲೋಪ’ ಎಂದು ಪರಿಗಣಿಸಲು ಅವಕಾಶ ಇದೆ. ಸಂದರ್ಭದಲ್ಲಿ ಕನ್ನಡ ಭಾಷೆ ಅನುಷ್ಠಾನಕ್ಕೆ ಅಡೆತಡೆ ಉಂಟು ಮಾಡಿದರೆ, ಆಯಾ ಇಲಾಖೆಯ ಮುಖ್ಯಸ್ಥರನ್ನೇ ಹೊಣೆ ಮಾಡಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮಂಡಳಿ ಪುನರುಚ್ಚರಿಸಿದೆ.

ಈ ಸಂಬಂಧ “ಉದಯವಾಣಿ’ಯೊಂದಿಗೆ ಮಾತನಾಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಟಿ.ಎಸ್‌. ನಾಗಾಭರಣ, ಕನ್ನಡ ಬಳಕೆ ಮಾಡದೆ ನಿರ್ಲಕ್ಷ್ಯ ವಹಿಸಿರುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗಿದೆ. ಇವರ ಮೇಲೆ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕು. ಅವರ ವೃತ್ತಿ ಪ್ರಮಾಣ ಪತ್ರಗಳಲ್ಲಿ ಈ ತಪ್ಪನ್ನು ಉಲ್ಲೇಖ ಮಾಡಬೇಕು ಎಂದು ಆಗ್ರಹಿಸಿದರು.

ಎರಡು ವರ್ಷದಿದ ಸಭೆ ನಡೆಸಿಲ್ಲ! : ರಾಜ್ಯದಲ್ಲಿ ಯಾವುದೇ ಅಧಿಕಾರಿ ಕನ್ನಡ ಬಳಕೆಗೆ ಆದ್ಯತೆ ನೀಡದೆ ನಿರ್ಲಕ್ಷ್ಯ ವಹಿಸಿದರೆ ಅಂತವರ ಮೇಲೆ ಸಚಿವಾಲಯ ಮಟ್ಟದಲ್ಲಿರುವ ಕನ್ನಡ ಅನುಷ್ಠಾನ ಸಮಿತಿ ಕ್ರಮ ಕೈಗೊಳ್ಳಬೇಕು. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಹ ಇದೇ ಸಮಿತಿಗೆ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡುತ್ತದೆ. ಆದರೆ, ಕನ್ನಡ ಅನುಷ್ಠಾನ ಸಮಿತಿಯೂ ಸಕ್ರಿಯವಾಗಿ ಕೆಲಸ ಮಾಡದೆ ಇರುವುದು ಇದೀಗ ಬೆಳಕಿಗೆ ಬಂದಿದೆ. ಈ ಸಮಿತಿ ಕೊನೆಯ ಸಭೆ ನಡೆಸಿರುವುದು 2018ರಲ್ಲಿ ಇದಾದ ಮೇಲೆ ಸಭೆಯನ್ನೇ ನಡೆಸಿಲ್ಲ ಎಂದು ಮೂಲಗಳು ತಿಳಿಸಿವೆ. “ಕನ್ನಡ ಅನುಷ್ಠಾನ ಸಮಿತಿ ಸಭೆ ನಡೆಸುವಂತೆ ಸರ್ಕಾರಕ್ಕೆ ಕೋರಲಾಗಿದೆ. ಸಭೆ ಕರೆದರೆ ಎಲ್ಲ ವಿಷಯಗಳನ್ನು ಸಮಿತಿಯಲ್ಲಿ ವಿವರಿಸಲಾಗುವುದು’ ಎಂದು ಟಿ.ಎಸ್‌. ನಾಗಾಭರಣ ಹೇಳಿದರು.

114 ಜನರಿಗೆ ನೋಟಿಸ್‌ ಜಾರಿ

ಸರ್ಕಾರದ ಮಟ್ಟದಿಂದ ಸ್ಥಳೀಯ ಮಟ್ಟದ ಅಧಿಕಾರಿಗಳವರೆಗೆ ಆಡಳಿತದಲ್ಲಿ ಕನ್ನಡ ಬಳಸದೆ, ಆಂಗ್ಲ ಭಾಷೆಯಲ್ಲಿ ಆದೇಶ, ಸುತ್ತೋಲೆ ಹಾಗೂ ಮಾರ್ಗಸೂಚಿ ಸೇರಿ ಆಡಳಿತಾತ್ಮಕ ನಿರ್ಧಾರಗಳನ್ನು ತಿಳಿಸಲು ಆಂಗ್ಲ ಭಾಷೆ ಬಳಕೆ ಮಾಡಿದ ಆರೋಪದ ಮೇಲೆ 114 ಜನ ರಿಗೆ ನೋಟಿಸ್‌ ಜಾರಿ ಮಾಡಲಾಗಿದ್ದು, ಇವರಲ್ಲಿ ಕೆಲವರು ಕ್ಷಮಾಪಣ ಪತ್ರ ಸಲ್ಲಿಸಿರುವುದರಿಂದ ಕೆಲವು ನಿರ್ದಿಷ್ಟ ಪ್ರಕರಣಗಳನ್ನು ಪ್ರಾಧಿಕಾರ ಕೈಬಿಟ್ಟಿದೆ.

ಭಾಷಾ ನಿಯಮ ಉಲ್ಲಂಘನೆ ಮಾಡಿದ ಪ್ರಮುಖರು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕಾರ್ಯದರ್ಶಿ, ಬಿಬಿಎಂಪಿ ಆಯುಕ್ತ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಅಧೀನ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಿರ್ದೇಶಕ, ಹಿಂದುಸ್ತಾನ್‌ ಏರೋನಾಟಿಕಲ್‌ಲಿ. ಜನರಲ್‌ ಮ್ಯಾನೇಜರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮೈಸೂರು ಹಾಗೂ ಭಾರತೀಯ ಭಾಷಾ ಸಂಸ್ಥಾನ (ಮೈಸೂರು) ನಿರ್ದೇಶಕರಿಗೆ ನೋಟಿಸ್‌ ನೀಡಲಾಗಿದೆ.

ಹಿತೇಶ್‌ ವೈ

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.