12ರಿಂದ ವೀಣೆ ಶೇಷಣ್ಣ ಸ್ಮಾರಕ ಸಂಗೀತೋತ್ಸವ, ಪ್ರಶಸ್ತಿ ಪ್ರದಾನ
Team Udayavani, Oct 9, 2019, 3:00 AM IST
ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದ ವಸಂತ ಮಹಲ್ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರಿನ ಸ್ವರಮೂರ್ತಿ ವಿ.ಎನ್. ರಾವ್ ಸ್ಮಾರಕ ಟ್ರಸ್ಟ್ ಮತ್ತು ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಗಳ ಸಂಯುಕ್ತ ಆಶ್ರಯದಲ್ಲಿ ಅ.12 ಮತ್ತು 13ರಂದು “ವೀಣೆಯ ಬೆಡಗು’ ವೀಣೆ ಶೇಷಣ್ಣ ಸ್ಮಾರಕ ಸಂಗೀತೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಅ.12ರಂದು ಸಂಜೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ವೀಣೆ ಶೇಷಣ್ಣ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿಯನ್ನು ಪದ್ಮಶ್ರೀ ಎ. ಕನ್ಯಾಕುಮಾರಿ ಅವರಿಗೆ ಒಂದು ಲಕ್ಷ ರೂ. ನಗದು ಪುರಸ್ಕಾರ ಸಹಿತ ನೀಡಲಾಗುವುದು. ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಈ ಪ್ರಶಸ್ತಿಯನ್ನು ಪ್ರಾಯೋಜಿಸಿದ್ದಾರೆ. ಒಂದು ಲಕ್ಷ ರೂ. ನಗದು ಸಹಿತವಾದ ಸ್ವರಮೂರ್ತಿ ವಿ.ಎನ್. ರಾವ್ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿಯನ್ನು ಸಂಗೀತ ಕಲಾ ರತ್ನ ನೀಲಾ ರಾಮ್ಗೊಪಾಲ್ ಅವರಿಗೆ ನೀಡಲಾಗುತ್ತದೆ. ಈ ಪ್ರಶಸ್ತಿಯನ್ನು ಎ.ಎಚ್. ರಾಮರಾವ್ ಮತ್ತು ಸುಧಾ ರಾಮರಾವ್ ಪ್ರಾಯೋಜಿಸಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭದ ಬಳಿಕ ಸಂಜೆ 7ರಿಂದ ವಿ| ಎ. ಕನ್ಯಾಕುಮಾರಿ ವಯಲಿನ್ ವಾದನ ಪ್ರಸ್ತುತ ಪಡಿಸಲಿದ್ದಾರೆ. ಅ.13ರಂದು ಸಂಜೆ 5.30ರಿಂದ ವಿ| ನೀಲಾ ರಾಂಗೋಪಾಲ್ ಅವರ ಗಾಯನವಿದೆ. ಅ.12ರಂದು ಶನಿವಾರ ಸಂಜೆ 4ರಿಂದ ಪ್ರೊ| ಅರವಿಂದ ಹೆಬ್ಟಾರ್ ಮತ್ತು ಬಳಗ, ಡಾ| ಸಹನಾ ಎಸ್.ವಿ. ಸಂಗೀತ ಪ್ರಸ್ತುತಪಡಿಸಲಿದ್ದಾರೆ. ವೀಣಾ ವಾದನ ನಡೆಯಲಿದೆ. ಮರುದಿನ ಅ.13ರಂದು ಸಂಜೆ 3.30ರಿಂದ ವಿ| ಬಾಲಸುಬ್ರಹ್ಮಣ್ಯ ಮತ್ತು ಬಳಗ, ಡಾ| ಗೀತಾ ಭಟ್, ವಿ| ರಾಮಕೃಷ್ಣನ್ ಮೂರ್ತಿ ಮತ್ತು ಬಳಗದವರಿಂದ ಶಾಸ್ತ್ರೀಯ ಸಂಗೀತ ಪ್ರಸ್ತುತಿಯಿದೆ.
ಡಾ.ಹೆಗ್ಗಡೆ ಅವರಿಂದ ಪ್ರದಾನ: ಅ.12ರಂದು ಸಂಜೆ ಗಂಟೆ 6ರಿಂದ ವಸಂತ ಮಹಲ್ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಪ್ರಶಸ್ತಿ ಪ್ರದಾನ ಮಾಡುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ