ಭಾಷಾ ದ್ವೇಷ ತಡೆಯುವುದು ಅಗತ್ಯ: ವೈದೇಹಿ

ನೃಪತುಂಗ ಪ್ರಶಸ್ತಿ ಪ್ರದಾನ

Team Udayavani, Mar 30, 2023, 5:00 AM IST

ಭಾಷಾ ದ್ವೇಷ ತಡೆಯುವುದು ಅಗತ್ಯ: ವೈದೇಹಿ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಭಾಷೆ ಎಂಬುದು ಸೌಹಾರ್ದದ ಮಾರ್ಗವಾಗುವ ಬದಲು ದಹನದ ಉರುವಲಾಗುತ್ತಿದೆ. ಅದನ್ನು ತಡೆಯುವ ಹೊಣೆ ನಮ್ಮೆಲ್ಲರದ್ದಾಗಿದೆ ಎಂದು ಹಿರಿಯ ಸಾಹಿತಿ ಡಾ| ವೈದೇಹಿ ಅಭಿಪ್ರಾಯಪಟ್ಟರು.

ಬುಧವಾರ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸಹಯೋಗದಲ್ಲಿ ನೀಡಲಾದ ನೃಪತುಂಗ ಸಾಹಿತ್ಯ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಅವರು, ನಮ್ಮ ದೇಶ ಕೂಡು ಕುಟುಂಬವಿದ್ದಂತೆ. ಆದರೆ ಅದನ್ನು ಈ ಹಿಂದೆಯೇ ಒಡೆಯಲಾಗಿದೆ. ಒಮ್ಮೆ ಹೊಡೆದು ಹೋದ ಮೇಲೆ ಮತ್ತೆ ಒಂದಾಗುವುದು ಸುಲಭವಲ್ಲ. ಹಿಂದೆ ಉಂಟಾದ ಒಡಕು ಮತ್ತೆ ಕೂಡುವಂತಾಗಿಲ್ಲ. ಹೊತ್ತಿದ ಜ್ವಾಲೆ ಉರಿಯುತ್ತಲೇ ಇದೆ. ಅದನ್ನು ಆರಿಸುವ ಕೆಲಸ ಮಾಡದಿದ್ದರೆ ಮುಂದೆ ದೊಡ್ಡ ಅನಾಹುತವಾಗುತ್ತದೆ ಎಂದರು.

ಭಾಷೆ ಎಂಬುದು ಸೌಹಾರ್ದದ ಸೇತುವೆಯಾಗಬೇಕು. ಈ ಸೇತುವೆಯನ್ನು ಕಟ್ಟುವ ಕೆಲಸದಲ್ಲಿ ಲೇಖಕರ ಪಾತ್ರ ಮಹತ್ತರವಾಗಿದೆ. ಅದರ ಜತೆಗೆ ಕಲಾವಿದರು, ಮಾಧ್ಯಮದವರು ಸಹಿತ ಸಮಾಜದ ಪ್ರತಿಯೊಬ್ಬರೂ ಅದಕ್ಕೆ ಕೈಜೋಡಿಸಬೇಕು ಎಂದು ಹೇಳಿದರು.

ಮಹಿಳೆಯರಿಗೆ ಮರ್ಮಾಂತಿಕ ನೋವುಗಳು ಒಂದೆಡೆಯಾದರೆ, ತಾನು ಮಹಿಳೆ ಎಂದೇ ಮುಂದಿಟ್ಟುಕೊಂಡು ಸೃಷ್ಟಿಸುವ ಸಮಸ್ಯೆಗಳು ಮತ್ತೂಂದೆಡೆ. ನಾವು ಇವೆಲ್ಲದರ ಬಗೆಗೂ ಚಿಂತಿಸಬೇಕಿದೆ ಎಂದರು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ| ಚಂದ್ರಶೇಖರ ಕಂಬಾರ ಮಾತನಾಡಿ, ಮಾತೃಭಾಷೆಯಲ್ಲಿ ಶಿಕ್ಷಣ ನೀಡಿದರೆ ಭಾಷೆಯ ಜತೆಗೆ ಶಿಕ್ಷಣ ಪಡೆದ ವ್ಯಕ್ತಿ, ಆತನ ವ್ಯಕ್ತಿತ್ವವೂ ಉಳಿಯುತ್ತದೆ. ಇಂಗ್ಲಿಷಿನ ಬೆರಗಿನಲ್ಲಿ ನಾವೆಲ್ಲ ಮೈ ಮರೆಯುತ್ತಿದ್ದೇವೆ. ಕನ್ನಡವನ್ನೇ ಮರೆಯುವ ಸ್ಥಿತಿಗೆ ತಲುಪುತ್ತಿದ್ದೇವೆ. ನಮ್ಮ ಸೃಜನಶೀಲತೆ ಉಳಿಯುವುದು ಮಾತೃಭಾಷೆಯಲ್ಲಿ ಮಾತ್ರ ಎಂಬುದನ್ನು ಎಲ್ಲರೂ ತಿಳಿಯಬೇಕು ಎಂದು ಹೇಳಿದರು.

ಹಿರಿಯ ಕವಿ ಡಾ| ಎಚ್‌.ಎಸ್‌. ವೆಂಕಟೇಶಮೂರ್ತಿ, ಕಸಾಪ ಅಧ್ಯಕ್ಷ ನಾಡೋಜ ಡಾ| ಮಹೇಶ ಜೋಷಿ, ಹಿರಿಯ ಕವಯಿತ್ರಿ ಸವಿತಾ ನಾಗಭೂಷಣ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸತ್ಯವತಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕ್ರಿಯಾ ಸಮಿತಿ ರಾಜ್ಯಾಧ್ಯಕ್ಷ ವ.ಚ. ಚನ್ನೇಗೌಡ ಇತರರಿದ್ದರು.

ಮಯೂರ ವರ್ಮ ಪ್ರಶಸ್ತಿ ಪುರಸ್ಕೃತರು
ಡಾ| ಬೇಲೂರು ರಘುನಂದನ, ವಿದ್ಯಾರಶ್ಮಿ ಪೆಲತ್ತಡ್ಕ, ಡಾ. ಸತ್ಯಮಂಗಲ ಮಹಾದೇವ, ಹನುಮಂತ ಸೋಮನಕಟ್ಟಿ, ಗುಡ್ಡಪ್ಪ ಬೆಟಗೇರಿ ಅವರಿಗೆ ಮಯೂರ ವರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರಶಸ್ತಿ ಮೊತ್ತ 7 ಲಕ್ಷ ರೂ.
ಬಿಎಂಟಿಸಿ ಸಂಸ್ಥೆಯು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸಾರಿಗೆ ಸಂಸ್ಥೆ ಕನ್ನಡ ಕ್ರಿಯಾ ಸಮಿತಿಯ ಆಸಕ್ತಿಯ ಫಲವಾಗಿ 1.5 ಕೋಟಿ ರೂ.ಗಳನ್ನು ದತ್ತಿ ಇಡಲಾಗಿದೆ. ಕನ್ನಡದಲ್ಲಿ ಮೌಲಿಕ ಸಾಹಿತ್ಯ ರಚಿಸಿರುವ ಹಿರಿಯ ಸಾಹಿತಿಯೊಬ್ಬರಿಗೆ ಪ್ರತಿ ವರ್ಷ 7 ಲಕ್ಷ ರೂ. ಇರುವ ನೃಪತುಂಗ ಸಾಹಿತ್ಯ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಸ್ತ್ರೀವಾದಕ್ಕೆ ಹೊಸ ಆಯಾಮ ನೀಡಿದ ವೈದೇಹಿ
ಬೆಂಗಳೂರು:
ಸ್ತ್ರೀವಾದಕ್ಕೆ ಹೊಸ ಆಯಾಮ ನೀಡಿದವರು ಲೇಖಕಿ ವೈದೇಹಿ. ಅವರು “ಅಕ್ಕು’ ಪಾತ್ರದ ಮೂಲಕ ಸ್ತ್ರೀಯ ತಾಳ್ಮೆ, ಹುದುಗಿದ ಶಕ್ತಿ ಅನಾವರಣಗೊಳಿಸಿದ್ದಾರೆ ಎಂದು ಹಿರಿಯ ವಿಮರ್ಶಕ ಪ್ರೊ| ಸಿ.ಎನ್‌.ರಾಮಚಂದ್ರನ್‌ ಹೇಳಿದರು.

ಕರ್ನಾಟಕ ಲೇಖಕಿಯರ ಸಂಘ ಹಾಗೂ ವಸಂತ ಪ್ರಕಾಶನ ಸಹಯೋಗದಲ್ಲಿ ಚಿತ್ರಕಲಾ ಪರಿಷತ್ತಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಲೇಖಕಿ ವೈದೇಹಿ ಅವರಿಗೆ ಅಭಿನಂದನೆ ಹಾಗೂ ಲಲಿತಮ್ಮ ಚಂದ್ರಶೇಖರ್‌ ಅವರ “ನೆನಪಿನ ಉಗ್ರಾಣ’ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಟಾಪ್ ನ್ಯೂಸ್

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ… ಹೊಡೆದಾಟ

police crime

Goa ; ಅಪಹರಣಕ್ಕೊಳಗಾದ ಬಾಲಕಿಯರಿಬ್ಬರ ರಕ್ಷಣೆ; ಹುಬ್ಬಳ್ಳಿಯ ಇಬ್ಬರು ಅರೆಸ್ಟ್

1-wwwwqe

Congress Guarantees ದೇಶವನ್ನು ದಿವಾಳಿಯಾಗಿಸುತ್ತದೆ: ಪ್ರಧಾನಿ ಮೋದಿ

smi irani

Missing: ಕಾಂಗ್ರೆಸ್ ಟ್ವೀಟ್ ಗೆ ಕಟುವಾಗಿ ಪ್ರತಿಕ್ರಿಯಿಸಿದ ಸ್ಮೃತಿ ಇರಾನಿ

ಅಹ್ಮದ್‌ ನಗರ ಇನ್ನು ಮುಂದೆ ಅಹಲ್ಯಾದೇವಿ ನಗರ: ಮುಖ್ಯಮಂತ್ರಿ ಏಕನಾಥ್‌ ಶಿಂಧೆ

ಅಹ್ಮದ್‌ ನಗರ ಇನ್ನು ಮುಂದೆ ಅಹಲ್ಯಾದೇವಿ ನಗರ: ಮುಖ್ಯಮಂತ್ರಿ ಏಕನಾಥ್‌ ಶಿಂಧೆ

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು

1-sadsa

Shocking ಮೃತ ಉರಗತಜ್ಞ ನರೇಶ್ ಮನೆಯಲ್ಲಿ ವಿಷಕಾರಿ ಹಾವುಗಳ ರಾಶಿ!

kalinga1

ಕೊಟ್ಟಿಗೆಹಾರ: ಮನೆಯ ಬಳಿಯೇ ಅವಿತು ಕುಳಿತ್ತಿತ್ತು ಭಾರಿ ಗಾತ್ರದ ಕಾಳಿಂಗ ಸರ್ಪ

ಕುಡಿಯುವ ನೀರಿನ ಅಭಾವ…: ಮಹಾರಾಷ್ಟ್ರದಿಂದ ನೀರು ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಮನವಿ

ಕರ್ನಾಟಕದಲ್ಲಿ ನೀರಿನ ಅಭಾವ…: ಮಹಾರಾಷ್ಟ್ರದಿಂದ ನೀರು ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಮನವಿ

1-sdsad

Guarantee; ಮಂತ್ರಿ ಪರಿಷತ್ ಸಭೆ: ಸಿದ್ದರಾಮಯ್ಯ ಅವರಿಗೆ ಪರಮಾಧಿಕಾರ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ… ಹೊಡೆದಾಟ

1-sad-dsa

Bhimanna T Naik ದುಃಖ ತಪ್ತ ಕುಟುಂಬಕ್ಕೆ‌ ಸಕಾಲಿಕ ನೆರವಾದ ಶಾಸಕ

police crime

Goa ; ಅಪಹರಣಕ್ಕೊಳಗಾದ ಬಾಲಕಿಯರಿಬ್ಬರ ರಕ್ಷಣೆ; ಹುಬ್ಬಳ್ಳಿಯ ಇಬ್ಬರು ಅರೆಸ್ಟ್

1-wwwwqe

Congress Guarantees ದೇಶವನ್ನು ದಿವಾಳಿಯಾಗಿಸುತ್ತದೆ: ಪ್ರಧಾನಿ ಮೋದಿ