ಅಂಗಾಂಗ ದಾನದ ಬಗ್ಗೆ ಜಾಗೃತಿ ಅಗತ್ಯ: ಡಾ| ಕೆ.ಸುಧಾಕರ್
Team Udayavani, Feb 13, 2022, 6:45 AM IST
ಬೆಂಗಳೂರು: ಸಾರ್ವಜನಿಕರಲ್ಲಿ ಜಾಗೃತಿ ಕೊರತೆಯಿಂದಾಗಿ ಅಂಗಾಂಗ ದಾನ ಕಡಿಮೆಯಾಗಿದೆ. ಅಂಗಾಂಗ ದಾನ ಹೆಚ್ಚಿಸಲು ಇಡೀ ಸಮಾಜ, ಜಾಗೃತ ನಾಗರಿಕರು, ವೈದ್ಯರು ಶ್ರಮಿಸಬೇಕಿದೆ. ಈ ಮೂಲಕ ಅಂಗಾಂಗ ದಾನದ ಪ್ರಮಾಣವನ್ನು ಹೆಚ್ಚಿಸಬೇಕಿದೆ ಎಂದು ಆರೋಗ್ಯ ಸಚಿವ ಡಾ| ಕೆ. ಸುಧಾಕರ್ ಹೇಳಿದ್ದಾರೆ.
ಅಂಗಾಂಗಗಳ ದಾನದಲ್ಲಿ ಅಮೆರಿಕ ಹಾಗೂ ಚೀನ ದೇಶಗಳ ಬಳಿಕ, ಭಾರತ ಮೂರನೇ ಸ್ಥಾನದಲ್ಲಿದೆ. 2012-13ನೇ ಸಾಲಿಗೆ ಹೋಲಿಸಿದರೆ, ಅಂಗಾಂಗ ದಾನದ ಪ್ರಮಾಣವು ನಾಲ್ಕು ಪಟ್ಟು ಹೆಚ್ಚಾಗಿದೆ. ದೇಶದಲ್ಲಿ ವಾರ್ಷಿಕ ಅಂಗಾಂಗ ದಾನಗಳ ಸಂಖ್ಯೆ 2013ರಲ್ಲಿ 4,990 ಆಗಿದ್ದು, 2019ರಲ್ಲಿ 12,746ಕ್ಕೆ ಏರಿದೆ. ಅಂಗಾಂಗ ದಾನದ ಪ್ರಮಾಣದಲ್ಲಿ ನಾಲ್ಕು ಪಟ್ಟು ಏರಿಕೆ ಕಂಡಿದ್ದರೂ, ಅಂಗಾಂಗಗಳ ಬೇಡಿಕೆಯನ್ನು ಪೂರೈಸಲು ಇನ್ನಷ್ಟು ಹಾದಿಯನ್ನು ಸವೆಸಬೇಕಾಗಿದೆ. ದೇಶದಲ್ಲಿ ಕೇವಲ ಶೇ. 3 ಜನರು ಮಾತ್ರ ಅಂಗಾಂಗ ದಾನಕ್ಕೆ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.
ಕೋಲಾರದ 26 ವರ್ಷದ ಚೈತ್ರಾ ಅವರ ಅಂಗಾಂಗಗಳನ್ನು ದಾನ ಮಾಡಿರುವುದು ಇಡೀ ಸಮಾಜಕ್ಕೆ ಸ್ಫೂರ್ತಿದಾಯಕ ಸಂಗತಿ. ಮರಣದ ನಂತರ ಮತ್ತೂಬ್ಬರ ಜೀವ ಉಳಿಸಲು ಸಾಧ್ಯವಾಗುವ ಅಂಗಾಂಗ ದಾನವನ್ನು ಮಾಡಲು ಎಲ್ಲರೂ ಪ್ರತಿಜ್ಞೆ ಮಾಡಬೇಕು ಎಂದು ಪ್ರತಿಯೊಬ್ಬರಲ್ಲೂ ಕೋರುತ್ತೇನೆ. – ಡಾ| ಸುಧಾಕರ್, ಆರೋಗ್ಯ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ