Ayodhya; ಶೃಂಗೇರಿ ಪೀಠದ ಹೆಸರಲ್ಲಿ ಕಿಡಿಗೇಡಿಗಳಿಂದ ಸುಳ್ಳು ಸಂದೇಶ!
Team Udayavani, Jan 8, 2024, 11:59 PM IST
ಚಿಕ್ಕಮಗಳೂರು: ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರತಿಷ್ಠಾಪನೆಗೆ ದಿನಗಣನೇ ಆರಂಭವಾಗಿದ್ದು ಇದೇ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಶೃಂಗೇರಿ ಶಾರದಾ ಪೀಠದ ಶ್ರೀ ಭಾರತೀ ತೀರ್ಥ ಮಹಾ ಸ್ವಾಮೀಜಿಗಳ ಭಾವಚಿತ್ರ ಬಳಸಿ ಶ್ರೀರಾಮ ಪ್ರತಿಷ್ಠಾಪನೆಯನ್ನು ವಿರೋಧಿಸುತ್ತಿದ್ದಾರೆಂದು ಹರಿಬಿಟ್ಟಿರು ಸಂದೇಶ ಶುದ್ಧ ಸುಳ್ಳು ಸಂದೇಶವೆಂದು ಶ್ರೀಮಠದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಶ್ರೀಗಳ ಭಾವಚಿತ್ರ ಬಳಸಿ ಅಯೋಧ್ಯೆ ಶ್ರೀರಾಮನ ಪ್ರತಿಷ್ಠಾಪನೆಗೆ ವಿರೋಧವಿದೆ ಎಂಬರ್ಥದಲ್ಲಿ ಸಂದೇಶವನ್ನು ನಕಲಿ ವೆಬ್ಸೈಟ್ ಮೂಲಕ ಹರಿಬಿಟ್ಟಿದ್ದಾರೆ. ಇದು ಮಠದ ಅಧಿಕೃತ ವೆಬ್ ಸೈಟ್ ಅಲ್ಲ. ಕೀಡಿಗೇಡಿಗಳು ದುರುದ್ದೇಶ ದಿಂದ ಇಂತಗ ಸಂದೇಶವನ್ನು ಹರಿಬಿಟ್ಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರಾಣ ಪ್ರತಿಷ್ಠಾಮಹೋತ್ಸವದ ಸುಸಂದರ್ಭದಲ್ಲಿ ಎಲ್ಲಾ ಆಸ್ತಿಕರು ಯಥಾಯೋಗ್ಯವಾಗಿ ಭಾಗವಹಿಸಿ ಶ್ರೀರಾಮನ ಪೂರ್ಣಕೃಪೆಗೆ ಪಾತ್ರರಾಗುವಂತೆ ಶ್ರೀಗಳು ಆಶೀರ್ವದಿಸಿದ್ದಾರೆ ಎಂದು ಆಡಳಿತ ಮಂಡಳಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್ ಉಸ್ತುವಾರಿ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ