Ayushman Bharat; ನವೀಕೃತ ಹೆಲ್ತ್ ಕಾರ್ಡ್ಗೆ ಸಿದ್ದರಾಮಯ್ಯ ಚಾಲನೆ
Team Udayavani, Dec 7, 2023, 12:12 AM IST
ಬೆಳಗಾವಿ: ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ಗಳಿಗೆ ಆರೋಗ್ಯ ಇಲಾಖೆ ಹೊಸ ರೂಪ ನೀಡಿದ್ದು, ಮರುನಾಮಕರಣಗೊಂಡ ನವೀಕೃತ ಹೆಲ್ತ್ ಕಾರ್ಡ್ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು. ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ಗಳನ್ನು “ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನಾರೋಗ್ಯ -ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ’ ಎಂದು ಹೆಸರಿಸಲಾಗಿದೆ.
ಈ ಸಂದರ್ಭ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್ನಲ್ಲಿ ಕೆಲವು ಬದಲಾವಣೆ ತರಲಾಗಿದೆ. ರಾಜ್ಯದ 5 ಕೋಟಿಗೂ ಅಧಿಕ ಜನರಿಗೆ ಹೆಲ್ತ್ ಕಾರ್ಡ್ಗಳನ್ನು ಮುಂದಿನ 6 ತಿಂಗಳಲ್ಲಿ ವಿತರಿಸುವ ಗುರಿಯನ್ನು° ಆರೋಗ್ಯ ಇಲಾಖೆ ಹೊಂದಿದೆ ಎಂದು ಹೇಳಿದರು.
ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ನ್ಯಾಶನಲ್ ಪೊರ್ಟಲ್ಗೆ ನೂತನ ಹೆಲ್ತ್ ಕಾರ್ಡ್ಗಳನ್ನು° ಸಂಯೋಜನೆಗೊಳಿಸಲಾಗಿದೆ. ರಾಜ್ಯದ ಬಿಪಿಎಲ್ ಕಾರ್ಡು ದಾರರು ದೇಶದ ಇತರೆ ರಾಜ್ಯಗಳಲ್ಲಿ ಹೆಲ್ತ್ ಕಾರ್ಡ್ ನಡಿ ಚಿಕಿತ್ಸೆ ಪಡೆಯಬಹುದಾಗಿದೆ. ಯೋಜನೆಯ ಒಟ್ಟು ಅನುದಾನದ ಪಾಲಿನಲ್ಲಿ ರಾಜ್ಯ ಸರಕಾರವು ಶೇ. 66ರಷ್ಟು ಹಾಗೂ ಕೇಂದ್ರ ಸರಕಾರವು ಶೇ.34ರಷ್ಟು ನೀಡುತ್ತಿದೆ. ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಬಡಕುಟುಂಬಗಳು ವಾರ್ಷಿಕ ಐದು ಲಕ್ಷ ಮೌಲ್ಯದ ಚಿಕಿತ್ಸೆಯನ್ನು ಕುಟುಂಬದ ಒಬ್ಬರು ಅಥವಾ ಹಲವರು ಸೇರಿ ಬಳಸಿಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ