ಬಯಸಿದವರಿಗೆಲ್ಲ ಸಿಗದು ಅಯ್ಯಪ್ಪ ದರ್ಶನ
Team Udayavani, Oct 11, 2021, 6:00 AM IST
ಬೆಂಗಳೂರು: ಕೋವಿಡ್ ಕಾರಣ ಈ ಬಾರಿಯೂ ಶಬರಿಮಲೆ ಪ್ರವೇಶಕ್ಕೆ ಹಲವು ಷರತ್ತು ಗಳಿದ್ದು, ಬಯಸಿದವರಿಗೆಲ್ಲ ಅಯ್ಯಪ್ಪ ದರ್ಶನ ಸಿಗದು.
ಮಂಡಲ ಪೂಜೆ ಮತ್ತು ಮಕರಜ್ಯೋತಿ ಸಂದರ್ಭ ಪ್ರತೀ ದಿನ 25 ಸಾವಿರ ಮಂದಿಗೆ ಅವಕಾಶವಿದೆ. ಆದರೆ ಆನ್ಲೈನ್ ಬುಕಿಂಗ್ ಮಾಡಿದವರಿಗೆ ಮಾತ್ರ ದರ್ಶನ ಭಾಗ್ಯ ಪ್ರಾಪ್ತಿಯಾಗ ಲಿದೆ. ಹೀಗಾಗಿ ರಾಜ್ಯದ ಲಕ್ಷಾಂತರ ಭಕ್ತರು ಹಿಂದೇಟು ಹಾಕುವಂತಾಗಿದೆ.
ಈ ಬಾರಿ ದರ್ಶನಕ್ಕೆ ಲಸಿಕೆಯ ಎರಡೂ ಡೋಸ್ ಪಡೆದ ಪ್ರಮಾಣಪತ್ರ ಅಥವಾ ಯಾತ್ರೆಗೆ 48 ತಾಸು ಮುನ್ನ ಆರ್ಟಿ ಪಿಸಿಆರ್ ಪರೀಕ್ಷೆ ಮಾಡಿಸಿ ನೆಗೆಟಿವ್ ಪ್ರಮಾಣಪತ್ರ ಹೊಂದಿರ ಬೇಕಿದೆ. ಇದು ಭಕ್ತರ ಚಿಂತೆಗೆ ಕಾರಣವಾಗಿದೆ.
ಭಕ್ತರಿಗೆ ಸಲಹೆ
ರಾಜ್ಯದಿಂದ ಪ್ರತೀ ವರ್ಷ 10ರಿಂದ 15 ಲಕ್ಷ ಭಕ್ತರು ಶಬರಿಮಲೆ ಯಾತ್ರೆ ಕೈಗೊಳ್ಳುತ್ತಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಕಳೆದ ವರ್ಷವೂ ಪ್ರವೇಶ ಮಿತಿ ಇದ್ದ ಕಾರಣ ಯಾತ್ರೆ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ.ಈ ಬಾರಿಯೂ ಷರತ್ತು ವಿಧಿಸಿರುವುದರಿಂದ ಹೆಚ್ಚಿನ ಸಂಖ್ಯೆಯ ಭಕ್ತರಿಗೆ ಅವಕಾಶ ಸಿಗದು. ನಿರ್ಬಂಧಗಳ ಬಗ್ಗೆ ರಾಜ್ಯದ ಅಯ್ಯಪ್ಪ ದೇವಾಲಯಗಳಲ್ಲಿ ಭಕ್ತರಿಗೆ ಮಾಹಿತಿ ನೀಡಲಾಗುತ್ತಿದೆ. ಆನ್ಲೈನ್ ಬುಕ್ಕಿಂಗ್ ಮಾಡದೆ ಯಾತ್ರೆ ಕೈಗೊಳ್ಳಬೇಡಿ. ಇರುಮುಡಿ ಕಟ್ಟುವ ಮುನ್ನ ಆರ್ಟಿಪಿಸಿಆರ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಸೂಚನೆ ನೀಡಲಾಗುತ್ತಿದೆ. ಎರಡೂ ಡೋಸ್ ಲಸಿಕೆ ಹಾಕಿಸಿಕೊಂಡಿರುವವರಿಗೆ ಮಾತ್ರ ಇರುಮುಡಿ ಕಟ್ಟಲು ಕೆಲವು ದೇವಾಲಯಗಳಲ್ಲಿ ಸೂಚನೆ ನೀಡಲಾಗಿದೆ
ಈ ಬಾರಿ ಪಂಪಾ ನದಿಯಲ್ಲಿ ಸ್ನಾನಕ್ಕೆ ಅವಕಾಶ ನೀಡಲಾಗಿದೆ. ಪುಲಿಮೇಡು ಮತ್ತು ಎರಿಮೇಲಿ ಮೂಲಕ ಪ್ರವೇಶ ನಿರ್ಬಂಧಿಸಲಾಗಿದ್ದು, ಪಂಪಾ ಮಾರ್ಗದ ಮೂಲಕ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಸನ್ನಿಧಾನದಲ್ಲಿ ಉಳಿಯುವಂತಿಲ್ಲ. ದರ್ಶನ ಮಾಡಿದವರಿಗೆ ಅಭಿಷೇಕದ ತುಪ್ಪ ವಿತರಿಸಲು ವಿಶೇಷ ವ್ಯವಸ್ಥೆ ಕೈಗೊಳ್ಳಲಾಗಿದೆ.
ಇದನ್ನೂ ಓದಿ:ವೀಕ್ಎಂಡ್ ಹುಮಸ್ಸಿನಲ್ಲಿದ್ದ ಜನರಿಗೆ ಕಿರಿಕಿರಿ ಉಂಟು ಮಾಡಿದ ಮಳೆ
ನ. 16ರಿಂದ ಪ್ರಾರಂಭ
ಈ ಬಾರಿ ಮಂಡಲ ಪೂಜೆ ದರ್ಶನ ನ. 16ರಿಂದ ಪ್ರಾರಂಭವಾಗಿ ಡಿ. 27ರ ವರೆಗೆ ಇರಲಿದೆ. ಬಳಿಕ 2 ದಿನ ದೇಗುಲ ಮುಚ್ಚಿ ಮಕರಜ್ಯೋತಿ ಪೂಜೆಗೆ ಡಿ. 30ರಿಂದ ಮತ್ತೆ ತೆರೆಯಲಾಗುತ್ತದೆ. ಜ. 20ರ ವರೆಗೆ ದರ್ಶನಕ್ಕೆ ಅವಕಾಶ ಇದೆ. ಅಯ್ಯಪ್ಪ ದರ್ಶನಕ್ಕಾಗಿ ದೇವಸ್ವಂ ಮಂಡಳಿಯ ಅಧಿಕೃತ ವೆಬ್ಸೈಟ್ನಲ್ಲಿ ಅ. 17ರಿಂದ 21ರ ವರೆಗೆ ಮತ್ತು ನ. 3ರಿಂದ 31ರ ವರೆಗೆ ಆನ್ಲೈನ್ ಬುಕಿಂಗ್ ಮಾಡಬಹುದಾಗಿದೆ.
ವಂಚನೆಗೆ ಬ್ರೇಕ್
ಕಳೆದ ವರ್ಷ ನಕಲಿ ಪಾಸ್ ನೀಡಿ ವಂಚಿಸಿದ್ದ ಹಿನ್ನೆಲೆಯಲ್ಲಿ ಈ ಬಾರಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳ ಲಾಗಿದೆ. ದೇವಸ್ವಂ ಮಂಡಳಿಯ ಅಧಿಕೃತ ವೆಬ್ಸೈಟ್ನಲ್ಲಿ ಆಧಾರ್ ಕಾರ್ಡ್ ಸಹಿತ ಪ್ರತೀ ಭಕ್ತರ ಸಂಪೂರ್ಣ ಮಾಹಿತಿ ಪಡೆದು ಇ-ಟಿಕೆಟ್ ನೀಡಲಾಗುತ್ತದೆ. ಅದನ್ನು ಡೌನ್ಲೋಡ್ ಮಾಡಿ ಪಂಪಾ ಪ್ರವೇಶ ಸಂದರ್ಭದಲ್ಲೇ ತೋರಿಸಬೇಕು. ಅಲ್ಲಿ ಮತ್ತೂಂದು ಅಧಿಕೃತ ಪಾಸ್ ನೀಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ