ಎಲ್ಲರನ್ನೂ ತೃಪ್ತಿಪಡಿಸಲು ಸಾಧ್ಯವಿಲ್ಲ, ಪಕ್ಷದ ತೀರ್ಮಾನಕ್ಕೆ ಬದ್ದರಾಗಿರಬೇಕು:ಬಿ.ಸಿ.ಪಾಟೀಲ್
Team Udayavani, Jun 14, 2021, 12:06 PM IST
ಬೆಂಗಳೂರು: ಒಂದು ಮನೆಯಲ್ಲಿ ಹತ್ತು ಮಕ್ಕಳು ಇರುತ್ತಾರೆ, ಹಾಗಂತ ಎಲ್ಲರನ್ನೂ ತೃಪ್ತಿ ಪಡಿಸುವುದು ಸಾಧ್ಯವಿಲ್ಲ ಎಂದು ಪಕ್ಷದೊಳಗಿನ ಅಸಮಾಧಾನದ ಕುರಿತು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂ.16 ರಂದು ಸಂಜೆ ಐದು ಗಂಟೆಗೆ ಸಭೆಯಿದೆ .ನೀವೆಲ್ಲರೂ ಬರಬೇಕೆಂದು ನಮ್ಮನ್ನು ಕರೆದಿದ್ದಾರೆ. ಅಲ್ಲಿ ಏನೇನು ಚರ್ಚೆಯಾಗುತ್ತೋ ಗೊತ್ತಿಲ್ಲ ಎಂದರು.
ಸಿಎಂ ಬದಲಾವಣೆ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ. ಎರಡು ವರ್ಷ ಯಡಿಯೂರಪ್ಪನವರೇ ಮುಂದುವರಿಯುತ್ತಾರೆ. ಇದನ್ನು ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯಾಧ್ಯಕ್ಷ ನಳಿನ ಕಟೀಲ್ ಸ್ಪಷ್ಟಪಡಿಸಿದ್ದಾರೆ ಎಂದರು.
ಇದನ್ನೂ ಓದಿ:ನಟ ಸಂಚಾರಿ ವಿಜಯ್ ಪೂರ್ಣ ಚಿಕಿತ್ಸಾ ವೆಚ್ಚ ಭರಿಸಲು ಮುಂದಾದ ಡಿಸಿಎಂ ಅಶ್ವತ್ಥನಾರಾಯಣ
ಕೆಲವು ಸಚಿವರ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು, ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರಬೇಕು. ನಾನು ಅಂತ ಅಲ್ಲ, ದೊಡ್ಡವರು ಯಾರೂ ಇಲ್ಲ. ಎಲ್ಲರೂ ಪಕ್ಷದ ತೀರ್ಮಾನಕ್ಕೆ ಬದ್ದರಾಗಿರಬೇಕು ಎಂದು ಬಿ.ಸಿ.ಪಾಟೀಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ