ಕೋವಿಡ್ ಲಸಿಕೆ ಕೊರತೆ ಬಗ್ಗೆ ಕೇಳಿದ್ದಕ್ಕೆ ಮಾಧ್ಯಮದವರ ವಿರುದ್ಧ ಗರಂ ಅದ ಸಿಎಂ!
Team Udayavani, Apr 30, 2021, 5:18 PM IST
ಬೆಂಗಳೂರು: ದೇಶದಲ್ಲಿ ಮೇ.1ರಿಂದ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಸರ್ಕಾರ ಘೋಷಿಸಿತ್ತು. ಆದರೆ ಇದೀಗ ಲಸಿಕೆ ಕೊರತೆಯಿಂದ ಮೇ.1ರಿಂದ ಲಸಿಕೆ ನೀಡಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಆದರೆ ಈ ಬಗ್ಗೆ ಮಾಧ್ಯಮದವರು ಸಿಎಂ ಯಡಿಯೂರಪ್ಪ ಬಳಿ ಪ್ರಶ್ನಿಸಿದರೆ, ಸಿಎಂ ಗರಂ ಆಗಿದ್ದಾರೆ.
ಲಸಿಕೆ ವಿಳಂಬ ವಿಚಾರವಾಗು ಪ್ರಶ್ನೆ ಕೇಳುತ್ತಲೇ ಮಾಧ್ಯಮಗಳ ವಿರುದ್ಧ ಸಿಎಂ ಕೆಂಡಮಂಡಲವಾದರು. ಎಲ್ಲವೂ ಸರಿಹೋಗುತ್ತದೆ, ಆದರೆ ಅನವಶ್ಯಕವಾಗಿ ನೀವು ಮೋದಿ ಹೆಸರು ತರಬೇಡಿ ಎಂದ ಯಡಿಯೂರಪ್ಪ ಹೇಳಿದರು.
ಲಸಿಕೆಗಳು ನಮಗೆ ಪೂರೈಕೆಯಾಗಿಲ್ಲ. ಲಸಿಕೆಗಳು ಪೂರೈಕೆಯಾದ ಕೂಡಲೇ ಲಸಿಕೆ ಹಾಕುತ್ತೇವೆ. ಲಸಿಕೆಗಳ ಪೂರೈಕೆ ವಿಳಂಬವಾಗುತ್ತಿದೆ. ಸಮಯದಲ್ಲಿ ಸಿಗುತ್ತದೆ ಎಂದುಕೊಂಡಿದ್ದೆವು ಆದರೆ ಲಸಿಕೆ ಸಿಗುವುದು ವಿಳಂಬವಾಗಿದೆ. ಇದರಲ್ಲಿ ವೈಫಲ್ಯದ ಪ್ರಶ್ನೆ ಬರುವುದಿಲ್ಲ. ಪ್ರಧಾನಿಯವರನ್ನು ಇದರಲ್ಲಿ ಮಧ್ಯೆ ತರಬೇಡಿ. ಕೇಂದ್ರ ಸರ್ಕಾರ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಕೆಲವೇ ದಿನಗಳಲ್ಲಿ ಎಲ್ಲವೂ ಸರಿ ಹೋಗುವ ಭರವಸೆಯಿದೆ ಎಂದರು.
ಇದನ್ನೂ ಓದಿ:ಬಿಜೆಪಿ ಸರ್ಕಾರದ ವಿರುದ್ಧ ಪ್ರಜ್ಞಾವಂತ ಮತದಾರರು ಎದ್ದು ನಿಂತಿದ್ದಾರೆ: ಸಲೀಂ ಅಹಮದ್
ಇಡೀ ದೇಶ ಕೋವಿಡ್ ಎದುರಿಸುತ್ತಿದೆ. ಈ ಸಂದರ್ಭದಲ್ಲಿ ತಂತ್ರಜ್ಞಾನ ಮೂಲಕ ತುರ್ತಾಗಿ ಕೋವಿಡ್ ಔಷಧಿ ತಲುಪಿಸಲು ಡ್ರೋಣ್ ಗಳು ಕಾರ್ಯಾಚರಣೆಗೆ ಇಳಿದಿವೆ. ಸುಮಾರು 45 ಕೆಜಿ ಸಾಮಾಗ್ರಿ ತುಂಬಿ ಹಾರುವ ಡ್ರೋಣ್ ಗಳು ನಮ್ಮ ರಾಜ್ಯದಲ್ಲೂ ಸೇವೆ ಕೊಡುತ್ತಿವೆ. ಗರುಡ ಸಂಸ್ಥೆಯವರು ಈ ಡ್ರೋಣ್ ಸೇವೆ ಉಚಿತವಾಗಿ ಕೊಡುತ್ತಿದಾರೆ. ಸ್ಯಾನಿಟೈಸಿಂಗ್ ಅನ್ನೂ ಡ್ರೋಣ್ ಮೂಲಕ ಮಾಡಬಹುದು ಎಂದು ಸಿಎಂ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ