ಬಿಜೆಪಿ ಸರಕಾರಕ್ಕೆ ಒಂದು ವರ್ಷ: ಸವಾಲಿನ ನಡುವೆಯೂ ಸಾಧನೆಯ ಛಲ

ಆರ್ಥಿಕತೆ ಕುಸಿಯದಂತೆ ನೋಡಿಕೊಂಡ ಮುಖ್ಯಮಂತ್ರಿ ಯಡಿಯೂರಪ್ಪ ಸಾಧನೆಗಿಂತ ಸವಾಲು ನಿಭಾಯಿಸಿದ್ದೇ ಜಾಸ್ತಿ

Team Udayavani, Jul 25, 2020, 6:21 AM IST

ಬಿಜೆಪಿ ಸರಕಾರಕ್ಕೆ ಒಂದು ವರ್ಷ: ಸವಾಲಿನ ನಡುವೆಯೂ ಸಾಧನೆಯ ಛಲ

ಬೆಂಗಳೂರು: ಪ್ರವಾಹದಿಂದ ಕೋವಿಡ್ 19 ನವರೆಗೆ ಸಾಲು ಸಾಲು ಸವಾಲುಗಳನ್ನು ಎದುರಿಸಿದ ರಾಜ್ಯ ಬಿಜೆಪಿ ಸರಕಾರ ಒಂದು ವರ್ಷ ಪೂರೈಸುತ್ತಿದೆ.

ಸರಕಾರ ಭದ್ರಪಡಿಸಿಕೊಂಡ ತೃಪ್ತಿಯ ಜತೆಗೆ ಆರ್ಥಿಕ ಇತಿಮಿತಿಯಲ್ಲಿ ಅಭಿವೃದ್ಧಿಗೆ ಚಾಲನೆ ಸಿಕ್ಕಿದರೂ ಕೋವಿಡ್ 19 ಮಾತ್ರ ಸದ್ಯ ಎಲ್ಲದಕ್ಕೂ ಸವಾಲಿನಂತೆ ನಿಂತಿದೆ.

ಸಿಎಂ ಯಡಿಯೂರಪ್ಪ ಅವರು ಒಂದು ವರ್ಷದಲ್ಲಿ ಎದುರಿಸಿದ ಸಮಸ್ಯೆಗಳು ಒಂದೆರಡಲ್ಲ.

ಪ್ರವಾಹದಿಂದ ಉಪ ಚುನಾವಣೆಯ ತನಕ; ಆರ್ಥಿಕ ಸಂಕಷ್ಟದಿಂದ ಕೋವಿಡ್ 19ವರೆಗೆ ಧುತ್ತನೆ ಬಂದೆರಗಿದ ಎಲ್ಲ ಸವಾಲುಗಳನ್ನು ಸಮರ್ಥವಾಗಿ ಎದುರಿಸಿದ್ದಾರೆ.

ವರ್ಷ ತುಂಬುವ ಸಂದರ್ಭದಲ್ಲೇ ಕೋವಿಡ್ 19 ಪರಿಕರಗಳ ಖರೀದಿ ಅವ್ಯವಹಾರ ಆರೋಪ, ಕೋವಿಡ್ 19 ಪ್ರಕರಣಗಳ ಏರಿಕೆಯು ಸಂಭ್ರಮಕ್ಕೆ ತಣ್ಣೀರು ಎರಚಿದೆ.

ಒಂದು ವರ್ಷದಲ್ಲಿ ಬಿಎಸ್‌ವೈ ಅವರ ಹಾದಿ ಸುಗಮವಾಗಿರಲಿಲ್ಲ. ಉಪ ಚುನಾವಣೆ ಎದುರಿಸಿ ಸರಕಾರ ಭದ್ರಪಡಿಸಿಕೊಳ್ಳುವುದು, ಸರಕಾರ ರಚನೆಯಾಗಲು ಕಾರಣರಾದವರಿಗೆ ಋಣ ಸಂದಾಯದ ಹೊಣೆ, ಪ್ರವಾಹ, ಪೌರತ್ವ ತಿದ್ದುಪಡಿ ಕಾಯ್ದೆ ವಿವಾದ, ಕೋವಿಡ್ 19ಗಳನ್ನು ನಿಭಾಯಿಸಬೇಕಾಯಿತು. ವಲಸಿಗರು ಮತ್ತು ಮೂಲ ಬಿಜೆಪಿಗರೊಂದಿಗೆ ಹೊಂದಾಣಿಕೆ ಸಾಧಿಸಬೇಕಾಯಿತು.

ಕೋವಿಡ್ 19 ಬಿಡುವು ಕೊಟ್ಟರೆ ಮುಂದಿನ 32 ತಿಂಗಳಲ್ಲಿ ಅಭಿವೃದ್ಧಿಯ ನೀಲನಕ್ಷೆಯೊಂದಿಗೆ ಮುನ್ನಡೆಯುವ ಮತ್ತೂಂದು ಸವಾಲು ಸಿಎಂ ಮುಂದಿದೆ. ಸಂಕಷ್ಟದ ನಡುವೆಯೂ ಆರ್ಥಿಕತೆ ತೀರಾ ಕುಸಿಯದಂತೆ ನೋಡಿಕೊಂಡು, 4 ತಿಂಗಳು ಆರ್ಥಿಕತೆ ಸ್ಥಗಿತಗೊಂಡರೂ ಸರಕಾರಿ ನೌಕರರಿಗೆ ವೇತನ ಕಡಿತ ಮಾಡದೆ ನಿಭಾಯಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.

ಸವಾಲುಗಳ ಸರಮಾಲೆ
ಕಳೆದ ವರ್ಷ ಜುಲೈ 26ರಂದು ಯಡಿಯೂರಪ್ಪ ಅಧಿಕಾರ ವಹಿಸಿಕೊಂಡ ಒಂದೇ ವಾರದಲ್ಲಿ ಉತ್ತರ ಕರ್ನಾಟಕದ ಪ್ರವಾಹ ದಿಢೀರ್‌ ಆತಂಕ ತಂದೊಡ್ಡಿತು. ಆಗ ಯಡಿಯೂರಪ್ಪ ಅವರು ಏಕಾಂಗಿಯಾಗಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರಲ್ಲಿ ಧೈರ್ಯ ತುಂಬಿದರು.

ಪ್ರವಾಹದಿಂದ ಉಂಟಾದ ಸುಮಾರು 35 ಸಾವಿರ ಕೋಟಿ ರೂ. ನಷ್ಟ ಮೊದಲ ಆಘಾತವೇ ಆಗಿತ್ತು. ರಾಜ್ಯ ಸರಕಾರದಿಂದಲೇ ಪರಿಹಾರ ಕಾರ್ಯ ಕೈಗೊಳ್ಳುವುದರ ಜತೆಗೆ ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ದಾಖಲೆಯ ತಲಾ ಐದು ಲಕ್ಷ ರೂ. ಪರಿಹಾರ ಘೋಷಿಸಿದರು.

ಉಪ ಚುನಾವಣೆ ಮೂಲಕ ಸರಕಾರ ಭದ್ರ
ಪ್ರವಾಹದ ಸವಾಲು ಮುಗಿಯುತ್ತಿದ್ದಂತೆ ಹದಿನೈದು ಕ್ಷೇತ್ರಗಳ ಉಪ ಚುನಾವಣೆ ಎದುರಾಯಿತು. ಸತ್ವ ಪರೀಕ್ಷೆಯಾಗಿದ್ದ ಅದರಲ್ಲಿ ಗೆಲುವು ಸಾಧಿಸಿದ ಯಡಿಯೂರಪ್ಪ 12 ಕ್ಷೇತ್ರ ಗೆಲ್ಲುವ ಮೂಲಕ ಸರಕಾರ ಭದ್ರಪಡಿಸಿಕೊಂಡರು.ಇದಕ್ಕೆ ಮುನ್ನ ರಾಜೀನಾಮೆ ನೀಡಿದ ಶಾಸಕರು ಅನರ್ಹರಾಗಿದ್ದು, ಬಳಿಕ ಸುಪ್ರೀಂಕೋರ್ಟ್‌ ಮೆಟ್ಟಿಲೇರಿ, ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಪಡೆದುಕೊಂಡರು.

ಉಪ ಚುನಾವಣೆ ಮುಗಿಯುತ್ತಿದ್ದಂತೆ ಪೌರತ್ವ ತಿದ್ದುಪಡಿ ಕಾಯ್ದೆ ವಿವಾದದ ಹಿನ್ನೆಲೆಯಲ್ಲಿ ರಾಜ್ಯದ ಕೆಲವೆಡೆ ನಡೆದ ಅಹಿತಕರ ಘಟನೆಗಳು ಸರಕಾರಕ್ಕೆ ತಲೆನೋವಾಯಿತು. ಆ ಸಂದರ್ಭದಲ್ಲಿ ಮಂಗಳೂರಿನಲ್ಲಿ ನಡೆದ ಗೋಲಿಬಾರ್‌ ಕಪ್ಪು ಚುಕ್ಕೆಯಾಗಿಯೂ ಪರಿಣಮಿಸಿತು.

ಕೋವಿಡ್ 19 ಗ್ರಹಣ
ಮಾರ್ಚ್‌ನಲ್ಲಿ ಬಜೆಟ್‌ ಮಂಡಿಸಿದ ಸಿಎಂ ಹಲವು ಯೋಜನೆ ಘೋಷಿಸಿದರಾದರೂ ಮಾರ್ಚ್‌ ಮೊದಲ ವಾರದಲ್ಲಿ ಜಗತ್ತನ್ನು ತಲ್ಲಣಗೊಳಿಸಿದ ಕೋವಿಡ್ 19 ರಾಜ್ಯವನ್ನೂ ವ್ಯಾಪಿಸಿ ನಾಲ್ಕು ತಿಂಗಳು ಇಡೀ ರಾಜ್ಯವನ್ನೇ ಅಲುಗಾಡಿಸಿತು. ಆರ್ಥಿಕ ಚಟುವಟಿಕೆಗಳು ಸ್ತಬ್ಧಗೊಂಡು ಅಭಿವೃದ್ಧಿ ಕಾಮಗಾರಿಗಳಿಗೂ ‘ಗ್ರಹಣ’ ಹಿಡಿದಂತಾಯಿತು. ಒಟ್ಟಾರೆ ಒಂದು ವರ್ಷದಲ್ಲಿ ಬಿಎಸ್‌ವೈ ಸರಕಾರ ಸಾಧನೆಗಿಂತ ಸವಾಲು ನಿಭಾಯಿಸಿದ್ದೇ ಹೆಚ್ಚು.

ಆರ್ಥಿಕ ಮುಗ್ಗಟ್ಟು
ಪ್ರವಾಹ ಮತ್ತು ಕೋವಿಡ್ 19 ರಾಜ್ಯದ ಆರ್ಥಿಕ ಪರಿಸ್ಥಿತಿ ಮೇಲೆ ಪರಿಣಾಮ ಬೀರಿ ಅಭಿವೃದ್ಧಿ ಕಾರ್ಯಗಳಿಗೆ ತಡೆಯಾಗಿದೆ. ಮೂರು ತಿಂಗಳು ಆರ್ಥಿಕ ಚಟುವಟಿಕೆ ಸ್ಥಗಿತಗೊಂಡಿದ್ದರಿಂದ ಸುಮಾರು 20 ಸಾ.ಕೋಟಿ ರೂ. ಆದಾಯ ಸಂಗ್ರಹವಾಗದೆ ಅಭಿವೃದ್ಧಿ ಕಾಮಗಾರಿ ಮೇಲೆ ಪರಿಣಾಮ ಬೀರಿದೆ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.