ಪಿಎಂ ಆವಾಸ್ ಯೋಜನೆ, ಪಿಎಂ ಸ್ವನಿಧಿ ಯೋಜನೆ: ತ್ವರಿತ ಸಾಲ ವಿತರಣೆಗೆ ಸಿಎಂ ಸೂಚನೆ


Team Udayavani, Feb 11, 2021, 2:04 PM IST

ಪಿಎಂ ಆವಾಸ್ ಯೋಜನೆ, ಪಿಎಂ ಸ್ವನಿಧಿ ಯೋಜನೆ: ತ್ವರಿತ ಸಾಲ ವಿತರಣೆಗೆ ಸಿಎಂ ಸೂಚನೆ

ಬೆಂಗಳೂರು: ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನಮಂತ್ರಿ ಸ್ವನಿಧಿ ಯೋಜನೆಗಳಡಿ ಬ್ಯಾಂಕುಗಳು ವಿಳಂಬ ಧೋರಣೆ ಅನುಸರಿಸದೆ ತ್ವರಿತವಾಗಿ ಸಾಲ ವಿತರಣೆ ಮಾಡಲು ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನಮಂತ್ರಿ ಸ್ವ ನಿಧಿ ಯೋಜನೆಗಳ ಪ್ರಗತಿ ಕುರಿತು ಬ್ಯಾಂಕರುಗಳೊಂದಿಗೆ ಚರ್ಚಿಸಿದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಗಳು ಪ್ರಧಾನಿ ನರೇಂದ್ರ ಮೋದಿಯವರು ಬಡವರಿಗಾಗಿ ಜಾರಿಗೊಳಿಸಿರುವ ಮಹತ್ವಾಕಾಂಕ್ಷೆಯ ಯೋಜನೆಗಳು. ಇವುಗಳ ಅನುಷ್ಠಾನಕ್ಕೆ ಬ್ಯಾಂಕರುಗಳು ಆದ್ಯತೆ ನೀಡಬೇಕು. ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಈ ಎರಡೂ ಯೋಜನೆಗಳ ಪ್ರಗತಿ ಕುಂಠಿತವಾಗಿದೆ. ಈ ಯೋಜನೆಗಳಡಿ ಸಾಲ ಮಂಜೂರಾತಿ ವಿಳಂಬವಾಗುತ್ತಿರುವುದು ಗಮನಕ್ಕೆ ಬಂದಿದ್ದು, ಈ ಬಗ್ಗೆ ಆದ್ಯ ಗಮನ ಹರಿಸಬೇಕು ಎಂದರು.

ಇದನ್ನೂ ಓದಿ:ಸಮುದಾಯಗಳ ಮೀಸಲು ಬೇಡಿಕೆ ಸರ್ಕಾರ ಕಾನೂನಾತ್ಮಕ ಕ್ರಮ: ಕೋಟ ಶ್ರೀನಿವಾಸ ಪೂಜಾರಿ

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು 15 ದಿನಗಳೊಳಗೆ ಆಯಾ ಜಿಲ್ಲೆಗಳ ಲೀಡ್ ಬ್ಯಾಂಕ್ ಗಳಿಗೆ ಸಲ್ಲಿಸಲಾಗುವುದು. ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಅವುಗಳನ್ನು ವಿವಿಧ ಬ್ಯಾಂಕುಗಳಿಗೆ ಕಳುಹಿಸಿ, ಮಂಜೂರಾತಿ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಪ್ರಧಾನಮಂತ್ರಿ ಆವಾಸ್ ಯೋಜನೆಯ ಸಿಎಲ್ಎಸ್ಎಸ್ ಯೋಜನೆಯಡಿ ರಾಜ್ಯದಲ್ಲಿ 53,695 ಅರ್ಜಿಗಳಿಗೆ ಮಾತ್ರ ಮಂಜೂರಾತಿ ದೊರೆತಿದ್ದು, ಇತರೆ ರಾಜ್ಯಗಳಿಗೆ ಹೋಲಿಸಿದಾಗ, ನಮ್ಮ ರಾಜ್ಯ ಹಿಂದುಳಿದಿದೆ. ಅದೇ ರೀತಿ ಪಾಲುದಾರಿಕೆಯಲ್ಲಿ ಕೈಗೆಟಕುವ ವಸತಿ ಯೋಜನೆಯಡಿ ಮಂಜೂರಾಗಿರುವ 3,46,414 ಪ್ರಕರಣಗಳ ಪೈಕಿ 1,16,168 ಪ್ರಕರಣಗಳಿಗೆ ಕಾರ್ಯಾದೇಶವನ್ನು ನೀಡಲಾಗಿದ್ದು, ಕೇವಲ 19,658 ಮನೆಗಳು ಮಾತ್ರ ಪೂರ್ಣಗೊಂಡಿವೆ.  ಈ ಯೋಜನೆಯಡಿ ಬ್ಯಾಂಕಿನಿಂದ ನೀಡುವ ಸಾಲ ಪ್ರಕ್ರಿಯೆ ಪ್ರಾರಂಭ ಆಗದಿರುವುದು ಯೋಜನೆಯ ಪ್ರಗತಿಗೆ ಪೂರಕವಾಗಿಲ್ಲ ಎಂದು ಮುಖ್ಯಮಂತ್ರಿಗಳು ಕಳವಳ ವ್ಯಕ್ತಪಡಿಸಿದರು.

ಇದನ್ನೂ ಓದಿ: “ನಮಗೆ ರಾಜಕೀಯ ಮತ್ತು ಜೀವನದಲ್ಲಿ ಗಾಂಧಿ ನಡೆಗಳು ಆದರ್ಶ” : ಪ್ರಧಾನಿ ಮೋದಿ

ಈ ವಸತಿ ಯೋಜನೆ ನಗರದ ಬಡವರಿಗೆ ಸೂರು ಕಲ್ಪಿಸುವ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ರಾಜ್ಯದಲ್ಲಿ ಈ ಯೋಜನೆಯನ್ನು ಯಶಸ್ವಿಗೊಳಿಸಲು ಎಲ್ಲಾ ಬ್ಯಾಂಕುಗಳು ಹಾಗೂ ಅನುಷ್ಠಾನ ಸಂಸ್ಥೆಗಳು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಬೇಕು ಎಂದು ಸಲಹೆ ನೀಡಿದರು.

ಪ್ರಧಾನಮಂತ್ರಿ ಸ್ವನಿಧಿ ಯೋಜನೆಯು ಜುಲೈ 2020 ರಿಂದ ಜಾರಿಗೆ ಬಂದಿದ್ದು, ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದಿಂದ ಅನುದಾನ ಬಿಡುಗಡೆಯಾಗಲಿದೆ.

ಪಿಎಂ. ಸ್ವನಿಧಿ ಯೋಜನೆಯಡಿ ಬೀದಿ ವ್ಯಾಪಾರಿಗಳಿಗೆ 10 ಸಾವಿರ ರೂ.ಗಳ ದುಡಿಯುವ ಬಂಡವಾಳ ಸೌಲಭ್ಯದೊಂದಿಗೆ ನಿಯಮಿತ ಪಾವತಿಗೆ ಶೇಕಡಾ 7ರ ಬಡ್ಡಿ ದರದಂತಹ ಪ್ರೋತ್ಸಾಹಕಗಳನ್ನು ಹಾಗೂ ಡಿಜಿಟಲ್ ವಹಿವಾಟಿಗೆ ಪುರಸ್ಕಾರವನ್ನೂ ನೀಡಲಾಗುವುದು.

ಈವರೆಗೆ 2,24,368 ಅರ್ಜಿಗಳನ್ನು ಯೋಜನೆಯಡಿ ಸ್ವೀಕರಿಸಲಾಗಿದ್ದು, ಕೇವಲ 66,423 ಅರ್ಜಿಗಳಿಗೆ ಮಂಜೂರಾತಿ ದೊರೆತಿದೆ. ರಾಜ್ಯದ ಬ್ಯಾಂಕುಗಳು ಶೇ 30 ರಷ್ಟು ಅರ್ಜಿಗಳನ್ನು ಮಾತ್ರ ವಿಲೇವಾರಿ ಮಾಡಿವೆ. ಕೋವಿಡ್-19 ಸೋಂಕಿನಿಂದ ತತ್ತರಿಸಿರುವ ಬಡಜನರಿಗೆ ಈ ಯೋಜನೆ ಪ್ರಯೋಜನಕಾರಿಯಾಗಲಿದ್ದು, ಬಾಕಿ ಇರುವ ಎಲ್ಲ ಅರ್ಜಿಗಳನ್ನು ಬ್ಯಾಂಕುಗಳು ಅತಿ ಶೀಘ್ರವಾಗಿ ಮಂಜೂರಾತಿ ನೀಡಿ ವಿಲೇವಾರಿ ಮಾಡಬೇಕೆಂದು ಸಿಎಂ ಸೂಚಿಸಿದರು.

ಪಿಎಂ ಸ್ವನಿಧಿ ಯೋಜನೆಯಡಿ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡುವ ಯೋಜನೆಯಲ್ಲಿ ವಿವಿಧ ನಗರಗಳಲ್ಲಿ ಸಾಲ ಮಂಜೂರಾದರೂ ವಿತರಣೆಯಾಗದಿರುವ ಹಿನ್ನೆಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಅನುಕೂಲವಾಗುವ ವೇಳಾಪಟ್ಟಿ ನಿಗದಿಪಡಿಸಿ, ಸಾಲ ವಿತರಣೆ ಮಾಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಟಾಪ್ ನ್ಯೂಸ್

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.