ನಿರ್ಬಂಧಗಳು ಜಾರಿಯಾದ ಬಳಿಕ ಸೋಂಕು ಪ್ರಕರಣಗಳಲ್ಲಿ ಇಳಿಕೆ: ಸಿಎಂ ಯಡಿಯೂರಪ್ಪ


Team Udayavani, May 13, 2021, 5:26 PM IST

b-s-yed

ಬೆಂಗಳೂರು: ಬೆಂಗಳೂರು ಮತ್ತು ರಾಜ್ಯದಲ್ಲಿ ನಿರ್ಬಂಧಗಳು ಜಾರಿಯಾದ ನಂತರ ಸೋಂಕು ಪ್ರಕರಣಗಳು ಕಡಿಮೆಯಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದ ಕೋವಿಡ್ ನಿರ್ವಹಣೆಯ ಕುರಿತಂತೆ ಮಾಹಿತಿ ನೀಡಿದರು.

ಕೊವಿಡ್ ಸೋಂಕು ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಏಪ್ರಿಲ್ 24 ರಿಂದ ಕೆಲವು ನಿರ್ಬಂಧಗಳನ್ನು ಹೇರಲಾಗಿತ್ತು.ಅಲ್ಲದೆ, ಮೇ 10 ರಿಂದ ಇನ್ನಷ್ಟು ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿ ಮೇ 5 ರಂದು ಗರಿಷ್ಠ 50112 ಪ್ರಕರಣಗಳು ವರದಿಯಾಗಿದ್ದು, ಕಠಿಣ ಕ್ರಮದಿಂದ 39900 ಕ್ಕೆಇಳಿದಿದೆ. ಇದು ಸಮಾಧಾನದ ಸಂಗತಿ. ನಿರ್ಬಂಧದಿಂದ ಪರಿಸ್ಥಿತಿ ಸುಧಾರಿಸುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕಳೆದ ವರ್ಷಕ್ಕಿಂತ ಐಸಿಯು ಬೆಡ್, ಆಕ್ಸಿಜನ್ ಬೆಡ್, ವೆಂಟಿಲೇಟರ್ ಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಳ ಮಾಡಲಾಗಿದೆ. ಕಳೆದ ವರ್ಷ ಮಾರ್ಚ್‌ನ‌ಲ್ಲಿ ಆರೋಗ್ಯ ಇಲಾಖೆಯ ಆಸ್ಪತ್ರೆಗಳಲ್ಲಿ 1970 ಆಕ್ಸಿನೇಟೆಡ್ ಬೆಡ್‌ಗಳು, 444 ಐಸಿಯುಗಳು, 676 ವೆಂಟಿಲೇಟರ್ ಗಳಿದ್ದವು. ಪ್ರಸ್ತುತ 24000 ಆಕ್ಸಿನೇಟೆಡ್ ಬೆಡ್‌ಗಳು, 1185 ಐಸಿಯು ಬೆಡ್‌ಗಳು 2019 ವೆಂಟಿಲೇಟರ್‌ಗಳಿವೆ. ವೈದ್ಯಕೀಯ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ 4700 ರಿಂದ 9708 ಕ್ಕೆ ಹೆಚ್ಚಿಸಲಾಗಿದೆ. ವೆಂಟಿಲೇಟರ್ 348 ರಿಂದ 646 ಕ್ಕೆ ಹೆಚ್ಚಿಸಲಾಗಿದೆ. ಆಸ್ಪತ್ರೆಗಳ ಮೂಲ ಸೌಕರ್ಯ ಹೆಚ್ಚಿಸುವ ಕಾರ್ಯ ಮುಂದುವರೆದಿದೆ. ವೆಂಟಿಲೇಟರ್ ಹಾಗೂ ಇತರ ಸೌಲಭ್ಯ ನಿರಂತರವಾಗಿ ಹೆಚ್ಚಳವಾಗುತ್ತಿವೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ಇದನ್ನೂ ಓದಿ:ಚಿಕಿತ್ಸೆ ಫಲಸದೆ ಮಹಿಳೆ ಸಾವು ಸಂಬಂಧಿಕರಿಂದ ಆಸ್ಪತ್ರೆಯಲ್ಲಿ ಧಾಂದಲೆ

ರಾಜ್ಯದಲ್ಲಿ ಆಕ್ಸಿಜನ್ ಪೂರೈಕೆಗಾಗಿ ಕಾರ್ಯತಂತ್ರ ಮಾಡಿದ್ದೇವೆ.  ಕೇಂದ್ರ ಸರ್ಕಾರವು ರಾಜ್ಯಕ್ಕೆ ಆಮ್ಲಜನಕ ಪೂರೈಕೆಯನ್ನು 965 ಮೆಟ್ರಿಕ್ ಟನ್ ನಿಂದ 1018 ಮೆಟ್ರಿಕ್ ಟನ್ ಗೆ ಹೆಚ್ಚಿಸಿದೆ. ರಾಜ್ಯದಲ್ಲಿಯೇ 750 ಮೆ. ಟನ್. ದೊರೆಯತ್ತಿದೆ. ವಿಶಾಖಪಟ್ಟಣದಿಂದ 30 ಮೆ.ಟನ್ ದೊರೆಯತ್ತಿದೆ. ಇತರ ರಾಜ್ಯಗಳಿಂದ ದೊರೆಯುವ ಆಮ್ಲಜನಕ ಪಡೆಯಲಾಗಿದೆ. ಬಹರೇನ್ ನಿಂದ 40, ಕುವೈತ್‌ನಿಂದ 100, ಜಮ್ಶೆಡ್ ಪುರದಿಂದ ಟ್ರೇನ್ ಮೂಲಕ 120 ಮೆ.ಟನ್ ಆಮ್ಲಜನಕ ತರಲಾಗಿದೆ. ರಾಜ್ಯದಲ್ಲಿಯೂ ಆಮ್ಲಜನಕ ಉತ್ಪಾದನಾ ಸಾಮರ್ಥ್ಯ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಹೇಳಿದರು.

ಸಂಚಾರಿ ಆಕ್ಸಿಲೇಟರ್ ಸೂಕ್ತವಾಗಿ ನೆರವಾಗುತ್ತಿವೆ. 10 ಸಾವಿರದವರೆಗೆ ಆಕ್ಸಿಜನ್ ಸಿಲಿಂಡರ್ ಪಡೆಯಲು ತೀರ್ಮಾನಿಸಲಾಗಿದೆ. 730 ಸಿಲಿಂಡರ್ ಕಳೆದ 10 ದಿನದಲ್ಲಿ ಪಡೆಯಲಾಗಿದೆ. 380 ಕೇಂದ್ರ ಸರ್ಕಾರ ಉಳಿದವರು ವಿದೇಶಗಳಿಂದ ಪಡೆಯಲಾಗಿದೆ. 3000 ಆಕ್ಸಿಜನ್ ಕಾನ್ಸಂಟ್ರೇಟರ್‌ಗಳನ್ನು ಈಗಾಗಲೇ ಹಂಚಿಕೆ ಮಾಡಲಾಗಿದೆ. ಇನ್ನೂ 7 ಸಾವಿರ ಕಾನ್ಸಂಟ್ರೇಟರ್ ಹಂಚಿಕೆ ಮಾಡಲಾಗುವುದು ಎಂದರು.

ಎರಡನೇ ಡೋಸ್ ಗೆ ಆದ್ಯತೆ: ರಾಜ್ಯದಿಂದ ಮೂರು ಕೋಟಿ ಲಸಿಕೆಗೆ ಆದೇಶ ನೀಡಲಾಗಿದೆ. ಎರಡು ಕೋಟಿ ಕೋವಿಶೀಲ್ಡ್ ಮತ್ತು ಒಂದು ಕೋಟಿ ಕೋವ್ಯಾಕ್ಸಿನ್ ಖರೀದಿಗೆ ಆದೇಶ ನೀಡಲಾಗಿದೆ. ಎರಡನೇ ಡೋಸ್ ಪಡೆಯುವವರಿಗೆ ಮೊದಲ ಆದ್ಯತೆ ನೀಡಲಾಗಿದೆ. ಹಾಗಾಗಿ 18ರಿಂದ 44 ವರ್ಷದವರಿಗೆ ಲಸಿಕೆ ನೀಡುವುದನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ಟಾಪ್ ನ್ಯೂಸ್

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.