Mandya ಮುಖಂಡರ ಜತೆಗೆ ಬಿ.ವೈ.ವಿಜಯೇಂದ್ರ ಸಭೆ; ಮುನಿಸು ಮರೆಯುವಂತೆ ಮನವಿ


Team Udayavani, Mar 26, 2024, 8:14 PM IST

Mandya ಮುಖಂಡರ ಜತೆಗೆ ಬಿ.ವೈ.ವಿಜಯೇಂದ್ರ ಸಭೆ; ಮುನಿಸು ಮರೆಯುವಂತೆ ಮನವಿ

ಬೆಂಗಳೂರು : ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟ ಹಿನ್ನೆಲೆಯಲ್ಲಿ ಮುನಿಸಿಕೊಂಡಿರುವ ಜಿಲ್ಲೆಯ ಬಿಜೆಪಿ ಮುಖಂಡರ ಜತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಿದ್ದು, ಮತ್ತೊಮ್ಮೆ ಮೋದಿಗಾಗಿ ಮುನಿಸು ಮರೆಯುವಂತೆ ಮನವಿ ಮಾಡಿದ್ದಾರೆ.

ಖಾಸಗಿ ಹೊಟೇಲ್‌ನಲ್ಲಿ ಮಾಜಿ ಸಚಿವ ನಾರಾಯಣಗೌಡ, ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ, ಸಚ್ಚಿದಾನಂದ ಸೇರಿದಂತೆ ಪ್ರಮುಖ ನಾಯಕರ ಜತೆಗೆ ವಿಜಯೇಂದ್ರ ಚರ್ಚೆ ನಡೆಸಿದ್ದು, ಬುಧವಾರ ಮಂಡ್ಯ ಹಾಗೂ ಮೈಸೂರಿನಲ್ಲಿ ಪ್ರಮುಖ ನಾಯಕರನ್ನು ಭೇಟಿ ಮಾಡಿ ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ಪ್ರಯತ್ನ ನಡೆಸಲಿದ್ದಾರೆ.

ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ವಿಜಯೇಂದ್ರ, “ಎರಡು ಪಕ್ಷ ಒಟ್ಟಾಗಿ ಕೆಲಸ ಮಾಡಬೇಕು, ರಾಜ್ಯದ 28ಕ್ಕೆ 28 ಲೋಕಸಭಾ ಕ್ಷೇತ್ರದಲ್ಲಿ ಗೆದ್ದು ನರೇಂದ್ರ ಮೋದಿಯವರನ್ನು ಮತ್ತೆ ಮತ್ತೂಮ್ಮೆ ಪ್ರಧಾನಿಯಾಗಿ ಮಾಡಬೇಕೆಂಬುದು ನಮ್ಮೆಲ್ಲರ ಉದ್ದೇಶ. ನಾರಾಯಣ ಗೌಡರು ಸೇರಿದಂತೆ ಪ್ರತಿಯೊಬ್ಬರ ಜತೆ ಮಾತನಾಡಿದ್ದೇನೆ. ಮಂಡ್ಯದಲ್ಲಿ ತಳಮಟ್ಟದಲ್ಲಿ ಬಿಜೆಪಿಯ ದೊಡ್ಡ ಕಾರ್ಯಕರ್ತರ ಪಡೆಯೇ ಇದೆ. ಅವರೆಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಪಕ್ಷ ಬಿಡುವುದಿಲ್ಲ : ನಾರಾಯಣ ಗೌಡ ಪಕ್ಷ ಬಿಡುತ್ತಾರೆಯೇ ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಿ.ಎಸ್‌.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗುವುದಕ್ಕಾಗಿ ನಾರಾಯಣಗೌಡರು ಎಂಥ ತ್ಯಾಗ ಮಾಡಿದ್ದರು ಎಂಬುದು ನಮಗೆಲ್ಲರಿಗೂ ಗೊತ್ತು. ಯಾವುದೇ ಕಾರಣಕ್ಕೂ ಅವರು ಪಕ್ಷ ತ್ಯಜಿಸುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಎರಡು ದಿನದೊಳಗೆ ಸುಮಲತಾ ಭೇಟಿ
ಸಂಸದೆ ಸುಮಲತಾ ಅಂಬರೀಶ್‌ ಅವರ ಬಗ್ಗೆ ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಅಪಾರ ಗೌರವ ಇಟ್ಟುಕೊಂಡಿದ್ದಾರೆ. ಇನ್ನೆರಡು ದಿನದಲ್ಲಿ ನಾನೇ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ ಎಂದು ವಿಜಯೇಂದ್ರ ತಿಳಿಸಿದ್ದಾರೆ. ಸುಮಲತಾ ಅವರ ಬಗ್ಗೆ ನಮಗೆಲ್ಲರಿಗೂ ಗೌರವವಿದೆ. ಕಳೆದ ಬಾರಿ ಬಿಜೆಪಿಯ ಎಲ್ಲ ಕಾರ್ಯಕರ್ತರು ಅವರ ಬೆಂಬಲಕ್ಕೆ ನಿಂತಿದ್ದರು. ನಾನು ಅವರ ಜತೆ ಮಾತನಾಡುತ್ತೇನೆ ಎಂದು ಹೇಳಿದರು.

ಈ ಸಲ ಸುಮಲತಾ ಅವರಿಗೆ ಟಿಕೆಟ್‌ ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದೆವು, ಅವರು ಸಹ ಟಿಕೆಟ್‌ ತಂದೇ ತರುತ್ತೇನೆ ಎಂಬ ವಿಶ್ವಾಸದಲ್ಲಿದ್ದರು. ಆದರೆ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ. ಸುಮಲತಾ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ಬಳಿಕ ಮುಂದೆ ಏನು ಮಾಡಬೇಕು ಎಂಬುದನ್ನು ತೀರ್ಮಾನಿಸುತ್ತೇನೆ.
-ನಾರಾಯಣಗೌಡ, ಮಾಜಿ ಸಚಿವ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.